ಮತ್ಸ್ಯಸಮೃದ್ಧಿಗಾಗಿ ಮೀನುಗಾರರಿಂದ ಸಮುದ್ರಪೂಜೆ


Team Udayavani, Aug 16, 2019, 5:21 AM IST

1508MLP1

ಮಲ್ಪೆ/ಸುರತ್ಕಲ್‌: ಧಾರಾಕಾರವಾಗಿ ಸುರಿಯುತ್ತಿರುವ ಗಾಳಿಮಳೆಯ ನಡುವೆಯೂ ಗುರುವಾರ ಬೆಳಗ್ಗೆ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ವಡಭಾಂಡೇಶ್ವರ ಸಮುದ್ರತೀರದಲ್ಲಿ ಮತ್ತು ಮಂಗಳೂರು ಏಳುಪಟ್ಣ ಮೊಗವೀರ ಸಂಯುಕ್ತ ಸಭಾದ ಆಶ್ರಯದಲ್ಲಿ ತಣ್ಣೀರುಬಾವಿಯ ಕಡಲ ಕಿನಾರೆಯಲ್ಲಿ ಶ್ರದ್ಧಾ ಭಕ್ತಿಯ ಸಮುದ್ರ ಪೂಜೆ ನೆರವೇರಿತು.

ಮುಂಬರುವ ದಿನಗಳಲ್ಲಿ ಮೀನು ಗಾರಿಕೆಗೆ ಯಾವುದೇ ಅಡ್ಡಿ ಆತಂಕಗಳು ಇಲ್ಲದೆ, ಹೇರಳ ಮತ್ಸ್ಯ ಸಂಪತ್ತು ವೃದ್ಧಿಯಾಗಲಿ, ಯಾವುದೇ ಅವಘಡಗಳು, ಪ್ರಾಕೃತಿಕ ವಿಕೋಪಗಳು ಉಂಟಾಗದಿರಲಿ, ಮೀನುಗಾರರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳು ಇರದೆ ಪರಸ್ಪರ ಏಕತೆ, ಸೌಹಾರ್ದದಿಂದ ಮೀನುಗಾರಿಕೆಯನ್ನು ನಡೆಸುವಂತೆ ಗಂಗಾಮಾತೆ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಹಾಲು, ಸೀಯಾಳ, ಫಲಪುಷ್ಪವನ್ನು ಸಮುದ್ರರಾಜನಿಗೆ ಅರ್ಪಿಸಿದರು.

ಮಲ್ಪೆ: ಬೆಳಗ್ಗೆ ವಡಭಾಂಡ ಬಲರಾಮ ಮತ್ತು ಬೊಬ್ಬರ್ಯ ದೇವರಿಗೆ ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಶೋಭಾಯಾತ್ರೆಯಲ್ಲಿ ತೆರಳಿ ಸಮುದ್ರ ಕಿನಾರೆಗೆ ಬಂದು ಪೂಜೆ ಸಲ್ಲಿಸಲಾಯಿತು.

ಶಾಸಕ ಕೆ. ರಘುಪತಿ ಭಟ್‌, ಮಾಜಿ ಮೀನುಗಾರಿಕೆ ಸಚಿವ ಪ್ರಮೋದ್‌ ಮಧ್ವರಾಜ್‌, ಮೀನುಗಾರ ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಸುವರ್ಣ, ಮೀನುಗಾರಿಕಾ ಉಪನಿರ್ದೇಶಕ ಗಣೇಶ್‌ ಕೆ., ಸಹಾಯಕ ನಿರ್ದೇಶಕ ಶಿವಕುಮಾರ್‌, ಮೀನುಗಾರಿಕಾ ವಿವಿಧ ಸಂಘಟನೆಗಳ ಮುಖಂಡರಾದ ಯಶ್‌ಪಾಲ್‌ ಎ. ಸುವರ್ಣ, ರಮೇಶ್‌ ಕೋಟ್ಯಾನ್‌, ನಾಗರಾಜ್‌ ಬಿ. ಕುಂದರ್‌, ವಿಟuಲ ಕರ್ಕೇರ, ಸುಭಾಸ್‌ ಮೆಂಡನ್‌, ನವೀನ್‌ ಕೋಟ್ಯಾನ್‌, ನಾಗರಾಜ್‌ ಸುವರ್ಣ, ಸತೀಶ್‌ ಕುಂದರ್‌, ಸೋಮಪ್ಪ ಕಾಂಚನ್‌, ಎಚ್‌.ಟಿ. ಕಿದಿಯೂರು, ಗೋಪಾಲ್‌ ಆರ್‌.ಕೆ., ಹರಿಯಪ್ಪ ಕೋಟ್ಯಾನ್‌, ಸುಧಾಕರ ಮೆಂಡನ್‌, ರಮೇಶ್‌ ಕೋಟ್ಯಾನ್‌, ಆನಂದ ಅಮೀನ್‌, ದಯಾನಂದ ಕುಂದರ್‌, ರತ್ನಾಕರ ಸಾಲ್ಯಾನ್‌, ಶಿವಾನಂದ, ರವಿರಾಜ್‌ ಸುವರ್ಣ, ದಯಕರ ವಿ. ಸುವರ್ಣ, ರಾಮಚಂದ್ರ ಕುಂದರ್‌, ಸಾಧು ಸಾಲ್ಯಾನ್‌, ಕಿಶೋರ್‌ ಪಡುಕರೆ, ಕೃಷ್ಣಪ್ಪ ಮರಕಾಲ, ಸುರೇಶ್‌ ಕುಂದರ್‌, ನಾರಾಯಣ ಕರ್ಕೇರ, ಗುಂಡು ಬಿ. ಅಮೀನ್‌, ಕಿಶೋರ್‌ ಡಿ. ಸುವರ್ಣ, ಜನಾರ್ದನ ತಿಂಗಳಾಯ, ಹರಿಶ್ಚಂದ್ರ ಕಾಂಚನ್‌, ರಾಘವ ಜಿ.ಕೆ., ದಯಾನಂದ ಕೆ. ಸುವರ್ಣ, ಜಗನ್ನಾಥ ಸುವರ್ಣ, ಸುಧಾಕರ ಕುಂದರ್‌, ಜಲಜ ಕೋಟ್ಯಾನ್‌, ಬೇಬಿ ಎಚ್‌. ಸಾಲ್ಯಾನ್‌ ಮೊದಲಾದವರು ಪಾಲ್ಗೊಂಡಿದ್ದರು.

ಪಣಂಬೂರು: ತಣ್ಣೀರುಬಾವಿಯ ಕಡಲ ಕಿನಾರೆಯಲ್ಲಿ ಕದ್ರಿ ಸುವರ್ಣ ಕದಳೀ ಮಠದ ರಾಜಾ ಯೋಗಿ ನಿರ್ಮಲನಾಥಜೀ ಮಹಾರಾಜರು ಸಮುದ್ರದ ಮಡಿಲಿಗೆ ಹಾಲು, ಸೀಯಾಳ, ಫಲಪುಷ್ಪಗಳನ್ನು ಅರ್ಪಿಸಿ ಪ್ರಾರ್ಥಿಸಿದರು. ಸಮುದ್ರ ತೀರದಲ್ಲಿ ವಿವಿಧ ಭಜನ ಮಂಡಳಿಗಳಿಂದ ಭಜನೆ, ಸಂಕೀರ್ತನೆ ಬಳಿಕ ವಿಶೇಷ ಪೂಜೆ ನೆರವೇರಿತು.

ಸಮುದ್ರಪೂಜೆಗೆ ಪೂರ್ವದಲ್ಲಿ ಶ್ರೀ ಬ್ರಹ್ಮ ಬಬ್ಬರ್ಯ ಬಂಟ ದೈವಸ್ಥಾನದಿಂದ ತಣ್ಣೀರು ಬಾವಿ ಸಮುದ್ರ ಕಿನಾರೆ ವರೆಗೆ ಶೋಭಾಯಾತ್ರೆ ನಡೆಯಿತು.

ಬೋಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಸೊಸೈಟಿಯ ಉಮೇಶ್‌ ಜೋಗಿ ಕದ್ರಿ, ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ದೇವದಾಸ ಬೋಳೂರು, ಉದ್ಯಮಿ ಪ್ರಸಾದ್‌ ರಾಜ್‌ ಕಾಂಚನ್‌, ಮತೊÕéàದ್ಯಮಿ ಲೋಕನಾಥ ಪುತ್ರನ್‌ ಪಡುಹೊಗೆ, ಮಂಗಳೂರು ಏಳುಪಟ್ಣ ಮೊಗವೀರ ಸಂಯುಕ್ತ ಮಹಾ ಸಭಾದ ಅಧ್ಯಕ್ಷ ಸುಭಾಶ್‌ಚಂದ್ರ ಕಾಂಚನ್‌,ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್‌, ತಾರಾನಾಥ ಪುತ್ರನ್‌, ದೇವಾನಂದ ಗುಜರನ್‌, ನಾರಾಯಣ್‌ ಕೋಟ್ಯಾನ್‌, ಪ್ರಕಾಶ್‌ ಕರ್ಕೇರ, ಮೋಹನ್‌ದಾಸ್‌ ಸುವರ್ಣ, ಜನಾರ್ದನ ಸುವರ್ಣ, ಮೋಹನ ಗುರಿಕಾರ, ಬಾಲಕೃಷ್ಣ ತಿಂಗಳಾಯ ಹೊಗೆಬಜಾರ್‌, ನಾರಾಯಣ ಗುರಿಕಾರ ಬೋಳಾರ, ಶರತ್‌ ತಿಂಗಳಾಯ ಜಪ್ಪು, ಗಂಗಾಧರ ಶ್ರೀಯಾನ್‌, ರಂಜನ್‌ ಕಾಂಚನ್‌, ಮೀನುಗಾರರು ಭಾಗವಹಿಸಿದ್ದರು.ಆರ್‌.ಪಿ. ಬೋಳೂರು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ ಕಾಂಚನ್‌ ಕುದ್ರೋಳಿ ವಂದಿಸಿದರು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.