ಗ್ರಾ.ಪಂ. ಚುನಾವಣೆಗೆ ಜಿಲ್ಲಾಡಳಿತದ ಪೂರ್ವ ತಯಾರಿ ಆರಂಭ

ಅವಧಿ ಮುಕ್ತಾಯದತ್ತ ಗ್ರಾಮಪಂಚಾಯತ್‌ ಆಡಳಿತ ಮಂಡಳಿಗಳು

Team Udayavani, Mar 11, 2020, 10:46 PM IST

election

ಉಡುಪಿ: ಜೂನ್‌ ತಿಂಗಳಲ್ಲಿ ಅವಧಿ ಮುಗಿಯಲಿರುವ ಗ್ರಾ.ಪಂ. ಆಡಳಿತ ಮಂಡಳಿಗಳಿಗೆ ಚುನಾವಣೆ ನಡೆಸಲು ಬೇಕಾದ ಮತದಾರರ ಯಾದಿಯನ್ನು ತಯಾರಿ ಸಲಾಗುತ್ತಿದೆ. ಗ್ರಾ.ಪಂ. ಕ್ಷೇತ್ರ ವ್ಯಾಪ್ತಿಯ ಮತದಾರರನ್ನು ಗುರುತಿಸುವ ಕೆಲಸ ಈಗಾಗಲೇ ಆರಂಭ ಗೊಂಡಿದ್ದು ಮಾ.14ರ ವರೆಗೆ ನಡೆಸಲಾಗುತ್ತದೆ. ಮನೆ ಮನೆಗೆ ಭೇಟಿ ನೀಡಿ ಕ್ಷೇತ್ರದ ಗಡಿ ಗುರುತಿಸುವಿಕೆ ಕೆಲಸ ಮಾ. 16ರಿಂದ 23ರ ವರೆಗೆ ನಡೆಯಲಿದೆ. ಕರಡು ಮತದಾರರ ಪಟ್ಟಿಯನ್ನು ಮಾ. 30ರಂದು ಪ್ರಕಟಿಸಲಾಗುತ್ತದೆ. ಆಯಾ ಗ್ರಾ.ಪಂ., ತಾ.ಪಂ., ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾ. 31ರಂದು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಎ. 8ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು ಎ. 15ರ ಒಳಗೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ದಿನಾಂಕ ನಿಗದಿಪಡಿಸಲಾಗಿದೆ. ಎ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ.

ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತ್ತು ಗ್ರಾಮ ಕರಣಿಕರಿಗೆ ಮತದಾರರನ್ನು ಗುರುತಿಸುವ ಕೆಲಸಗಳಿಗೆ ಈಗಾಗಲೇ ಸೂಚನೆಯನ್ನು ಜಿಲ್ಲಾಡಳಿತದಿಂದ ಕೊಡಲಾಗಿದೆ.

ಚುನಾವಣೆಗೆ 45 ದಿನಗಳು ಮುಂಚಿತವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಬೇಕಾಗಿರುವುದರಿಂದ ಮೇ ತಿಂಗಳಲ್ಲಿ ಗ್ರಾ.ಪಂ. ಚುನಾವಣೆ ನಡೆಯಬಹುದು ಎಂದು ಊಹಿಸಲಾಗುತ್ತಿದೆ. ಗ್ರಾಮ ಸ್ವರಾಜ್‌ ಕಾಯಿದೆಗೆ ಸರಕಾರ ತಿದ್ದುಪಡಿ ತರುವುದಾದರೆ ಜೂನ್‌ ತಿಂಗಳಲ್ಲಿ ಅವಧಿ ಮುಗಿದಾಕ್ಷಣ ಆಡಳಿತಾಧಿಕಾರಿಗಳನ್ನು ನೇಮಿಸಿ ಮುಂದಿನ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕಾಗುತ್ತದೆ.

ಉಡುಪಿ ಜಿಲ್ಲೆಯಲ್ಲಿ 158 ಗ್ರಾ.ಪಂ.ಗಳಿದ್ದು ಇವುಗಳಲ್ಲಿ ಬೈಂದೂರಿನ ಮೂರು ಗ್ರಾ.ಪಂ.ಗಳನ್ನು (ಬೈಂದೂರು, ಯಡ್ತರೆ, ಪಡುವರಿ) ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಿ ಅಧಿಸೂಚನೆ ಹೊರಡಿಸಿರುವುದರಿಂದ ಇವುಗಳನ್ನು ಹೊರತುಪಡಿಸಿ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ. ಹೆಬ್ರಿ ಮತ್ತು ಚಾರ ಗ್ರಾ.ಪಂ.ಗಳನ್ನು ಮೇಲ್ದಜೆಗೇರಿಸಿ ಪಟ್ಟಣ ಪಂಚಾಯತ್‌ ಆಗಿ, ಬ್ರಹ್ಮಾವರದ ಆಸುಪಾಸಿನ ಹಂದಾಡಿ, ವಾರಂಬಳ್ಳಿ, ಹಾರಾಡಿ, ಚಾಂತಾರು ಗ್ರಾ.ಪಂ.ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವವಿದ್ದರೂ ಇದಿನ್ನೂ ಘೋಷಣೆಯಾಗಿಲ್ಲ. ಹೀಗಾಗಿ ಘೋಷಣೆಯಾಗುವ ಮುನ್ನ ಒಂದು ವೇಳೆ ಗ್ರಾಮ ಪಂಚಾಯತ್‌ ಚುನಾವಣೆ ನಿಗದಿಯಾದರೆ ಗ್ರಾಮಪಂಚಾಯತ್‌ ಚುನಾವಣೆ ಇಲ್ಲಿಯೂ ನಡೆಯಲಿದೆ. ಮೇಲ್ದರ್ಜೆಗೇರಿದ ಬಳಿಕ ಪರಿವರ್ತಿತ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ.

ಹೊಸ ಗ್ರಾಮ ಪಂಚಾಯತ್‌
ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿದ್ದ ನಾಡ ಗ್ರಾ.ಪಂ.ನಲ್ಲಿ ಸೇನಾಪುರ, ನಾಡ, ಹಡವು, ಬಡಾಕೆರೆ ಗ್ರಾಮಗಳಿವೆ. ತಾಲೂಕು ಬೇರ್ಪಡೆಯಾದ ಬಳಿಕ ಇದರಲ್ಲಿ ಸೇನಾಪುರ ಗ್ರಾಮವು ಕುಂದಾಪುರ ತಾಲೂಕಿನಲ್ಲಿದ್ದು ಉಳಿದ ನಾಡ, ಹಡವು, ಬಡಾಕೆರೆ ಗ್ರಾಮಗಳು ಬೈಂದೂರು ತಾಲೂಕಿಗೆ ಸೇರ್ಪಡೆಯಾಗಿದೆ. ಸೇನಾಪುರ ಗ್ರಾಮದಲ್ಲಿ 2,500 ಜನಸಂಖ್ಯೆ ಇರುವುದರಿಂದ ಹೊಸ ಗ್ರಾ.ಪಂ. ಆಗಿ ರೂಪಿಸಲು ಅವಕಾಶವಿದೆ. ಇದರ ಪ್ರಸ್ತಾವ ಜಿಲ್ಲಾಡಳಿತದಿಂದ ಸರಕಾರಕ್ಕೆ ಹೋಗಿದೆ. ಹೀಗಾಗಿ ಮುಂದೆ ಸೇನಾಪುರ ಗ್ರಾ.ಪಂ. ರಚನೆಯಾಗುವ ಸಾಧ್ಯತೆ ಇದೆ. ಕಮಲಶಿಲೆ ಗ್ರಾ.ಪಂ.ನಲ್ಲಿ ಹಳ್ಳಿಹೊಳೆ ಮತ್ತು ಕಮಲಶಿಲೆ ಗ್ರಾಮಗಳಿವೆ. ಈಗ ಕಮಲಶಿಲೆ ಕುಂದಾಪುರ ತಾಲೂಕಿಗೂ, ಹಳ್ಳಿಹೊಳೆ ಬೈಂದೂರು ತಾಲೂಕಿಗೂ ಹಂಚಿಕೆಯಾಗಿದೆ. ಕಮಲಶಿಲೆ ಗ್ರಾಮದಲ್ಲಿ 1,450 ಜನಸಂಖ್ಯೆ ಇರುವ ಕಾರಣ ಕಾಯಿದೆ ಪ್ರಕಾರ ಹೊಸ ಗ್ರಾ.ಪಂ. ರಚನೆಗೆ ಅವಕಾಶವಿಲ್ಲ. ಹೀಗಾಗಿ ಕಮಲಶಿಲೆ ಗ್ರಾಮವನ್ನು ಪಕ್ಕದ ಆಜ್ರಿ ಗ್ರಾ.ಪಂ.ಗೆ ಸೇರಿಸುವ ಪ್ರಸ್ತಾವವಿದೆ.

ಪ್ರಕ್ರಿಯೆ ಆರಂಭ
ಸರಕಾರದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಯ ಪ್ರಕ್ರಿಯೆ ಆರಂಭಗೊಂಡಿದೆ. ಇದಕ್ಕಾಗಿ ಬಿಎಲ್‌ಒ ಮತ್ತು ಗ್ರಾಮಕರಣಿಕರಿಗೆ ಸೂಚನೆ ನೀಡಲಾಗಿದೆ.
-ಆನಂದಪ್ಪ ನಾಯ್ಕ, ಚುನಾವಣ ತಹಶೀಲ್ದಾರ್‌, ಉಡುಪಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.