ಹೊಟೇಲ್‌ಗ‌ಳಲ್ಲಿ ತಿಂಡಿ ದರ ಏರಿಕೆ ಬಿಸಿ

ಅಡುಗೆ ಎಣ್ಣೆ, ಗ್ಯಾಸ್‌ ತುಟ್ಟಿ

Team Udayavani, Apr 6, 2022, 11:52 AM IST

samosa

ಉಡುಪಿ: ಅಡುಗೆ ಎಣ್ಣೆ, ಗ್ಯಾಸ್‌ ದರ ಏರಿಕೆ ಪರಿಣಾಮ ಹೊಟೇಲ್‌ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಒಂದೆಡೆ ಊಟ, ಉಪಾಹಾರ ದರವನ್ನು ಹೆಚ್ಚಿಸಬೇಕೋ ಬೇಡವೋ ಎಂಬ ಚಿಂತೆ, ಇನ್ನೊಂದೆಡೆ ಸಣ್ಣ ವರ್ಗದ ಕ್ಯಾಂಟೀನ್‌ಗಳು ದರ ಏರಿಸಿದಲ್ಲಿ ಗ್ರಾಹಕರನ್ನು ಕಳೆದುಕೊಳ್ಳುವ ಆತಂಕವೂ ಇದೆ.

ಮೊದಲೇ ಕೋವಿಡ್‌ ಲಾಕ್‌ಡೌನ್‌ ಹೊಡೆತಗಳಿಂದ ಕಂಗೆಟ್ಟಿದ್ದ ಉದ್ಯಮ ಮತ್ತೆ ದರ ಏರಿಕೆಯಿಂದಾಗಿ ಕಂಗೆಟ್ಟಿದೆ. ಹೊಟೇಲ್‌, ಉಪಾಹಾರ ಮಂದಿರ, ಚಾಟ್ಸ್‌ ಅಂಗಡಿಗಳ ಮಾಲಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳ ಏರಿಕೆ ಮಾಡುವ ಬಗ್ಗೆ ಚಿಂತನೆಯಲ್ಲಿದ್ದಾರೆ. ಬಹುತೇಕ ಸಸ್ಯಾಹಾರಿ-ಮಾಂಸಾಹಾರಿ ಹೊಟೇಲ್‌ಗ‌ಳಲ್ಲಿ ಈಗಾಗಲೇ ಊಟ, ತಿಂಡಿಗೆ ಬೆಲೆ ಏರಿಕೆ ಮಾಡಿದ್ದಾರೆ. ನಗರದಲ್ಲಿ ಸಣ್ಣ ಕ್ಯಾಂಟೀನ್‌, ಗೂಡಂಗಡಿಗಳಿಂದ ಹಿಡಿದು 600ರಿಂದ 700ರ ವರೆಗೆ ಸಣ್ಣ, ಮಧ್ಯಮ, ಮೇಲ್‌ಸ್ತರದ ಹೊಟೇಲ್‌ಗ‌ಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ 1,500ಕ್ಕೂ ಅಧಿಕ ಹೊಟೇಲ್‌ಗ‌ಳು ಇವೆ.

ಕೆಲವು ಮೇಲ್‌ಸ್ತರದ ಮತ್ತು ಮಲ್ಟಿಕ್ಯುಸಿನ್‌ ರೆಸ್ಟೋರೆಂಟ್‌, ಮಧ್ಯಮ ವರ್ಗದ ಕೆಲವು ಹೊಟೇಲ್‌ ಗಳು ಇನ್ನೂ ದರ ಏರಿಕೆ ಬಗ್ಗೆ ಗೊಂದಲದಲ್ಲಿದ್ದಾರೆ. ಸಸ್ಯಾಹಾರಿ ಕೆಲವು ಹೊಟೇಲ್‌ಗ‌ಳಲ್ಲಿ ಗೋಳಿಬಜೆ, ಬನ್ಸ್‌, ವಡೆ, ಅಂಬಡೆ, ಚಟ್ಟಂಬಡೆಯಂಥ ಎಣ್ಣೆ ತಿಂಡಿಗಳಿಗೆ 2 ರಿಂದ 5 ರೂ. ವರೆಗೆ ದರ ಏರಿಸಿವೆ. ಚಹಾ, ಕಾಫಿಗೆ 2 ರೂ. ಏರಿಸಿದ್ದಾರೆ. ಸಾಮಾನ್ಯ ಮಾಂಸಾಹಾರಿ ಹೊಟೇಲ್‌ -ಚಲಿಸುವ ಕ್ಯಾಂಟೀನ್‌ಗಳಲ್ಲಿ ಚಿಕನ್‌ ಕಬಾಬ್‌ ಒಂದಕ್ಕೆ 5ರಿಂದ 10 ರೂ. ಏರಿಕೆ ಮಾಡಲಾಗಿದೆ. ಕೆಲವು ಮೀನು ಊಟದ ಹೊಟೇಲ್‌ಗ‌ಳು ಮೀನು ಸಹಿತ ಇರುವ ಊಟದ ದರವನ್ನು 10 ರೂ. ಹೆಚ್ಚಿಸಿದ್ದಾರೆ.

ಸಮೋಸ, ಪಪ್ಸ್‌ಗೂ ದರ ಏರಿಕೆ

ಕಡಿಮೆ ಖರ್ಚಿನಲ್ಲಿ ಲಘು ಉಪಹಾರಗಳೆಂದು ಖ್ಯಾತಿ ಪಡೆದಿರುವ ಸಮೋಸ, ಪಪ್ಸ್‌ಗಳಿಗೂ 2ರಿಂದ 5 ರೂ. ವರೆಗೆ ದರ ಏರಿಕೆಯಾಗಿದೆ. ವಾಣಿಜ್ಯ ಗ್ಯಾಸ್‌ ಬೆಲೆ ಪ್ರತೀ ಸಿಲಿಂಡರ್‌ಗೆ 250 ರೂ. ಏರಿಕೆಯಾಗಿರುವುದು ಹೊಟೇಲ್‌, ಕ್ಯಾಂಟೀನ್‌ ಮಾಲಕರಿಗೆ ನುಂಗಲಾರದ ತುತ್ತಾಗಿದೆ. ರಷ್ಯಾ-ಉಕ್ರೇನ್‌ ಯುದ್ದದ ಬಳಿಕ ಅಡುಗೆ ಎಣ್ಣೆ ದರವು ಹೆಚ್ಚಳವಾಗಿದ್ದು, ಪಾಮಾಯಿಲ್‌ 100, 120 ರೂ. ಇದ್ದ ದರ 200ರ ಗಡಿಗೆ ತಲುಪಿತ್ತು. ಇದೀಗ ಮತ್ತೆ ದರ ಇಳಿಕೆಯಾಗಿದ್ದು 140 ರೂ.ಗೆ ಬಂದಿದೆ ಎನ್ನುತ್ತಾರೆ ಹೊಟೇಲ್‌ ಮಾಲಕರು.

ಇನ್ನೆರಡು ದಿನಗಳಲ್ಲಿ ನಿರ್ಧಾರ

ಅಡುಗೆ, ಗ್ಯಾಸ್‌ ಇತರ ವಸ್ತುಗಳ ದರ ಏರಿಕೆಯಿಂದಾಗಿ ಹೊಟೇಲ್‌ ಉದ್ಯಮ ನಡೆಸುವುದು ಸವಾಲಿನ ವಿಷಯವಾಗಿದೆ. ಇಷ್ಟು ದಿನ ಅಡುಗೆ ಎಣ್ಣೆ ದರ ಏರಿಕೆಯಾಗಿತ್ತು. ಈಗ ಒಮ್ಮೆಲೆ ಗ್ಯಾಸ್‌ ದರ ಏರಿಕೆಯಿಂದ ಕಂಗಾಲಾಗಿದ್ದೇವೆ. ದರ ಏರಿಕೆ ಮಾಡುವುದು ಅನಿವಾರ್ಯವಾಗಿದ್ದು, ಇಲ್ಲದಿದ್ದರೆ ಉದ್ಯಮ ಸಂಕಷ್ಟಕ್ಕೆ ಸಿಲುಕಲಿದೆ. ಗ್ರಾಹಕರಿಗೂ ಹೊರೆಯಾಗಬಾರದು, ಉದ್ಯಮಕ್ಕೂ ನಷ್ಟವಾಗಬಾರದು ಎಂದು ಎಲ್ಲ ಹೊಟೇಲ್‌ ಮಾಲಕರ ಆಶಯವಾಗಿದೆ. ಈ ಬಗ್ಗೆ ಸರಕಾರಕ್ಕೆ ಮನವಿಯನ್ನು ಸಲ್ಲಿಸುತ್ತೇವೆ. ಬೆಂಗಳೂರಿನಲ್ಲಿ ಇಂದು (ಎ.6) ರಾಜ್ಯ ಹೊಟೇಲ್‌ ಮಾಲಕರ ಸಂಘದ ಸಭೆ ನಡೆಯಲಿದ್ದು, ದರ ಏರಿಕೆ ಬಗ್ಗೆ ನಿರ್ಧರಿಸಲಾಗುತ್ತದೆ. – ಡಾ| ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷರು, ಜಿಲ್ಲಾ ಹೊಟೇಲ್‌ ಮಾಲಕರ ಸಂಘ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.