Udupi; ಕಲೆ, ಸಾಹಿತ್ಯದಲ್ಲಿ ಮತ್ತಷ್ಟು ಸಂಶೋಧನೆ ಅಗತ್ಯ: ಡಾ| ಕೆ.ಪಿ. ರಾವ್‌

"ಜಿಲ್ಲಾ ಬರಹಗಾರರ ಕೋಶ' ಕಾವ್ಯ ಸಂಪುಟ ಬಿಡುಗಡೆ ಗೋಷ್ಠಿಗಳ ಸಮಾರೋಪ

Team Udayavani, Jan 8, 2024, 12:18 AM IST

Udupi; ಕಲೆ, ಸಾಹಿತ್ಯದಲ್ಲಿ ಮತ್ತಷ್ಟು ಸಂಶೋಧನೆ ಅಗತ್ಯ: ಡಾ| ಕೆ.ಪಿ. ರಾವ್‌

ಉಡುಪಿ: ಕನ್ನಡ ಸಾಹಿತ್ಯ ಮತ್ತು ಕಲೆಯ ವಿಚಾರದಲ್ಲಿ ಇಂದಿನ ಪೀಳಿಗೆ ಮತ್ತಷ್ಟು ಸಂಶೋಧನೆ, ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗಣಕ ತಜ್ಞ ಡಾ| ಕೆ.ಪಿ. ರಾವ್‌ ಅಭಿಪ್ರಾಯಪಟ್ಟರು.

ಎಂಜಿಎಂ ಕಾಲೇಜು ನೂತನ ರವೀಂದ್ರ ಮಂಟಪದಲ್ಲಿ ರವಿವಾರ ಡಾ| ಅನಿಲ್‌ ಕುಮಾರ್‌ ಅವರು ರಚಿಸಿದ “ಜಿಲ್ಲಾ ಬರಹಗಾರರ ಕೋಶ’ ಕಾವ್ಯ ಸಂಪುಟ ಬಿಡುಗಡೆ ಕಾರ್ಯಕ್ರಮದ ಗೋಷ್ಠಿಗಳ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ಷೇತ್ರ ಕಾರ್ಯ ಅಧ್ಯಯನದ ಬಗ್ಗೆ ಇಂದಿನ ಯುವ ಪೀಳಿಗೆ ಆಸಕ್ತಿಯಿಂದ ಮುಂದಾಗಬೇಕು. ಎಲ್ಲವನ್ನು ಕಂಪ್ಯೂಟರ್‌ ಮಾಹಿತಿಯೇ ಆಧರಿಸಿ ಅಧ್ಯಯನ ಮಾಡುವುದು ಸರಿಯಾದ ಪ್ರಕ್ರಿಯೆಯಲ್ಲ. ಮಾಹಿತಿ ಮಾತ್ರವಲ್ಲದೆ ವಿಶ್ಲೇಷಣೆಯ ಅಗತ್ಯವೂ ಇದ್ದು, ಇದಕ್ಕೆ ಕ್ಷೇತ್ರ ಕಾರ್ಯದ ಅಧ್ಯಯನ, ಸಂಶೋಧನೆ ಅಗತ್ಯವಾಗಿದೆ. ಕನ್ನಡದ ಸಾಹಿತ್ಯ, ಕಲೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆದು ಮುಂದಿನ ಪೀಳಿಗೆಗೂ ಈ ಮೌಲ್ಯ ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಡಾ| ಅನಿಲ್‌ ಕುಮಾರ್‌ ಅವರ “ಜಿಲ್ಲಾ ಬರಹಗಾರರ ಕೋಶ’ ಯುವ ಸಂಶೋಧಕರಿಗೆ ಅಗತ್ಯ ಮಾರ್ಗದರ್ಶಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಯು. ಸೀತರಾಮ್‌ ಶೆಟ್ಟಿ ಉಪ್ಪುಂದ, ಶ್ರೀ ಸಿದ್ಧಿ ವಿನಾಯಕ ಪ.ಪೂ. ಕಾಲೇಜು ಸಂಸ್ಥಾಪಕ ಕೆರಾಡಿ ಚಂದ್ರಶೇಖರ್‌ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಕೃತಿ ಸಂಪಾದಕ ಡಾ| ಅನಿಲ್‌ ಕುಮಾರ್‌ ಆಶಯ ಭಾಷಣ ಮಾಡಿದರು.
ಲೇಖಕರಾದ ನಾರಾಯಣ ಬಲ್ಲಾಳ್‌, ಗೋಪಾಲ ಭಟ್‌, ಡಾ| ಎನ್‌.ಟಿ. ಭಟ್‌, ಭುವನಪ್ರಸಾದ್‌ ಹೆಗ್ಡೆ ಮತ್ತು ಪ್ರಮುಖರಾದ ನೀಲಕಂಠ ಪ್ರಭು ತೆಕ್ಕಟ್ಟೆ, ಯು. ನಜೀರ್‌ ಅಹಮ್ಮದ್‌, ಗಿರಿಜಾ ಆರ್‌. ಶೆಟ್ಟಿ, ಸುಲೋಚನಾ ಆರ್‌. ಶೆಟ್ಟಿ, ಡಾ| ಲಕ್ಷ್ಮೀಪ್ರಕಾಶ್‌, ಜಯ ಕೆ. ಶೆಟ್ಟಿ, ಸದಾನಂದ ಶೆಣೈ, ಸುದರ್ಶನ್‌ ನಾಯಕ್‌, ಡಾ| ಮಹಾಬಲೇಶ್ವರ ರಾವ್‌, ಪ್ರೊ| ಮುರಳೀಧರ ಉಪಾಧ್ಯ ಹಿರಿಯಡ್ಕ, ಡಾ| ಪುತ್ತಿ ವಸಂತ ಕುಮಾರ್‌, ರಾಘವೇಂದ್ರ ತುಂಗ, ನಾರಾಯಣ ಶೆಣೈ, ಸುಜಯ ಶೇಖರ್‌ ಶೆಟ್ಟಿ, ಶರತ್‌ ಕುಮಾರ್‌ ಶೆಟ್ಟಿ, ಡಾ| ಜಯರಾಮ ಶೆಟ್ಟಿಗಾರ್‌, ವಿಠಲ್‌ ಶೆಟ್ಟಿಗಾರ್‌ ಸಗ್ರಿ, ಮಂಜುನಾಥ ಶೆಟ್ಟಿ, ಕೋಟ ಶ್ರೀಕೃಷ್ಣ ಅಹಿತಾನಲ ಉಪಸ್ಥಿತರಿದ್ದರು. ಪ್ರೊ| ಸುರೇಂದ್ರನಾಥ ಶೆಟ್ಟಿ ಕೊಕ್ಕರ್ಣೆ ಸ್ವಾಗತಿಸಿ, ರಾಘವೇಂದ್ರ ತುಂಗ ನಿರೂಪಿಸಿದರು.

ಬೆಳಗ್ಗಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಸಂಪುಟವನ್ನು ಹಂಪಿ ಕನ್ನಡ ವಿ.ವಿ. ವಿಶ್ರಾಂತ ಪ್ರಾಧ್ಯಾಪಕ ಡಾ| ಸುಬ್ಬಣ್ಣ ರೈ ಬಿಡುಗಡೆಗೊಳಿಸಿದರು. ಡಾ| ಪಾದೇಕಲ್ಲು ವಿಷ್ಣು ಭಟ್‌, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಜಗದೀಶ್‌ ಶೆಟ್ಟಿ, ಬ್ಯಾಂಕ್‌ ಆಫ್‌ ಬರೋಡಾ ಡಿಸಿಎಂಡಿ, ಮುಂಬಯಿ ಎಂ. ರವೀಂದ್ರ ರೈ, ಬಾಲಾಜಿ ಪ್ರಕಾಶನ ಸಂಸ್ಥೆ ಉದಯ ಶೆಟ್ಟಿ ಉಪಸ್ಥಿತರಿದ್ದರು. ಅನಂತರ ಕಲೆ, ಸಾಹಿತ್ಯ, ಜಾನಪದ ಸಹಿತ ವಿವಿಧ ಕ್ಷೇತ್ರದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿಗಳು ನಡೆದವು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.