ಸೂರಿಲ್ಲದವರಿಗೆ ಮಾದರಿ ಸಮುಚ್ಛಯ

ಪುರಸಭೆ ವ್ಯಾಪ್ತಿಯಲ್ಲಿ ಜಿ- ಪ್ಲಸ್‌ ಮಾದರಿ ಮನೆ, ಮೇ 8ಕ್ಕೆ ಭೂಮಿಪೂಜೆ

Team Udayavani, May 5, 2022, 11:05 AM IST

suru

ಕಾರ್ಕಳ: ಬಡವರಿಗೆ ಸೂರು ಕಲ್ಪಿಸಲು ಸರಕಾರ ನಾನಾ ಯೋಜನೆಗಳನ್ನು ತಂದರೂ ಇನ್ನು ಸೂರಿಲ್ಲದೆ ಅನೇಕ ಮಂದಿ ಇದ್ದಾರೆ. ಕಾರ್ಕಳ ಪುರಸಭೆ ಜಿ-ಪ್ಲಸ್‌ ಮಾದರಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದು, ಮೇ 8ಕ್ಕೆ ಮಾದರಿ ಸಮುಚ್ಛಯ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ.

ಪುರಸಭೆ ವ್ಯಾಪ್ತಿಯ 16 ಕೋ.ರೂ. ಅಂದಾಜು ಪಟ್ಟಿಯಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಪತ್ತೂಂಜಿಕಟ್ಟೆಯಲ್ಲಿ ಗೊತ್ತುಪಡಿಸಿದ ಆರು ಎಕರೆ ಜಾಗದಲ್ಲಿ ಸಮುಚ್ಛಯ ನಿರ್ಮಾಣವಾಗಲಿದೆ. ಮೇ 8ಕ್ಕೆ ಸಮುತ್ಛಯ ನಿರ್ಮಾಣಕ್ಕೆ ಸಂಬಂಧಿಸಿ ಭೂಮಿಪೂಜೆಗೆ ದಿನ ನಿಗದಿಪಡಿಸಲಾಗಿದೆ.

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಬಡ ನಿವೇಶನ ರಹಿತರಿಗಾಗಿ ಮನೆ ನಿರ್ಮಾಣವಾಗಲಿದೆ. ಆರಂಭದಲ್ಲಿ ಸುಮಾರು ಆರು ಎಕರೆ ವಿಸ್ತೀರ್ಣ ಜಾಗದಲ್ಲಿ 250 ಮನೆಗಳು ನಿರ್ಮಾಣವಾಗಲಿವೆ. ಹಲವು ವರ್ಷಗಳ ಹಿಂದೆಯೇ ಜಾಗ ಗುರುತಿಸಲಾಗಿತ್ತಾದರೂ ಈ ಪ್ರದೇಶಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಿರಲಿಲ್ಲ. ಈಗ ಅಲ್ಲಿಗೆ ಮೂಲ ಸೌಕರ್ಯ ಒದಗಿಸಿ ವ್ಯವಸ್ಥಿತವಾಗಿ ಮನೆಗಳ ನಿರ್ಮಾಣವಾಗಲಿದೆ.

ಸುಮಾರು 358 ಚದರಡಿ ವಿಸ್ತೀರ್ಣದ ಒಂದು ಮನೆ ನಿರ್ಮಾಣಕ್ಕೆ 6,44,378 ರೂ. ವೆಚ್ಚ ತಗಲಲಿದೆ. ಅದರಲ್ಲಿ ಪರಿಶಿಷ್ಟ ಜಾತಿ-ಪಂಗಡಗಳವರಿಗೆ ಕೇಂದ್ರ ಸರಕಾರದಿಂದ 1.5 ಲಕ್ಷ ರೂ., ರಾಜ್ಯ ಸರಕಾರದಿಂದ 2 ಲಕ್ಷ ರೂ. ಸಹಾಯಧನ ಸಿಗಲಿದೆ. ಉಳಿದ ಮೊತ್ತವನ್ನು ಆರ್ಹ ಫ‌ಲಾನುಭವಿಗಳು ಭರಿಸಬೇಕು. ಅದಕ್ಕೆ ಅಗತ್ಯ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕ್‌ನಿಂದ ಒದಗಿಸಿ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಲವನ್ನು ಪ್ರತೀ ತಿಂಗಳು ಮರುಪಾವತಿಸಿ, ಸಾಲ ಮರುಪೂರಣಗೊಳಿಸಿದ ಬಳಿಕವಷ್ಟೇ ಆ ಮನೆ ವಾರಸುದಾರರ ಪಾಲಿಗೆ ಸೇರಲಿದೆ. ಅಲ್ಲಿಯ ತನಕ ನಿರ್ಮಾಣವಾದ ಮನೆಯಲ್ಲಿ ವಾಸಕ್ಕೆ ದೊರಕಲಿದೆ.

ನಿವೇಶನಕ್ಕೆ ಸಂಬಂಧಿಸಿ ಶೇ. 10ರ ಮೊತ್ತವನ್ನು ಮುಂಗಡವಾಗಿ ಪಾವತಿಸಬೇಕು. ಸಾಮಾನ್ಯ ವರ್ಗಕ್ಕೂ ಇದರಲ್ಲಿ ಸವಲತ್ತು ಪಡೆಯಲು ಅವಕಾಶವಿದೆ. ಫ‌ಲಾನುಭವಿಗಳಿಗೆ ಕೇಂದ್ರ ಸರಕಾರದಿಂದ 1.50 ಲಕ್ಷ ರೂ., ರಾಜ್ಯದಿಂದ 1.20 ಲಕ್ಷ ರೂ. ಸಹಾಯಧನ ದೊರಕಲಿದೆ. ಉಳಿದ ಮೊತ್ತವನ್ನು ರಾಷ್ಟ್ರೀಯ ಬ್ಯಾಂಕ್‌ ಮೂಲಕ ಸಾಲ ರೂಪದಲ್ಲಿ ಪಡೆಯಲು ಅವಕಾಶವಿರುತ್ತದೆ. ಸಾಮಾನ್ಯ ವರ್ಗದ ಅಪೇಕ್ಷಿತರು ಶೇ. 15ರ ಮೊತ್ತವನ್ನು ಮುಂಗಡ ರೂಪದಲ್ಲಿ ಪಾವತಿಸಬೇಕಾಗುತ್ತದೆ.

ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 9 ಕಡೆ ಸ್ಲಂ ಏರಿಯಾಗಳಿವೆ. ಬಂಗ್ಲೆಗುಡ್ಡೆ ನರ್ಸಿಂಗ್‌ ಹೋಂ ಹಿಂಭಾಗ, ಬಂಗ್ಲೆಗುಡ್ಡೆ, ಐತಕಟ್ಟೆ, ಬಂಡಿಮಠ, ರಣವೀರ ಕಾಲನಿ, ಮರಿಣಾಪುರ, ಬೊಬ್ಬಳ ಕಾಲನಿ, ದಾನಶಾಲೆ, ಹವಾಲ್ದಾರಬೆಟ್ಟು ಸೇರಿ 9 ಕಡೆ ಕೊಳಚೆಗೇರಿ ಪ್ರದೇಶಗಳನ್ನು ಗುರುತಿಸಲಾಗಿದೆ.

ಪುರಸಭೆ ಗುರುತಿಸಲಾದ ಇತರೆಡೆಗಳಲ್ಲಿ ಅನುಷ್ಠಾನ ಗೊಳಿಸುವ ಚಿಂತನೆ ಆರಂಭದಲ್ಲಿ ಇತ್ತಾದರೂ ಅದಕ್ಕೆ ಪೂರಕ ಸಕಾರಾತ್ಮಕ ಸ್ಪಂದನೆ ಸಿಗದೆ ಹೋದುದರಿಂದ ಪತ್ತೂಂಜಿಕಟ್ಟೆ ಪರಿಸರದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಚಿಂತನೆ ಈಗ ಮಾಡಲಾಗಿದೆ. ವಸತಿ ಸಮುಚ್ಛಯ ನೆಲೆಯಲ್ಲಿ ಈ ಯೋಜನೆ ಕಾರ್ಯಗತಗೊಂಡರೆ ಅದಕ್ಕೆ ತಗಲುವ ವೆಚ್ಚ ಹೆಚ್ಚಳಗೊಳ್ಳಲಿದೆ. ಕೇಂದ್ರ, ರಾಜ್ಯ ಸರಕಾರ ಈ ಹಿಂದೆ ನಿಗದಿಪಡಿಸಿದ ಸಹಾಯಧನ ಫ‌ಲಾನುಭವಿಗಳಿಗೆ ದೊರಕಲಿದ್ದು ಉಳಿದ ಮೊತ್ತ ಬ್ಯಾಂಕ್‌ನಿಂದ ಸಾಲ ರೂಪದಲ್ಲಿ ಪಡೆಯಬೇಕು.

ಕಾಲ ಕೂಡಿ ಬಂದಿದೆ

ಸರಕಾರದ ಜನಪರ ಯೋಜನೆಯಿದು. ಸಮುಚ್ಛಯ ನಿರ್ಮಾಣಕ್ಕೆ ಸಂಬಂಧಿಸಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದರೂ ಅದಕ್ಕೆ ಈಗ ಕಾಲ ಕೂಡಿ ಬಂದಿದೆ. ಆರ್ಹ ನಿವೇಶನ ರಹಿತರಿಗೆ ಅನುಕೂಲವಾಗಲಿದೆ. ಸಚಿವರು ಶೀಘ್ರದಲ್ಲೇ ಭೂಮಿ ಪೂಜೆ ನಡೆಸುವರು. -ಸುಮಾಕೇಶವ್‌, ಅಧ್ಯಕ್ಷೆ, ಪುರಸಭೆ ಕಾರ್ಕಳ

ಅರ್ಜಿಗಳ ಪರಿಶೀಲನೆ

ಪುರಸಭೆ ವ್ಯಾಪ್ತಿಯಲ್ಲಿ 9 ಕೊಳಚಗೇರಿ ಸ್ಥಳ ಗುರುತಿಸಲಾಗಿದೆ. ವಸತಿರಹಿತರ ಪಟ್ಟಿ ಸಿದ್ಧಪಡಿಸಲಾಗಿದೆ. ಬಂದ ಅರ್ಜಿಗಳನ್ನು ಪರಿಶೀಲಿಸಿ ಅವರಲ್ಲಿ ಅರ್ಹರನ್ನು ಅಂತಿಮಗೊಳಿಸಲಾಗುವುದು. -ರೂಪಾ ಟಿ. ಶೆಟ್ಟಿ, ಮುಖ್ಯಾಧಿಕಾರಿ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.