ಉದ್ಯಾವರ: ಪ್ರೀತಿಸಿದ ಯುವಕನಿಂದ ವಂಚನೆ, ಬೆದರಿಕೆ; ಯುವತಿ ದೂರು
Team Udayavani, Jan 17, 2021, 2:15 AM IST
ಕಾಪು: ಉದ್ಯಾವರ ಪಿತ್ರೋಡಿ ಗ್ರಾಮದ ಯುವತಿ ಯೋರ್ವಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಆಕೆಯನ್ನು ನಿರ್ಲಕ್ಷಿಸಿದ ಮತ್ತು ಬೆದರಿಕೆ ಹಾಕಿದ ಯುವಕನ ವಿರುದ್ಧ ಸಂತ್ರಸ್ತ ಯುವತಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಂತ್ರಸ್ತೆ ಯುವತಿ ಭಾಗ್ಯ ಪರಿಚಯಸ್ಥ ಅಭಿಲಾಷ್ ಜತೆ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರಲ್ಲದೇ ದೈಹಿಕ ಸಂಪರ್ಕ ಬೆಳೆಸಿದ್ದರು. ಆಬಳಿಕ ಅಭಿಲಾಷ್ ಮದುವೆಯಾಗಿರುವ ವಿಚಾರ ತಿಳಿದ ಯುವತಿ ಆತನಲ್ಲಿ ಕೇಳಿದ್ದಕ್ಕೆ ಸುಮ್ಮನಿರು, ಈ ವಿಚಾರ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ