Feb 10-12 : ಉಡುಪಿಯಲ್ಲಿ ಫ‌ಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ


Team Udayavani, Feb 9, 2018, 11:00 PM IST

Flower-9-2.jpg

ಉಡುಪಿ: ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕೆ ಇಲಾಖೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು, ಉಡುಪಿ ಜಿಲ್ಲಾ ಕೃಷಿಕ ಸಮಾಜ ಇವರ ಸಹಯೋಗದಲ್ಲಿ ದೊಡ್ಡಣ್ಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ ಕೇಂದ್ರದ (ಪುಷ್ಪ ಹರಾಜು) ಆವರಣದಲ್ಲಿ ಫೆ. 10ರಿಂದ 12ರ ವರೆಗೆ ಉಡುಪಿ ಜಿಲ್ಲಾಮಟ್ಟದ ಫ‌ಲಪುಷ್ಪ ಪ್ರದರ್ಶನ ಹಾಗೂ ರೈತ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಫೆ. 10ರ ಅಪರಾಹ್ನ 3 ಗಂಟೆಗೆ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಫ‌ಲಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದಾರೆ ಎಂದು ಉಡುಪಿ ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ತೋಟಗಾರಿಕೆ ಇಲಾಖಾಧಿಕಾರಿ ಭುವನೇಶ್ವರಿ ಉಪಸ್ಥಿತರಿದ್ದರು.

ಸಾವಯವ ತಾರಸಿ ತೋಟ ವಿಶೇಷಾಕರ್ಷಣೆ
ದೊಡ್ಡಣಗುಡ್ಡೆಯಲ್ಲಿರುವ ತೋಟಗಾರಿಕೆ ಇಲಾಖೆಯ ಕಟ್ಟಡದ ತಾರಸಿಯಲ್ಲಿ ಸಾವಯವ ಕೃಷಿ ನಡೆಸಲಾಗುತ್ತಿದ್ದು, ಇದು ವಿಶೇಷ ಆಕರ್ಷಣೆಯಾಗಿದೆ. ಎಸ್‌ಎಲ್‌ಆರ್‌ಎಂನವರು ಸಾವಯವ ತರಕಾರಿ ತೋಟವನ್ನು ನಿರ್ವಹಿಸುತ್ತಿದ್ದಾರೆ. ಸರಿಸುಮಾರು 350 ಸೆಗಣಿ ಮಿಶ್ರಿತ ಬುಟ್ಟಿಗಳನ್ನು ಇಟ್ಟು ವಿವಿಧ ತರಕಾರಿ ಬೆಳೆಗಳನ್ನು ತಾರಸಿಯಲ್ಲಿಯೇ ಬೆಳೆಸಲಾಗಿದೆ. ಇದರ ವೀಕ್ಷಣೆ, ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.


ಫ‌ಲಪುಷ್ಪಗಳ ವಿಶೇಷ ಆಕರ್ಷಣೆಗಳು

12 ಅಡಿ ಎತ್ತರದ ಶಿವಲಿಂಗಮೂರ್ತಿಗೆ ಕೆಂಪು, ಬಿಳಿ, ಹಳದಿ, ಗುಲಾಬಿ ಬಣ್ಣದ 3,100 ಗುಲಾಬಿ ಹೂವುಗಳ ಹಾಗೂ 75 ಕೆ.ಜಿ. ಚೆಂಡು ಹಾಗೂ ಸೇವಂತಿಗೆ ಪುಷ್ಪಗಳಿಂದ ಅಲಂಕಾರ.

5 ಅಡಿ ಎತ್ತರದ ನಂದಿ ಮೂರ್ತಿಗೆ 3,600 ಜರ್ಬೆರಾ ಹೂವುಗಳಿಂದ ಅಲಂಕಾರ.

ವಿವಿಧ ಪ್ರಾಣಿಗಳಿಗೆ 4,000 ಕಾರ್ನೇಷನ್‌ ಹೂವುಗಳಿಂದ, 1,000 ಆಲ್‌ಸ್ಟ್ರೋಮೇರಿಯನ್‌ ಲಿಲ್ಲಿ ಹೂವುಗಳಿಂದ ಮತ್ತು 25 ಕೆ.ಜಿ. ಮೆರಿಗೋಲ್ಡ್‌ ಕ್ರೈಸಾಂತೆಮಮ್‌ ಪುಷ್ಪಗಳಿಂದ ಆನೆ, ಚಿಟ್ಟೆ ಹಾಗೂ ಹುಲಿಗಳ ಆಕೃತಿಗೆ ಪುಷ್ಪ ಜೋಡಣೆ.

ವಿವಿಧ ಜಾತಿಯ ಪಾಪಸು ಕಳ್ಳಿಗಳ ಅಲಂಕಾರಿಕ ಜೋಡಣೆ ಹಾಗೂ ವರ್ಟಿಕಲ್‌ ಗಾರ್ಡನ್‌.

016 ಜಾತಿಯ ವಾರ್ಷಿಕ ಹಾಗೂ ಬಹುವಾರ್ಷಿಕ ವಿವಿಧ ಅಲಂಕಾರಿಕ ಪುಷ್ಪ ಕುಂಡಗಳ ಪ್ರದರ್ಶನ. 

ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಬೆಳೆಸಿದ ಗಿಡಗಳ ಪ್ರದರ್ಶನ ಹಾಗೂ ಇಲಾಖಾ ದರದಲ್ಲಿ ಮಾರಾಟ.

ಮಟ್ಟುಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆ ಸಂಗ್ರಹಾಲಯ ವೀಕ್ಷಣೆಗೆ ಅವಕಾಶ.

ಉಡುಪಿ ಹೂವುಗಳು, ಕ್ಯಾಕ್ಟಸ್‌ಗಳ ಪ್ರದರ್ಶನ, ಗಿಡಗಳ ಮಾರಾಟ ಇರಲಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.