ಒಬ್ಬರ ರಕ್ತದಿಂದ ನಾಲ್ಕು ಜೀವ ಉಳಿಸಬಹುದು’


Team Udayavani, Jun 15, 2019, 6:00 AM IST

UDYAVARA–BLOOD-DONOR–CAMP-6

ಉಡುಪಿ: ಒಬ್ಬ ವ್ಯಕ್ತಿ ನೀಡಿದ ರಕ್ತದಿಂದ ಕನಿಷ್ಠ ನಾಲ್ಕು ಜೀವವನ್ನು ಉಳಿಸಬಹುದು. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮವಾಗುವುದಿಲ್ಲಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌ ಹೇಳಿದರು.


ಅವರು ಶುಕ್ರವಾರ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಯಲಕ್ಷ್ಮೀ ಸಿಲ್ಕ್ಸ್ ಜಯಲಕ್ಷ್ಮೀ ಆರ್ಕೇಡ್‌ ಉದ್ಯಾವರ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ ಜ್ಞಾನ ಸಾಧನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯಾವರದ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಬೃಹತ್‌ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದಾನಿಗಳು ನೀಡಿದ ರಕ್ತವನ್ನು 35 ದಿನಗಳ ಕಾಲ ಮಾತ್ರ ಸಂಗ್ರಹಿಸಿಡಬಹುದು. ಪ್ಲೇಟ್ಲೆಟ್ಸ್‌ 5 ದಿನಗಳ ಕಾಲ ಮಾತ್ರ ಇಡಬಹುದು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಉದ್ಯಾವರ ಜ್ಞಾನ ಸಾಧನ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್‌ ಎಂ. ಡಿ’ಸೋಜಾ ಮಾತನಾಡಿ, ರಕ್ತದಾನದಿಂದ ಒಂದು ಜೀವ ಉಳಿಸುವುದೇ ನಾವು ಮಾಡುವ ಶ್ರೇಷ್ಠದಾನ ಎಂದ‌ರು.

ವಾಹನ ಚಾಲನೆ: ಜಾಗರೂಕತೆ ಅಗತ್ಯ
ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮ್‌ರಾವ್‌ ಮಾತನಾಡಿ ಆಕ್ಸಿಡೆಂಟ್ ಆದಂತಹ ಸಂದರ್ಭ ಅತೀ ಹೆಚ್ಚಾಗಿ ರಕ್ತದ ಅವಶ್ಯಕತೆ ಇರುವುದು. ಆದ್ದರಿಂದ ವಾಹನ ಚಲಾಯಿಸುವಾಗ ಯುವ ಜನತೆ ಜಾಗರೂಕರಾಗಿರಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಎಸ್‌.ವಿ ರಕ್ತದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು ರಕ್ತದಾನ ಮಾಡಿ ಜೀವ ಉಳಿಸಲು ಸಹಕಾರಿಯಾಗಬೇಕು ಎಂದು ರಕ್ತದಾನಿ ಹೆಬ್ರಿಯ ನರಸಿಂಹ ನಾಯಕ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ರಕ್ತದಾನಿಗಳಿಗೆ ಸಮ್ಮಾನದ ಅಗತ್ಯವಿಲ್ಲ, ರಕ್ತದಾನದಿಂದ ಒಂದು ಜೀವ ಉಳಿದರೆ ಅದೇ ರಕ್ತದಾನಿಗೆ ಸನ್ಮಾನ ಎಂದು ರಕ್ತದಾನಿ ಶೈಲೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ 6 ಮಂದಿ ದಾನಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ಮತ್ತು ಸುರಕ್ಷಿತ ರಕ್ತ ವಿಷಯದ ಕುರಿತು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ| ವೀಣಾ ಕುಮಾರಿ ವಿಶೇಷ ಉಪನ್ಯಾಸ ಮಾಡಿದರು.

ಉದ್ಯಾವರ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಜೆಟಿಒ ನಾಗೇಂದ್ರ ಕುಮಾರ್‌ ಸ್ವಾಗತಿಸಿದರು. ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.