ಕಾಪು: ಬಂಡೆಗೆ ಢಿಕ್ಕಿ ಹೊಡೆದ ದೋಣಿ : ಐವರು ಮೀನುಗಾರರು ಪಾರು
Team Udayavani, Jul 27, 2022, 11:42 PM IST
ಕಾಪು : ಕಾಪು ಲೈಟ್ ಹೌಸ್ ಬಳಿಯಿಂದ ಹದಿನೈದು ಕಿ. ಮೀ. ದೂರದ ಕಾಪು ಪಾರ್ ಬಳಿ ತಾಂತ್ರಿಕ ದೋಷಕ್ಕೆ ಸಿಲುಕಿದ ಮೀನುಗಾರಿಕೆ ದೋಣಿಯೊಂದು ಬಂಡೆಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಢಿಕ್ಕಿಯ ರಭಸಕ್ಕೆ ದೋಣಿಯಲ್ಲಿದ್ದ ರಂಜೇಶ್, ಲಾರೆನ್ಸ್, ಮಾಧವ, ಧರ್ಮ ರಾಜ್ ಸೇರಿದಂತೆ 5 ಮಂದಿ ಮೀನುಗಾರರು ಚೆಲ್ಲಾಪಿಲ್ಲಿಯಾಗಿ ಹೋಗಿದ್ದು, ಪವಾಢ ಸಧೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೋಣಿಯ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ಈ ಅವಘಡ ಸಂಭವಿ ಸಿದ್ದು ನಿಯಂತ್ರಣ ತಪ್ಪಿದ ಬಳಿಕ ಗಾಳಿಯ ರಭಸಕ್ಕೆ ಸಿಲುಕಿ ಪಾರ್ ಬಳಿಯ ಬಂಡೆಗೆ ಢಿಕ್ಕಿ ಹೊಡೆದಿದೆ. ದೋಣಿಯಲ್ಲಿದ್ದ ಮೀನುಗಾರರು ಈಜಾಡಿಕೊಂಡು ಪಾರ್ ಬಳಿಯ ಬಂಡೆಯಲ್ಲಿ ರಕ್ಷಣೆ ಪಡೆದಿದ್ದರು.
ಅಪಘಾತಕ್ಕೊಳಗಾಗಿದ್ದ ದೋಣಿ ಯಲ್ಲಿದ್ದ ಮೀನುಗಾರರನ್ನು ಬೇರೊಂದು ದೋಣಿಯ ಸಹಾಯ ದೊಂದಿಗೆ ಮಲ್ಪೆಗೆ ಕರೆತರಲಾಗಿದ್ದು ಅಲ್ಲಿಂದ ಸುರಕ್ಷಿತ ಪ್ರದೇಶಕ್ಕೆ ಕಳುಹಿಸ ಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ