ಮಲ್ಪೆಯಲ್ಲಿ ಉಚಿತ ಪೊಲೀಸ್ ತರಬೇತಿ ಶಿಬಿರ
Team Udayavani, Jun 28, 2019, 10:45 AM IST
ಮಲ್ಪೆ: ಕರಾವಳಿ ಭಾಗದ ಯುವಕ, ಯುವತಿಯರು ಪೊಲೀಸ್ ಇಲಾಖೆಗೆ ಸೇರ್ಪಡೆ ಯಾಗಲು ಅಗತ್ಯವಿರುವ ದೈಹಿಕ ಮತ್ತು ಲಿಖೀತ ಪರೀಕ್ಷೆಗೆ ತರಬೇತಿ ನೀಡುವ ಉಚಿತ ತರಬೇತಿ ಶಿಬಿರ ವನ್ನು ಮಲ್ಪೆಯಲ್ಲಿಯೇ ಆಯೋಜಿ ಸಲಾಗುತ್ತದೆ ಎಂದು ಕೆಎಸ್ಆರ್ಪಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ ರಾವ್ ಹೇಳಿದರು.
ಗುರುವಾರ ಮಲ್ಪೆ ಏಳೂರು ಮೊಗವೀರ ಭವನದ ಮತ್ಸನಿಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕರಾವಳಿ ಕಾವಲು ಪಡೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ವತಿ ಯಿಂದ ಆಯೋಜಿಸಲಾಗಿದ್ದ ಪೊಲೀಸ್ ನೇಮಕಾತಿ ವಿಶೇಷ ಕಾರ್ಯಾಗಾರ ದಲ್ಲಿ ಅವರು ಮಾತನಾಡಿದರು.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಪೊಲೀಸ್ ಪಡೆ, ಕೆಎಸ್ಆರ್ಪಿ ವತಿಯಿಂದ 5-6 ದಿನಗಳ ಈ ಶಿಬಿರವನ್ನು ಏರ್ಪಡಿಸಲಾಗುವುದು ಎಂದರು.
ಔರಾದಕರ್ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಅನಂತರ ವೇತನ ಸೌಲಭ್ಯ ಉತ್ತಮವಾಗಲಿದ್ದು, ಸಿಬಂದಿ ಮತ್ತು ಕುಟುಂಬ ವರ್ಗಕ್ಕೆ ಉಚಿತ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ, ಕ್ವಾಟ್ರಸ್ ಸೌಲಭ್ಯ ಕೂಡ ದೊರೆಯಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೆಎಸ್ಆರ್ಪಿ ಕಮಾಂಡೆಂಟ್ ಕೃಷ್ಣಪ್ಪ, ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್, ಮಂಗಳೂರು ಕೆಎಸ್ಆರ್ಪಿ ಕಮಾಂಡೆಂಟ್ ಜನಾರ್ದನ್, ಇಂಟೆಲಿಜೆಂಟ್ ವಿಭಾಗದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಉಡುಪಿ ಡಿವೈಎಸ್ಪಿ ಜೈಶಂಕರ್ ಉಪಸ್ಥಿತರಿದ್ದರು.
ಪೊಲೀಸ್ ಸೇವೆಯತ್ತ ಆಸಕ್ತಿ ವಹಿಸಿ
ರಾಜ್ಯದಲ್ಲಿ ಒಟ್ಟು 27,000 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಕರಾವಳಿ ಭಾಗದಲ್ಲಿ 1,624 ಪೊಲೀಸ್ ಕಾನ್ಸ್ಟೆಬಲ್, 110 ಸಬ್ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇವೆ. ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಗೆ ಸೇರಬಯಸುವ ಜನರ ಸಂಖ್ಯೆ ಇತ್ತೀಚಿನ 4-5 ವರ್ಷಗಳಲ್ಲಿ ತೀರ ಇಳಿಮುಖಗೊಂಡಿದೆ. ಈ ಭಾಗದ ಯುವಕ ಯುವತಿಯರು, ಇಲಾಖೆಯ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಅದು ಸಲ್ಲದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳಲು ಮನಮಾಡಬೇಕು ಎಂದು ಎಡಿಜಿಪಿ ಭಾಸ್ಕರ ರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ