ಉಚಿತ ಎಂಆರ್ಐ ಸ್ಕ್ಯಾನಿಂಗ್ ಸೇವೆ ಇನ್ನು ಜಿಲ್ಲಾಸ್ಪತ್ರೆಯಲ್ಲಿ ಶೀಘ್ರ ಲಭ್ಯ !
ಒಳರೋಗಿಗಳಿಗೆ ವರದಾನವಾಗಲಿದೆ ಹೊಸ ಸೌಲಭ್ಯ
Team Udayavani, Feb 26, 2020, 5:09 AM IST
ನಿರ್ಮಾಣ ಹಂತದಲ್ಲಿರುವ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ.
ಉಡುಪಿ: ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸಮಸ್ಯೆಗೆ ನಿಖರ ಕಾರಣ ತಿಳಿಸುವ ಎಂಆರ್ಐ ಸ್ಕ್ಯಾನಿಂಗ್ ಮಾಡಿಸಲು ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾಗಿಲ್ಲ, ಇನ್ನು ಮುಂದೆ ಈ ಸೇವೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ಸಿಗಲಿದೆ. ಸರಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಬಡವರೇ ಬರುತ್ತಾರೆ. ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಯಲ್ಲಿ ಪ್ರತಿನಿತ್ಯ ಒಳರೋಗಿಗಳಾಗಿ ಭರ್ತಿಯಾಗುವವರಲ್ಲಿ 8-10 ಜನರಿಗೆ ಎಂಆರ್ಐ ಸ್ಕ್ಯಾನಿಂಗ್ ಅವಶ್ಯ ವಿದೆ. ಈ ಸೇವೆಯ ಕೊರತೆ ಯಿಂದಾಗಿ ರೋಗಿಗಳನ್ನು ಖಾಸಗಿ ಸೆಂಟರ್ ಗಳಿಗೆ ಕಳುಹಿಸಲಾಗುತ್ತಿತ್ತು.
ದುಬಾರಿ ಶುಲ್ಕಕ್ಕೆ ಬ್ರೇಕ್
ಇನ್ನು ಬಡವರು ಖಾಸಗಿ ಎಂಆರ್ಐ ಸ್ಕ್ಯಾನ್ ಮಾಡಬೇಕೆಂದರೆ ಕನಿಷ್ಠ 2,000ರೂ. ನಿಂದ 10,000 ರೂ. ವರೆಗೆ ಶುಲ್ಕ ಭರಿಸಬೇಕು. ಇದು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನುಂಗಲಾರದ ತುತ್ತು. ಇದರಿಂದಾಗಿ ಆನೇಕರು ಸರಕಾರಿ ಆಸ್ಪತ್ರೆಗೆ ಹಿಡಿಶಾಪ ಹಾಕುತ್ತಾ, ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ತೆರಳಲುತ್ತಿದ್ದರು. ಇನ್ನು ಕೆಲವರು ಈ ಜಂಜಾಟವೇ ಬೇಡ ಎಂದು ಆಸ್ಪತ್ರೆಯಿಂದ ದೂರ ಉಳಿಯುತ್ತಿದ್ದರು. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪಿಸುವ ಮೂಲಕ ಆಸ್ಪತ್ರೆಯೂ ಬಡವರಿಗೆ ಇನ್ನಷ್ಟು ಹತ್ತಿರವಾಗಲಿದೆ.
ನೂತನ ಕಟ್ಟಡ ನಿರ್ಮಾಣ
ಜಿಲ್ಲಾಸ್ಪತ್ರೆಯ ಸಮೀಪದ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪಿಸಲು ಅನುವು ಮಾಡಿದೆ. ಅದರ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಬೆಂಗಳೂರು ಮೂಲದ ಕೃಷ್ಣಾ ಏಜೆನ್ಸಿ ವಹಿಸಿಕೊಂಡಿದೆ. ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಸಿಬಂದಿ ನೇಮಕ ಮಾಡಿಕೊಳ್ಳಲಿದೆ. ಜನ ಸಾಮಾನ್ಯರು ಶೀಘ್ರದಲ್ಲಿ ಈ ಸೇವೆ ಪಡೆಯಬಹುದಾಗಿದೆ.
ಉಚಿತ ಸೇವೆ!
ಈಗ ಸರಕಾರ ಮೆಡಿಕಲ್ ಕಾಲೇಜು ಇಲ್ಲದ ಎಲ್ಲೆ ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್ಐ ಕೇಂದ್ರ ಸೇವೆ ಆಳವಡಿಸುವ ಆದೇಶ ನೀಡಿದೆ. ಈ ಲ್ಯಾಬ್ಗಳಲ್ಲಿ ಜಿಲ್ಲೆಯ ವಿವಿಧ ಸರಕಾರಿ ಆಸ್ಪತ್ರೆಯಿಂದ ಬರುವ ಎಲ್ಲರಿಗೂ ಉಚಿತವಾಗಿ ಎಂಆರ್ಐ ಸ್ಕ್ಯಾನ್ ಸೇವೆ ಸಿಗಲಿದೆ. ಖಾಸಗಿ ಆಸ್ಪತ್ರೆಯಿಂದ ಬರುವವರಿಗೆ ಸರಕಾರವೇ ಕನಿಷ್ಠ ದರ ನಿಗದಿ ಮಾಡಲಿದೆ.
ರೋಗಿಗಳಿಗೆ ಸಹಾಯಕ
ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ ಆರಂಭಿಸುವ ಮೂಲಕ ಆರ್ಥಿಕ ಸಮಸ್ಯೆಯಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುವವರಿಗೆ ಸಹಾಯಕವಾಗಲಿದೆ. ಮುಂದಿನ ದಿನದಲ್ಲಿ ಒಳರೋಗಿಗಳ ಸಂಖ್ಯೆಯೂ ಹೆಚ್ಚುವ ಸಾಧ್ಯ ಇದೆ.
-ಡಾ| ಮಧುಸೂದನ್ ನಾಯಕ್, ಜಿಲ್ಲಾ ಸರ್ಜನ್, ಜಿಲ್ಲಾಸ್ಪತ್ರೆ.
ಜನಸ್ನೇಹಿ ಸೇವೆ ಆರಂಭವಾಗಲಿ
ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್ಐ ಕೆಂದ್ರ ಆರಂಭವಾಗುತ್ತಿರುವುದು ಸಂತೋಷದ ವಿಷಯ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅಶಕ್ತರಾದವರು ಮಾತ್ರ ಈ ಸರಕಾರಿ ಆಸ್ಪತ್ರೆಯ ಕಡೆ ಮುಖ ಮಾಡುತ್ತಾರೆ. ಜನ ಸ್ನೇಹಿ ಸೇವೆ ಶೀಘ್ರವಾಗಿ ಪ್ರಾರಂಭವಾಗಲಿ. ಇದರಿಂದ ಸಾಕಷ್ಟು ಬಡ ರೋಗಿಗಳು ಪ್ರಯೋಜನ ಪಡೆಯಲಿದ್ದಾರೆ.
-ನವೀನ್, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ