ನಾಲ್ಕು ತಿಂಗಳಿಂದ ಮೊಟ್ಟೆ  ಖರೀದಿಗಿಲ್ಲ ಅನುದಾನ


Team Udayavani, Feb 27, 2019, 1:00 AM IST

egg.jpg

ಮಣಿಪಾಲ: ಗೌರವಧನದಲ್ಲೇ ಜೀವನ ಸಾಗಿಸುವ ಅಂಗನವಾಡಿ ಕಾರ್ಯಕರ್ತೆಯರು ಈಗ ತಮ್ಮ ಸಂಭಾವನೆಯಿಂದಲೇ ಅದೂ ಒಂದು ತಿಂಗಳಿಂದ ಬಾಕಿ ಇರುವ ಪರಿಸ್ಥಿತಿಯಲ್ಲಿ ಅಂಗನವಾಡಿ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ಖರೀದಿಸಿ ನೀಡುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅಕ್ಟೋಬರ್‌ನಿಂದ ಮೊಟ್ಟೆ ಖರೀದಿಸಲು ಇಲಾಖೆಯಿಂದ ಹಣ ಬಾರದ ಕಾರಣ  ಸಮಸ್ಯೆ ಉಂಟಾಗಿದೆ. ಇರುವ ಅಲ್ಪ ಆದಾಯದಲ್ಲಿ ಅಂಗನವಾಡಿ ಮತ್ತು ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ಅನುದಾನ ಸಕಾಲಕ್ಕೆ ಬಾರದಿರುವುದು ಸಂಕಷ್ಟಕ್ಕೀಡು ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 1,191 ಅಂಗನವಾಡಿ ಕೇಂದ್ರಗಳಿದ್ದು 24,311 ಮಂದಿ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ನೀಡಲಾಗುತ್ತದೆ. ಒಂದೆರಡು ತಿಂಗಳಾದರೂ ಅನುದಾನ ದೊರೆಯದಿದ್ದರೆ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದ ಕಾರ್ಯಕರ್ತೆಯರಿಗೆ 4 ತಿಂಗಳಿಂದ ಅನುದಾನ ಬಾರದಿರುವುದು ಭಾರೀ ತೊಂದರೆಯಾಗಿ ಪರಿಣಮಿಸಿದೆ. 

ಸರಕಾರದ “ಮೊಟ್ಟೆಗೆ’ 5 ರೂ. ಮಾತ್ರ! 
ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ 5.50/6 ರೂ. ಆದರೂ ಇಲಾಖೆ ಕೊಡುವುದು 5 ರೂ. ಮಾತ್ರ. ಹೆಚ್ಚುವರಿ ಮೊತ್ತವನ್ನು ಕಾರ್ಯಕರ್ತೆಯರೇ ಭರಿಸಬೇಕು. ಜತೆಗೆ ಭಾಗ್ಯಲಕ್ಷ್ಮೀ ಸಹಿತ ವಿವಿಧ ಮಕ್ಕಳ ಕಲ್ಯಾಣ ಯೋಜನೆಗಳನ್ನು ಕಾರ್ಯಕರ್ತೆಯರು ಅನುಷ್ಠಾನಿಸಬೇಕಾಗುತ್ತದೆ. ಈ ವೇಳೆ ಕೆಲವೊಮ್ಮೆ ಹೆಚ್ಚುವರಿ ಪ್ರತಿಗಳ ಜೆರಾಕ್ಸ್‌ ಖರ್ಚನ್ನು ಅವರೇ ಭರಿಸಬೇಕಾಗುತ್ತದೆ. 8 ಸಾವಿರ ರೂ. ಗೌರವಧನದಲ್ಲಿ ಇವೆಲ್ಲವನ್ನೂ ಕಾರ್ಯಕರ್ತೆಯರು ನಿರ್ವಹಿಸಬೇಕಿದೆ.

ಗೌರವಧನ ನಿಯಮಿತವಾಗಿಲ್ಲ
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನವೂ ನಿಯಮಿತವಾಗಿ ಬರುತ್ತಿಲ್ಲ ಎಂಬ ದೂರುಗಳಿವೆ. ಹಿಂದೊಮ್ಮೆ 3 ತಿಂಗಳ ಗೌರವಧನ ಬಾಕಿಯಾಗಿದ್ದರೆ ಪ್ರಸ್ತುತ ಒಂದು ತಿಂಗಳ ವೇತನ ಬಾಕಿ ಇದೆ ಎಂದು ತಿಳಿದು ಬಂದಿದೆ. ಕೊಡುವ ಗೌರವಧನವನ್ನಾದರೂ ಸಕಾಲಿಕವಾಗಿ ನೀಡಿದರೆ ಉತ್ತಮ ಎಂಬುದು ಕಾರ್ಯಕರ್ತೆಯರ ಒತ್ತಾಯವಾಗಿದೆ. 

ಯಾಕೆ ಸಮಸ್ಯೆ?
ಸೆಪ್ಟಂಬರ್‌ ವರೆಗೆ ಅಂಗನವಾಡಿ ಕಾರ್ಯಕರ್ತೆಯರ ವೈಯಕ್ತಿಕ ಖಾತೆಗೆ ಮೊಟ್ಟೆ ಖರೀದಿ
ಅನುದಾನವೂ ಬರುತ್ತಿತ್ತು. ಸರಕಾರದ ಆದೇಶ ಬಂದಿದ್ದರಿಂದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಅಂಗನವಾಡಿ ಕಾರ್ಯಕರ್ತೆಯ ಹೆಸರಿಗೆ ಜಂಟಿ ಖಾತೆ ತೆರೆಯಬೇಕಿದ್ದು ಇದಕ್ಕೆ ಅನುದಾನ ಒದಗಿಸಬೇಕಾಗುತ್ತದೆ. ಜತೆಗೆ ಉಡುಪಿ ಮತ್ತು ಗದಗ ಜಿಲ್ಲೆಗಳಲ್ಲಿ ಖಜಾನೆ 2 ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರಿಂದ ಇದರ ಮೂಲಕವೇ ಅನುದಾನವನ್ನು ಜಂಟಿ ಖಾತೆಗೆ ಹಾಕಬೇಕಾಗುತ್ತದೆ. ಎಲ್ಲರೂ ಜಂಟಿ ಖಾತೆ ತೆರೆಯದೇ ಇದ್ದುದರಿಂದ ಈ ಸಮಸ್ಯೆ ಉಂಟಾಗಿದೆ. ಆದರೆ ಖಾತೆಯನ್ನು ಸಕಾಲದಲ್ಲಿ ತೆರೆದವರಿಗೂ ಅನುದಾನ ಬಾರದಿರುವುದು ವಿಪರ್ಯಾಸ.

ಖಜಾನೆ 2 ಮೂಲಕ ಅನುದಾನ ಬಿಡುಗಡೆ ಮಾಡಬೇಕಿದೆ. ಹಲವರು ಜಂಟಿ ಖಾತೆ ತೆರೆಯದಿರುವುದರಿಂದ ಸಮಸ್ಯೆಯಾಗಿತ್ತು. ಬಾಕಿ ಮೊತ್ತವನ್ನು ಒಂದೇ ಕಂತಿನಲ್ಲಿ ಖಾತೆಗೆ ಜಮೆ ಮಾಡಲಾಗುವುದು. ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಒಂದೇ ಪ್ರತಿ ಸಲ್ಲಿಸಿದರೆ ಸಾಕು. ಹೆಚ್ಚುವರಿ ಪ್ರತಿ ಅಗತ್ಯವಿಲ್ಲ. 
-ಗ್ರೇಸಿ ಗೊನ್ಸಾಲ್ವಿಸ್‌, ಉಪನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.