ನಂದಳಿಕೆ ಗ್ರಾ.ಪಂ. ನೂತನ ಕಚೇರಿ ಕಟ್ಟಡ ಕಾಮಗಾರಿಗೆ ವಿಘ್ನ


Team Udayavani, Jul 23, 2019, 5:16 AM IST

nandalike

ಬೆಳ್ಮಣ್‌: ಕಳೆದ ಗ್ರಾ.ಪಂ. ಚುನಾವಣೆಯ ಸಂದರ್ಭ ಬೆಳ್ಮಣ್‌ ಗ್ರಾಮ ಪಂಚಾಯತ್‌ನಿಂದ ಬೇರ್ಪಟ್ಟು ಸ್ವಂತ ಅಸ್ತಿತ್ವದ ಮೂಲಕ ಪ್ರಾರಂಭಗೊಂಡ ನಂದಳಿಕೆ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ಕಾಮಗಾರಿಗೆ ವಿಘ್ನ ಒದಗಿದೆ.

ಖಾಸಗಿಯವರವ ತಡೆ

ನೂತನ ಕಟ್ಟಡದಲ್ಲಿ ಕಾರ್ಯಾಚರಿಸಬೇಕೆಂಬ ಹಂಬಲದಿಂದ ಸುಮಾರು 50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಲಾದ ಕಾಮಗಾರಿಗೆ ಪಂಚಾಯತ್‌ನ ಹಿಂಭಾಗದ ಖಾಸಗಿಯವರು ತಡೆಯಾಜ್ಞೆ ತಂದಿದ್ದು ನಂದಳಿಕೆ ಗ್ರಾಮ ಪಂಚಾಯತ್‌ ಇಕ್ಕಟ್ಟಿಗೆ ಸಿಲುಕಿದೆ. ಖಾಸಗಿಯವರ ಮನೆ ಹಾಗೂ ಜಮೀನಿಗೆ ಹೋಗಲು ರಸ್ತೆಯ ಪರ್ಯಾಯ ವ್ಯವಸ್ಥೆವ ಇಲ್ಲದ ಕಾರಣ ಪಂಚಾಯತ್‌ ನಿರ್ಮಿಸಲುದ್ದೇಸಿಸಿದ ಕಟ್ಟಡದ ಜಾಗದಲ್ಲಿಯೇ ತಮ್ಮ ದಾರಿ ಇರುವುದಾಗಿ ವಾದಿಸಿರುವ ಖಾಸಗಿಯವರು ಇದೀಗ ತಡೆದಿದ್ದಾರೆ ಎಂದು ಪಂಚಾಯತ್‌ ತಿಳಿಸಿದೆ.

ಬಾಡಿಗೆ ಕಟ್ಟಡದಲ್ಲಿ ಪಂಚಾಯತ್‌ ಕಚೇರಿ

ನಂದಳಿಕೆ ಗ್ರಾ.ಪಂ. ಆಡಳಿತ ಈ ಹಿಂದೆ ಕಂದಾಯ ಇಲಾಖೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಬಳಿಕ ಸ್ವಂತ ಅಸ್ತಿತ್ವಕ್ಕಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಇಳಿದಿತ್ತು. ಇದೀಗ ಬಾಡಿಗೆ ಕಟ್ಟಡದಲ್ಲಿ ಕಚೇರಿ ಸಹಿತ ಆಡಳಿತ ನಿರ್ವಹಣೆ ನಡೆಯುತ್ತಿದ್ದು ತಿಂಗಳಿಗೆ 4,500 ಸಾವಿರ ರೂ. ಬಾಡಿಗೆ ನೀಡಲಾಗುತ್ತಿದೆ. ಜನಸಾಮಾನ್ಯರ ತೆರಿಗೆ ಹಣ ಈ ರೀತಿ ಬಾಡಿಗೆಗೆ ವ್ಯವಯವಾಗುತ್ತಿರುವ ಬಗ್ಗೆಯೂ ಜನರಲ್ಲಿ ವ್ಯಾಪಕ ಆಸಮಾಧಾನ ಇದೆ. ಕಟ್ಟಡ ನಿರ್ಮಾಣದ ಬಗ್ಗೆ ಇರುವ ಗೊಂದಲ ಪರಿಹರಿಸಿ ಸ್ವಂತ ನೆಲೆ ಕಂಡುಕೊಳ್ಳುವಲ್ಲಿ ಪಂಚಾಯತ್‌ ಆಡಳಿತ ಹಾಗೂ ಜನಪ್ರತಿನಿಧಿಗಳು ಪ್ರಯತ್ನಿಸಬೇಕೆಂಬ ಬಲವಾದ ಕೂಗೂ ಕೇಳಿ ಬರುತ್ತಿದೆ.

ಅಂಗನವಾಡಿ ಮಕ್ಕಳು ಅಪಾಯದಲ್ಲಿ

ಈ ಕಟ್ಟಡ ನಿರ್ಮಾಣ ಕಾಮಗಾರಿಯ ಜಾಗದ ಪಕ್ಕದಲ್ಲಿಯೇ ಅಂಗನವಾಡಿಯೂ ಇದೆ. ಕಟ್ಟಡ ನಿರ್ಮಾಣದ ಪಿಲ್ಲರ್‌ ರಚನೆಗೆಂದು ತೋಡಲಾದ ಗುಂಡಿಗಳು ಇನ್ನೂ ತೆರೆದ ಸ್ಥಿತಿಯಲ್ಲಿದ್ದು ನೀರಿನಿಂದ ತುಂಬಿರುವ ಕಾರಣ ಅಂಗನವಾಡಿ ಮಕ್ಕಳಿಗೆ ಅಪಾಯ ಆಹ್ವಾನಿಸುವಂತಿದೆ. ಈ ಬಗ್ಗೆ ಪಂಚಾಯತ್‌ ತಡೆಬೇಲಿ ನಿರ್ಮಿಸಿದ್ದರೂ ಅದು ಈಗ ಚೆಲ್ಲಾ ಪಿಲ್ಲಿಯಾಗಿರುವ ಕಾರಣ ಆತಂಕ ಎದುರಾಗಿದೆ.

ಇನ್ನು ಕೆಲವೇವ ತಿಂಗಳುಗಳಲ್ಲಿ ಪಂಚಾಯತ್‌ ಚುನಾವಣೆ ನಡೆಯಲಿದ್ದು ಅದಕ್ಕೂ ಮುನ್ನ ನೂತನ ಕಟ್ಟಡ ನಿರ್ಮಿಸಿ ಎಂದು ಜನ ಆಗ್ರಹಿಸಿದ್ದಾರೆ.

ನೂತನ ಕಟ್ಟಡ ಶೀಘ್ರ ನಿರ್ಮಿಸಿ

ಬಾಡಿಗೆ ಕಟ್ಟಡಕ್ಕೆ ಜನ ಸಾಮಾನ್ಯರ ತೆರಿಗೆ ಹಣ ಬಾಡಿಗೆ ನೀಡುವ ಬದಲು ಖಾಸಗಿಯವರ ತಡೆಯ ಸಮಸ್ಯೆಯ ಬಗ್ಗೆ ಗಮನ ಹರಿಸಿ ನೂತನ ಕಟ್ಟಡ ಶೀಘ್ರ ನಿರ್ಮಿಸಿ.
– ಹರಿ, ನಂದಳಿಕೆ ಗ್ರಾಮಸ್ಥ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.