ಬಹುಮಾನ ವಂಚನೆ: ಹೇಳಿದ್ದು ಬೆಳ್ಳಿನಾಣ್ಯ, ಕಳುಹಿಸಿದ್ದು ಕಬ್ಬಿಣದತುಂಡು


Team Udayavani, Aug 2, 2017, 8:00 AM IST

Fraud-Symbolic-600.jpg

ಕೋಟ: ಅದೃಷ್ಟ ಡ್ರಾದಲ್ಲಿ ನಿಮಗೆ ಮೊಬೈಲ್‌, ಬೆಳ್ಳಿನಾಣ್ಯ ಬಹುಮಾನ ಬಂದಿದೆ; ಪೋಸ್ಟಲ್‌ ಚಾರ್ಜ್‌ ನೀಡಿ ಬಹುಮಾನ ಪಡೆದುಕೊಳ್ಳಿ ಎಂದು ಕಬ್ಬಿಣದ ಯಂತ್ರದ ತುಂಡುಗಳನ್ನು ಪೋಸ್ಟ್‌ ಮೂಲಕ ಕಳುಹಿಸಿ ವಂಚಿಸಿದ ಘಟನೆ ಕೋಟದಲ್ಲಿ ಪರಿಸರದಲ್ಲಿ  ಇತ್ತೀಚೆಗೆ ಸಂಭವಿಸಿದೆ. ಇಲ್ಲಿನ ನಿವಾಸಿ ಬ್ಯಾಂಕ್‌ವೊಂದರ ನಿವೃತ್ತ ಮ್ಯಾನೇಜರ್‌ ಅವರ ಮೊಬೈಲ್‌ಗೆ ಪ್ರತಿಷ್ಠಿತ ಮೊಬೈಲ್‌ ಕಂಪೆನಿಯೊಂದರ ಹೆಸರಲ್ಲಿ 9071735842, 9844193580 ಸಂಖ್ಯೆಯಿಂದ ಬೆಂಗಳೂರಿನಿಂದ ಕರೆ ಬಂದಿದ್ದು, ನೀವು ನಮ್ಮ ಸಂಸ್ಥೆಯ ಅದೃಷ್ಟ ಗ್ರಾಹಕರಾಗಿ ಆಯ್ಕೆಯಾಗಿದ್ದೀರಿ. ನಾವು ನಿಮಗೆ ಪೋಸ್ಟ್‌ ಮೂಲಕ ಬಹುಮಾನ ಕಳುಹಿಸುತ್ತೇವೆ. ಪೋಸ್ಟ್‌ ಚಾರ್ಜ್‌ ನೀಡಿ ಬಹುಮಾನ ಪಡೆದುಕೊಳ್ಳಿ ಎಂದು ನಂಬಿಸಲಾಗಿತ್ತು.

ಹಿಂದೊಮ್ಮೆ ಅದೇ ಕಂಪೆನಿಯ ಮೊಬೈಲ್‌ ಅನ್ನು ಅವರು ಖರೀದಿಸಿದ್ದರಿಂದ ಹಾಗೂ ಕರೆ ಮಾಡಿದವರು ಅದೇ ವಿಳಾಸವನ್ನು ಹೇಳಿದ್ದರಿಂದ ನಿವೃತ್ತ ಮ್ಯಾನೇಜರ್‌ ಬಹುಮಾನವನ್ನು ಸ್ವೀಕರಿಸಲು ಮುಂದಾದರು. ಅನಂತರ ಎರಡು-ಮೂರು ದಿನಗಳಲ್ಲೇ ಪೋಸ್ಟ್‌ ಮೂಲಕ ಬಹುಮಾನ ಕೂಡ ಬಂತು. 1,800 ರೂ, ನೀಡಿ ಪಾರ್ಸೆಲ್‌ ಬಿಡಿಸಿಕೊಳ್ಳಲು ಹೇಳಿದಾಗ ಸ್ವಲ್ಪ ಅನುಮಾನಗೊಂಡರು. ಕುತೂಹಲದಿಂದ ಪಾರ್ಸೆಲ್‌ ಪಡೆದು ಬಿಚ್ಚಿ ನೋಡಿದಾಗ ಅದರಲ್ಲಿ ಮೊಬೈಲ್‌ ಹಾಗೂ ಬೆಳ್ಳಿ ನಾಣ್ಯಗಳ ಬದಲಿಗೆ ಕಬ್ಬಿಣದ ಹಳೆಯ ಯಂತ್ರದ ತಂಡುಗಳು, ದೇವರ ಮೂರ್ತಿಗಳು ಇತ್ತು. ಅನಂತರ ಆ ನಂಬರ್‌ಗೆ ಕರೆ ಮಾಡಿದಾಗ ಒಂದು ಸಂಖ್ಯೆ ಸ್ವಿಚ್ಡ್ ಆಫ್‌ ಆಗಿತ್ತು ಹಾಗೂ ಇನ್ನೊಂದು ಸಂಖ್ಯೆಯಲ್ಲಿ ಕರೆ ಸ್ವೀಕರಿಸಿದರು ಸರಿಯಾದ ಉತ್ತರ ನೀಡಲಿಲ್ಲ. ಇದೇ ರೀತಿ ಅನೇಕ ಮಂದಿಗೆ ಕರೆಗಳು ಬರುತ್ತಿದ್ದು, ಜನರನ್ನು ಮೋಸಗೊಳಿಸಲು ವ್ಯವಸ್ಥಿತ ಜಾಲವೊಂದು ಕಾರ್ಯಾಚರಿಸುತ್ತಿದೆ. ಸಾರ್ವಜನಿಕರು ಈ ಕುರಿತು ಎಚ್ಚರದಿಂದಿರಬೇಕು ಎಂದು ಮೋಸಕ್ಕೊಳಗಾದ ಅವರು ಪತ್ರಿಕೆಗೆ ತಿಳಿಸಿದ್ದಾರೆ ಹಾಗೂ ಪೊಲೀಸರಿಗೆ ದೂರು ನೀಡುವ ಕುರಿತು ಚಿಂತನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.