ಆರೂರು ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ


Team Udayavani, Oct 1, 2019, 5:31 AM IST

2909BVRE2

ಬ್ರಹ್ಮಾವರ: ಆರೂರು ಗ್ರಾಮ ಪಂಚಾಯತ್‌ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.ಕುಂಜಾಲು ಗ್ರಾ.ಪಂ.ನಿಂದ ವಿಂಗಡನೆಗೊಂಡು ಹೊಸದಾಗಿ 2015ರಲ್ಲಿ ಆರೂರು ಗ್ರಾಮ ಪಂಚಾಯತ್‌ ಉದಯಗೊಂಡಿತು. ಕುಂಜಾಲಿನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಪಂಚಾಯತ್‌ ಹೊಸ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಪಂಚಾಯತ್‌ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 35 ಕುಟುಂಬ, 200ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಕುಟುಂಬಗಳಿದ್ದು, 5ಅಂಗನವಾಡಿ, ಒಂದು ಹಿರಿಯ, ಒಂದು ಕಿರಿಯ ಪ್ರಾಥಮಿಕ ಮತ್ತು ಒಂದು ವಸತಿ ಶಾಲೆಯನ್ನು ಹೊಂದಿದೆ.

ಪಂಚಾಯತ್‌ ಸಾಧನೆ
14ನೇ ಹಣಕಾಸು ಯೋಜನೆಯಡಿ ಅನುದಾನ ವನ್ನು ವಲಯವಾರು ಸಂಪೂರ್ಣ ಸಮರ್ಪಕವಾಗಿ ಬಳಕೆ, ವರ್ಗ1ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಕ್ರೀಡೆ, ಅಂಗವಿಕಲರಿಗೆ ಕಾದಿರಿಸುವಿಕೆಯ ಅನುದಾನದ ಸಂಪೂರ್ಣ ಬಳಕೆ, ಸಂಪನ್ಮೂಲ ಕ್ರೋಡೀಕರಣದ ಮುಖ್ಯ ಆಧಾರವಾಗಿರುವ ತೆರಿಗೆ ವಸೂಲಾತಿಯಲ್ಲಿ ಶೇ.98 ಸಾಧನೆ,ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಹಾಗೂ ಪರಿಣಾಮಕಾರಿ ಅನುಷ್ಠಾನ, ಪಂಚಾಯತ್‌ ವ್ಯಾಪ್ತಿಯಲ್ಲಿ ರೂ.13.01ಲಕ್ಷದಷ್ಟು ಅನುದಾನವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸ್ತುತ ಸಾಲಿನಲ್ಲಿ ಖರ್ಚು, ನಿಯಮಿತವಾಗಿ ಗ್ರಾಮ ಸಭೆ, ಸಾಮಾನ್ಯ ಸಭೆ, ಸ್ಥಾಯೀ ಸಮಿತಿ ಸಭೆಗಳು ಮತ್ತು ಇತರ ಮಾಹಿತಿ ಸಭೆಗಳನ್ನು ಆಯೋಜಿಸುತ್ತಿದೆ.

ವಾಟ್ಸಾಪ್‌ ಸಂದೇಶ
ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ, ಗ್ರಾಮಸ್ಥರಿಗೆ ಪಂಚಾಯತ್‌ ಮತ್ತು ಗ್ರಾಮದಲ್ಲಿ ನಡೆಯುವ ವಿದ್ಯಮಾನಗಳು ಹಾಗೂ ಸಮಸ್ಯೆಗಳ ಬಗ್ಗೆ ಅಧ್ಯಕ್ಷರು, ಪಿಡಿಒ, ಸದಸ್ಯರಿಗೆ ವಾಟ್ಸಾಪ್‌ ಗ್ರೂಪ್‌ಗ್ಳ ಮೂಲಕ ಸಂದೇಶ ರವಾನಿಸುವ ಅವಕಾಶ ಮತ್ತು ಸಲಹೆ ಸೂಚನೆಗಳನ್ನು ನೀಡುವ ಅವಕಾಶ ಕಲ್ಪಿಸಿರುವುದು ವಿಶೇಷವಾಗಿದೆ.

ಮಾಹಿತಿ ಶಿಬಿರ
ಸ್ಥಳೀಯ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ, ಸರಕಾರದ ಸವಲತ್ತು ನೋಂದಣಿ, ಮಾಹಿತಿ ಶಿಬಿರ, ಮೆಸ್ಕಾಂ ಜತೆಗೂಡಿ ವಿದ್ಯುತ್‌ ಸರಬರಾಜಿಗೆ ತೊಂದರೆ ಆಗುತ್ತಿರುವ ಮರದ ಕೊಂಬೆಗಳನ್ನು ಕಡಿಯುವುದಕ್ಕೆ ಸಹಕಾರ ನೀಡುತ್ತಿದೆ.

ಸರಕಾರದ ಮಾನದಂಡ ಪ್ರಕಾರದ ಅನುಪಾತದಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ಮೊದಲ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಅ. 2ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಂದ ಈ ಪುರಸ್ಕಾರವನ್ನು ಅಧ್ಯಕ್ಷರು, ಪಿಡಿಒ ಪಡೆಯಲಿದ್ದಾರೆ.

ಸ್ವತ್ಛತೆ
ವಿದ್ಯುತ್‌ ಹಾಗೂ ಕುಡಿಯುವ ನೀರಿನ ಅಪವ್ಯಯ ತಡೆಯಲು ಓವರ್‌ ಹೆಡ್‌ ಟ್ಯಾಂಕ್‌ಗೆ ಮೊಬೈಲ್‌ ವಾಟರ್‌ ಲೆವೆಲ್‌ ಕಂಟ್ರೋಲರ್‌ ಅಳವಡಿಕೆ, ಗ್ರಾಮದಲ್ಲಿ ದಾರಿದೀಪ, ಸೋಲಾರ್‌ ದೀಪಗಳ ಅಳವಡಿಕೆ, ಸ್ವತ್ಛತೆಗೆ, ತ್ಯಾಜ್ಯ ನಿರ್ಮೂಲನೆಗೆ ವಿಶೇಷ ಕ್ರಮ ಕೈಗೊಳ್ಳುವ ಜತೆಗೆ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ.

ಇನ್ನಷ್ಟು ಸ್ಫೂರ್ತಿ
ಪಂಚಾಯತ್‌ ತಂಡದ ಸತತ ಪ್ರಯತ್ನ ಹಾಗೂ ಮೇಲಧಿಕಾರಿ, ಜನಪ್ರತಿನಿಧಿಯವರ, ಗ್ರಾಮಸ್ಥರ ಸಹಕಾರದಿಂದ ಪ್ರಶಸ್ತಿ ಪಡೆಯಲು ಸಾಧ್ಯವಾಯಿತು. ಮುಂದೆ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಸ್ಫೂರ್ತಿ ನೀಡಿದೆ.
-ಗೀತಾ ಬಾಳಿಗಾ,ಪಿಡಿಒ ಆರೂರು

ತಂಡ ಪ್ರಯತ್ನದ ಫಲ
ಪಂಚಾಯತ್‌ನ ಸರ್ವಾಂಗೀಣ ಅಭಿವೃದ್ಧಿ ಗುರುತಿಸಿ ರಾಜ್ಯ ಸರಕಾರ ನೀಡಿರುವ ಪುರಸ್ಕಾರ ಸಂತಸ ತಂದಿದೆ. ಸಹಕರಿಸಿದ ಗ್ರಾಮಸ್ಥರನ್ನು ಮರೆಯುವಂತಿಲ್ಲ. ಮುಂದಿನ ದಿನಗಳಲ್ಲಿ ಪಂಚಾಯತ್‌ ಸಂಪನ್ಮೂಲ ಹೆಚ್ಚಿಸುವಲ್ಲಿ, ಅರ್ಹರಿಗೆ ನಿವೇಶನ, ಸುಸಜ್ಜಿತ ಸ್ಮಶಾನ ರಚನೆ, ಸಭಾಭವನ ರಚನೆ ಮತ್ತು ಮೂಲ ಸೌಕರ್ಯ, ಸ್ವತ್ಛತೆಗೆ ಒತ್ತು ನೀಡಲಾಗುವುದು. ತಂಡ ಪ್ರಯತ್ನಕ್ಕೆ ಫಲ ಸಿಕ್ಕಿದೆ.
-ರಾಜೀವ ಕುಲಾಲ್‌,
ಅಧ್ಯಕ್ಷರು,ಆರೂರು,ಗ್ರಾ.ಪಂ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.