ಇಂದಿನಿಂದ ಸುರಕ್ಷಾ ಯಾತ್ರೆ: ಶೋಭಾ


Team Udayavani, Mar 3, 2018, 2:55 PM IST

shobha.jpg

ಉಡುಪಿ: ನಿರಂತರವಾಗಿ ಹಿಂದೂ ಯುವಕರ ಕೊಲೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಧೈರ್ಯ ತುಂಬುವ ಉದ್ದೇಶದಿಂದ ಬಿಜೆಪಿ ವತಿಯಿಂದ ಮಾ. 3ರಿಂದ 6ರ ವರೆಗೆ “ಮಂಗಳೂರು ಚಲೋ – ಜನ ಸುರಕ್ಷಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ರಾಜ್ಯದ ಇತರ ಭಾಗಗಳಲ್ಲಿಯೂ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿದೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿವೆ. ದಕ್ಷ ಅಧಿಕಾರಿಗಳು ಕಾರ್ಯನಿರ್ವಹಿಸಲು ಸಾಧ್ಯ ವಾಗುತ್ತಿಲ್ಲ. ಜನರಲ್ಲಿ ಭಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಧೈರ್ಯ ತುಂಬಲು, ಸಮಾಜ ಘಾತಕ ಶಕ್ತಿಗಳ ಮೇಲೆ ನಿಗಾ ಇಡುವಂತೆ ಜಾಗೃತಿ ಮೂಡಿಸಲು ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾ. 3ರಂದು ಅಂಕೋಲ, ಕುಮಟಾ, ಮಾ. 4ರಂದು ಹೊನ್ನಾವರ, ಭಟ್ಕಳ, ಮಾ. 5ರಂದು ಬೈಂದೂರು, ಕುಂದಾಪುರ, ಉಡುಪಿಯಲ್ಲಿ ಪಾದಯಾತ್ರೆ, ಸಾರ್ವಜನಿಕ ಸಭೆಗಳು ನಡೆಯಲಿವೆ. ಅಂಕೋಲದಿಂದ ಹೊರಡುವ ಸುರಕ್ಷಾ ಯಾತ್ರೆಗೆ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಚಾಲನೆ ನೀಡಲಿದ್ದು, ಸಚಿವ ಅನಂತ್‌ ಕುಮಾರ್‌ ಹೆಗಡೆ ಉಪಸ್ಥಿತರಿರುತ್ತಾರೆ.

ಕುಶಾಲನಗರದಲ್ಲಿ ಸಚಿವ ಸದಾನಂದ ಗೌಡ ಚಾಲನೆ ನೀಡಲಿದ್ದು, ಸಂಸದ ಪ್ರತಾಪ ಸಿಂಹ ಉಪಸ್ಥಿತರಿರುತ್ತಾರೆ ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ಉಜ್ವಲ ರಥ’ಕ್ಕೆ ಚಾಲನೆ
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಆರಂಭವಾದ ಅನಂತರ ದೇಶದಲ್ಲಿ 6 ಕೋಟಿ ಹೊಸ ಎಲ್‌ಪಿಜಿ ಸಂಪರ್ಕಗಳಾಗಿದ್ದು, ಅವುಗಳಲ್ಲಿ 3 ಕೋಟಿ “ಉಜ್ವಲ ಯೋಜನೆ’ಯಡಿ ಉಚಿತ ಸಂಪರ್ಕಗಳು. ಈ ಪೈಕಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಒಟ್ಟು 22,637 ಕುಟುಂಬಗಳಿಗೆ ಉಚಿತ ಗ್ಯಾಸ್‌ ಸಂಪರ್ಕ ನೀಡಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

“ಉಜ್ವಲ’ ಉಚಿತ ಗ್ಯಾಸ್‌ ಸಂಪರ್ಕ ಮಾಹಿತಿ- ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿರುವ “ಉಜ್ವಲ ರಥಯಾತ್ರೆ’ಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಮಾ. 2ರಂದು ಚಾಲನೆ ನೀಡಿದರು.

“ಸಖೀ’ ಕೇಂದ್ರ
ದೌರ್ಜನ್ಯಕ್ಕೊಳಗಾದ ಹೆಣ್ಮಕ್ಕಳಿಗೆ ಸಾಂತ್ವನ, ಚಿಕಿತ್ಸೆ, ತಾತ್ಕಾಲಿಕ ವಸತಿ, ನೆರವು ಒದಗಿಸುವ “ಸಖೀ’ ವನ್‌ ಸೆಂಟರ್‌ ಉಡುಪಿ ನಿಟ್ಟೂರಿನಲ್ಲಿ ನಿರ್ಮಾಣ ಗೊಂಡಿದ್ದು, ಇದನ್ನು ಮಾ. 5ರಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಉದ್ಘಾಟಿಸಲಿದ್ದಾರೆ ಎಂದು ಶೋಭಾ ತಿಳಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ವಕ್ತಾರ ಕಟಪಾಡಿ ಶಂಕರ ಪೂಜಾರಿ, ಉಪಾಧ್ಯಕ್ಷ ಸುಪ್ರಸಾದ್‌ ಶೆಟ್ಟಿ, ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕಿರಣ್‌ ಕುಮಾರ್‌, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್‌, ಜಿ.ಪಂ. ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್‌ ಉಪಸ್ಥಿತರಿದ್ದರು.

ಬ್ರಹ್ಮಾವರದಲ್ಲಿ ಪಾಸ್‌ಪೋರ್ಟ್‌ ಕೇಂದ್ರ
ಬ್ರಹ್ಮಾವರದಲ್ಲಿ ಮಾ. 5ರಂದು ಮಧ್ಯಾಹ್ನ 2.30ಕ್ಕೆ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಉದ್ಘಾಟನೆಗೊಳ್ಳಲಿದೆ ಎಂದು ಶೋಭಾ ತಿಳಿಸಿದರು.

ಮಾ. 6: ಮಂಗಳೂರಿಗೆ ಯೋಗಿ ಆದಿತ್ಯನಾಥ್‌
ಜನಸುರಕ್ಷಾ ಯಾತ್ರೆ ಮಾ. 6ರಂದು ಮಂಗಳೂರು ತಲಪಲಿದ್ದು, ಅಪರಾಹ್ನ 3ಕ್ಕೆ ಮಂಗಳೂರು ಜ್ಯೋತಿ ವೃತ್ತದಲ್ಲಿ ಸಾರ್ವಜನಿಕ ಸಭೆ ಜರಗಲಿದ್ದು, ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತನಾಡಲಿದ್ದಾರೆ. ಉಡುಪಿ ಪಾದಯಾತ್ರೆಯಲ್ಲಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.