ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ
Team Udayavani, Jun 15, 2021, 6:06 PM IST
ಕಾಪು: ಕೋವಿಡ್ ಎರಡನೇ ಅಲೆ, ಮತ್ತು ಲಾಕ್ ಡೌನ್ ನಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಅಂತಹ ಬಡ ಕುಟುಂಬಗಳ ನೋವಿಗೆ ಸ್ಪಂಧಿಸುವುದು ಪ್ರತೀಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜದ 500 ಬಡ ಕುಟುಂಬಗಳಿಗೆ ಪಡಿತರ ಕಿಟ್ ಗಳನ್ನು ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಹೇಳಿದರು.
ಕಾಪುವಿನಲ್ಲಿ ಸಾಂಕೇತಿಕವಾಗಿ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಬಾರಿಯೂ ಜನರಿಗೆ ಪಡಿತರ ಕಿಟ್ ಗಳನ್ನು ಮತ್ತು ವಿಟಮಿನ್ ಸಿ ಮಾತ್ರೆಗಳನ್ನು ವಿತರಿಸಲಾಗಿದ್ದು, ಈ ಬಾರಿ ಮನೆಗೆ ಕೊಂಡೊಯ್ದು ನೀಡಲಾಗುವುದು ಎಂದರು.
ಇದನ್ನೂ ಓದಿ: ತೈಲೋತ್ಪನ್ನಗಳ ಬೆಲೆಯೇರಿಕೆಯಿಂದ ಜನ ಜೀವನ ತತ್ತರ: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ
ಕೋವಿಡ್ ಬಗ್ಗೆ ಜನರು ಸ್ವಯಂ ಜಾಗೃತರಾಗುವ ಅಗತ್ಯತೆಯಿದೆ. ಕೋವಿಡ್ ದೂರ ಮಾಡಲು ನಾವೇ ಕಟಿಬದ್ಧರಾಗಬೇಕು. ಮೂರನೇ ಅಲೆ ತಡೆಯಲು ನಾವೇ ಸ್ವಯಂ ಜಾಗೃತರಾಗೋಣ ಎಂದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪ್ರಮುಖರಾದ ಶೇಖರ ಪೂಜಾರಿ, ಪ್ರದೀಪ್ ಪೂಜಾರಿ, ಪ್ರಶಾಂತ್ ಮಡಿವಾಳ, ರವಿಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ