ಪೆಟ್ರೋಲ್ ಬಂಕ್ ಮಾಲಕನಿಗೆ 18 ಲ.ರೂ. ವಂಚನೆ
Team Udayavani, Jun 11, 2021, 7:08 AM IST
ಕಾಪು: ಪೆಟ್ರೋಲ್ ಬಂಕ್ ಮಾಲಕನಿಗೆ ಮ್ಯಾನೇಜರ್ 18 ಲಕ್ಷ ರೂಪಾಯಿ ನಗದು ವಂಚಿಸಿರುವ ಘಟನೆ ಮೂಳೂರಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಕೆ. ದೀಪಕ್ರಾಜ್ ಶೆಟ್ಟಿ ನಡೆಸುತ್ತಿದ್ದ ಭಾರತ್ ಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ದುಡಿಯುತ್ತಿದ್ದ ಸುಖೇಶ್ ಶೆಟ್ಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ಪೆಟ್ರೋಲ್ ಬಂಕ್ಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರವನ್ನು ಸುಖೇಶ್ ಶೆಟ್ಟಿ ನೋಡಿಕೊಂಡಿದ್ದು ಪೆಟ್ರೋಲ್ ಬಂಕ್ನ ಹಣವನ್ನು ಕಾರ್ಡ್ ಮೂಲಕ ಮತ್ತು ನಗದು ರೀತಿಯಲ್ಲಿ ಸುಖೇಶ್ ಶೆಟ್ಟಿ ಬ್ಯಾಂಕ್ಗೆ ಜಮಾ ಮಾಡಿಕೊಂಡು ಬರುತ್ತಿದ್ದನು. ಹೀಗೆ ಜಮಾ ಮಾಡಿದ ಹಣದಲ್ಲಿ ವ್ಯತ್ಯಾಸ ಕಂಡು ಬಂದ ಪರಿಣಾಮ ಕಂಪೆನಿಯ ಪ್ರತಿನಿಧಿಗಳು ಮಾಲಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ಸುಖೇಶ್ ಶೆಟ್ಟಿ ಮೇ 27ರಂದು ಸಂಜೆಯ ಬಳಿಕ ತನ್ನ ಮೊಬೈಲ್ ಅನ್ನು ಸ್ವಿಚ್ ಆಫ್ ಮಾಡಿ ತೆರಳಿದ್ದನು.
ಬಳಿಕ ಮೇ 28ರಂದು ಪೆಟ್ರೋಲ್ ಬಂಕ್ಗೆ ಬಂದು ನೋಡುವಾಗ ಬ್ಯಾಂಕ್ ಸ್ಟೇಟ್ಮೆಂಟ್, ಸೇಲ್ಸ್ ರಿಪೋರ್ಟ್, ಕಾರ್ಡ್ನ ಸ್ಟೇಟ್ಮೆಂಟ್ ಹಾಗೂ ಸೇಲ್ಸ್ ರಿಪೋರ್ಟ್ ನಲ್ಲಿ 18 ಲಕ್ಷ ರೂ. ವರೆಗೆ ರೂ. ವ್ಯತ್ಯಾಸ ಕಂಡುಬಂದಿತ್ತು.
ಆರೋಪಿತ ಸುಖೇಶ್ ಪೆಟ್ರೋಲ್ ಬಂಕ್ನ ಹಣವನ್ನು ಬ್ಯಾಂಕ್ಗೆ ಜಮಾ ಮಾಡದೆ ಮೋಸ ಮಾಡಿ ಪೆಟ್ರೋಲ್ ಬಂಕ್ನ ವ್ಯವಹಾರದಲ್ಲಿ 18 ಲಕ್ಷ ರೂಪಾಯಿಯನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು ಮೋಸ ಮಾಡಿರುವುದಾಗಿ ಬಂಕ್ನ ಮಾಲಕ ದೀಪಕ್ರಾಜ್ ಶೆಟ್ಟಿ ನೀಡಿದ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ