ಲಭಿಸದ ಸೀಮೆಎಣ್ಣೆ: ನಾಡದೋಣಿ ಮೀನುಗಾರಿಕೆ ಸ್ಥಗಿತ


Team Udayavani, Oct 22, 2018, 11:52 AM IST

1410kdpp7.jpg

ಕುಂದಾಪುರ: ನಾಡದೋಣಿ ಮೀನುಗಾರರಿಗೆ ಸರಕಾರದಿಂದ ಸಿಗಬೇಕಿದ್ದ ಸಬ್ಸಿಡಿ ದರದ ಸೀಮೆ ಎಣ್ಣೆ ಇನ್ನೂ ಕೂಡ ಸಿಕ್ಕಿಲ್ಲ. ಇದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಸುಮಾರು 8,322 ನಾಡದೋಣಿಗಳ 27,118 ಮಂದಿ ಮೀನುಗಾರರು ಸಂಕಷ್ಟದಲ್ಲಿದ್ದಾರೆ. 

ಮತ್ಸಕ್ಷಾಮ, ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆಗೆ ದೊಡ್ಡ ಹೊಡೆತ ಬಿದ್ದಿದ್ದು, ಕರಾವಳಿಯ ನಾಡದೋಣಿ ಮೀನುಗಾರರು ಈಗ ಸಬ್ಸಿಡಿ ದರದಲ್ಲಿ ಸರಕಾರದಿಂದ ಸಿಗಬೇಕಾದ ಸೀಮೆಎಣ್ಣೆ ಕೂಡದ ಸಿಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಸೀಮೆಎಣ್ಣೆಯಿಲ್ಲದೆ ಸ್ಥಗಿತ ನಾಡದೋಣಿ ಮೀರುಗಾರರು ಇಷ್ಟು ದಿನ ಉಳಿದಿದ್ದ ಹಾಗೂ ಸಂಗ್ರಹಿಸಿದ್ದ ಸೀಮೆಎಣ್ಣೆಯನ್ನು ಬಳಸಿ ಮೀನುಗಾರಿಕೆಗೆ ನಡೆಸಿದ್ದು, ಈಗ ಅದೂ ಖಾಲಿಯಾಗುತ್ತಿದೆ. ಈ ಕಾರಣ ಕೆಲವು ನಾಡದೋಣಿಗಳು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ. 

ತಲಾ 300 ಲೀಟರ್‌ ಅಗತ್ಯ
ಸರಕಾರ ಒಂದು ನಾಡದೋಣಿ ಪರ್ಮಿಟ್‌ಗೆ ಪ್ರತಿ ತಿಂಗಳಿಗೆ 300 ಲೀಟರ್‌ ಸೀಮೆಎಣ್ಣೆ ನೀಡಬೇಕು. ಆದರೆ ಈಗ ಉಡುಪಿ ಜಿಲ್ಲೆಯಲ್ಲಿರುವ 4,332 ನಾಡ ದೋಣಿಗಳ ಪೈಕಿ ಕೇವಲ 2,600 ದೋಣಿಗಳಿಗೆ ಮಾತ್ರ 300 ಲೀಟರ್‌ ನೀಡುತ್ತಿದ್ದು, ಬಾಕಿ ಉಳಿದಿದ್ದಕ್ಕೆ 200 ಲೀಟರ್‌ ಅಷ್ಟೇ ಕೊಡಲಾಗುತ್ತಿದೆ. ಪ್ರತಿ ತಿಂಗಳಿಗೆ 1 ಪರ್ಮಿಟ್‌ಗೆ ಕನಿಷ್ಠ 300 ಲೀಟರ್‌ ಆದರೂ ನೀಡಲಿ ಎನ್ನುವುದು ಮೀನುಗಾರರ ಆಗ್ರಹವಾಗಿದೆ. 

27,118 ಮೀನುಗಾರರು 
ಮಂಗಳೂರಿನಿಂದ ಕಾರವಾರದವರೆಗಿನ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 27,118 ಮಂದಿ ನಾಡದೋಣಿ ಮೀನುಗಾರರಿದ್ದಾರೆ. ಈ ಪೈಕಿ ಉಡುಪಿಯಲ್ಲಿ ಅತೀ ಹೆಚ್ಚು ಅಂದರೆ 4,332 ನಾಡದೋಣಿಗಳ 15,148 ಮೀನುಗಾರರಿದ್ದಾರೆ. ದಕ್ಷಿಣ ಕನ್ನಡದ 1,416 ದೋಣಿಗಳಲ್ಲಿ ಸುಮಾರು 4,248 ಮೀನುಗಾರರು ಹಾಗೂ ಉತ್ತರ ಕನ್ನಡದ 2,574 ದೋಣಿಗಳಲ್ಲಿ ಸುಮಾರು 7,722 ಮೀನುಗಾರರು ನಾಡದೋಣಿ ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ.

ಈಗ ದುಡ್ಡು ಕೊಟ್ಟರೂ ಸೀಮೆಎಣ್ಣೆ ಎಲ್ಲಿಯೂ ಸಿಗುತ್ತಿಲ್ಲ. ಈಗ ಸಿಗುತ್ತಿರುವ ಮೀನಿನ ಪ್ರಮಾಣ ನೋಡಿದರೆ ಪೆಟ್ರೋಲ್‌ ದುಬಾರಿಯಾಗಿದೆ. ಸಾಮಾನ್ಯವಾಗಿ ಸೆಪ್ಟಂಬರ್‌ ತಿಂಗಳಲ್ಲಿ ಕೊಡಬೇಕಿತ್ತು. ಆದರೆ ಅದಕ್ಕೆ ಬಜೆಟ್‌ನಲ್ಲಿ ಅನುದಾನವೇ ಇಟ್ಟಿಲ್ಲ. ಅದಲ್ಲದೆ ಇದಕ್ಕಾಗಿಯೇ ಮೀನುಗಾರಿಕಾ ಇಲಾಖೆಯು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 6 ಕೋ.ರೂ. ಅನುದಾನ ಬಿಡುಗಡೆ ಮಾಡಬೇಕು. ಅದನ್ನು ಇನ್ನೂ ನೀಡಿಲ್ಲ. ಇದಕ್ಕಾಗಿ ಸರಕಾರಕ್ಕೆ ಒತ್ತಡ ತರಲಾಗುವುದು. ಅಕ್ಟೋಬರ್‌ ತಿಂಗಳದ್ದು ಇನ್ನೊಂದು ವಾರದಲ್ಲಿ ಸಿಗುವ ನಿರೀಕ್ಷೆಯಿದೆ.
ಮಂಜು ಬಿಲ್ಲವ,  ಅಧ್ಯಕ್ಷರು ನಾಡದೋಣಿ ಮೀನುಗಾರರ ಸಂಘ

ನಾಡದೋಣಿಗಳಿಗೆ ಸೀಮೆಎಣ್ಣೆ ನೀಡಬೇಕು ಎಂದು ಸರಕಾರದಿಂದ ಆದೇಶ ಬಂದಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೂ ಸರಕಾರದಿಂದ ನಿರ್ದೇಶನ ಬಂದಿದೆ. ಅವರು ಸೀಮೆಎಣ್ಣೆ ನಮಗೆ ನೀಡಬೇಕಿದ್ದು, ಆ ಬಳಿಕ ಅಂದರೆ, ಇನ್ನೊಂದು ವಾರದಲ್ಲಿ ಮೀನುಗಾರರಿಗೆ ಸೀಮೆಎಣ್ಣೆ ಸಿಗುವ ವ್ಯವಸ್ಥೆ ಮಾಡಲಾಗುವುದು. 
ಪಾರ್ಶ್ವನಾಥ ಹಾಗೂ ಚಿಕ್ಕವೀರ ನಾಯ್ಕ‌, ಮೀನುಗಾರಿಕಾ ಇಲಾಖಾ ನಿರ್ದೇಶಕರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.