ಕಾಲು ಕಳೆದುಕೊಂಡರೂ ಕಾಯಕ ಬಿಡದ ಆಟೋ ಚಾಲಕ

ಅಂಗವೈಕ್ಯಲ್ಯವನ್ನು ಮೆಟ್ಟಿನಿಂತ ಗಣೇಶ್‌ ದೇವಾಡಿಗ

Team Udayavani, Apr 27, 2019, 6:00 AM IST

2304KKRAM2

ಕಾರ್ಕಳ : ಸಮಸ್ಯೆ ಏನೇ ಇರಲಿ ಸಾಧಿಸುವ ಛಲವಿದ್ದಲ್ಲಿ ಯಾವುದೂ ಅಸಾಧ್ಯವಲ್ಲ. ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆತನ ಛಲ, ಪ್ರಯತ್ನದ ಮುಂದೆ ಕಾಲಿಲ್ಲದ ನೋವು ಮರೆಮಾಚಿದೆ. ಆತನ ಸಾಹಸಮಯ ಜೀವನ, ಹುಮ್ಮಸ್ಸು ಅನೇಕರಿಗೆ ಸೂ ರ್ತಿ,ಮಾದರಿ. ಏನು ಮಾಡುವುದು ಹಣೆಬರಹ ಎಂದು ಕೂರದೇ ಆ ಬರಹವನ್ನೇ ಬದಲಾಯಿಸಿದ ಆಟೋ ರಾಜನ ಕಥೆಯಿದು.

ಹೌದು, ಕಾರ್ಕಳ ಪೇಟೆಯಲ್ಲಿ ಲವವವಿಕೆಯಿಂದ ಆಟೋ ಓಡಿಸುವ ಹಿರಿಯ ವ್ಯಕ್ತಿಯೊಬ್ಬರು ಕಾಣಸಿಗುತ್ತಾರೆ. ಇವರ ಹೆಸರು ಗಣೇಶ್‌ ದೇವಾಡಿಗ. ಕಾರ್ಕಳ ಸಿಟಿ ನರ್ಸಿಂಗ್‌ ಹೋಮ್‌ ಸಮೀಪದಲ್ಲೇ ಇವರ ಮನೆ. ಕಳೆದ 35 ವರ್ಷಗಳಿಂದ ಆಟೋ ಓಡಿಸುವ ಇವರು ಬೆಳಗ್ಗೆ 5:30ವರೆಯಿಂದ ಸಂಜೆ 7 ಗಂಟೆ ತನಕ ಸಾಮಾನ್ಯರಂತೆ ಆಟ ಓಡಿಸುತ್ತಾರೆ. ಶಾಲಾ ಮಕ್ಕಳನ್ನು ದಿನಂಪ್ರತಿ ಶಾಲೆಗೆ ತಲುಪಿಸುತ್ತಾರೆ. ಇವರ ದುಡಿಮೆ ಚೆ„ತನ್ಯದ ಚಿಲುಮೆಯೇ ಸರಿ.

ಸಕ್ಕರೆ ಕಾಯಿಲೆ
60 ವರ್ಷದ ಗಣೇಶ್‌ ದೇವಾಡಿಗರು ನಾಲ್ಕು ತಿಂಗಳ ಹಿಂದೆ ಸಕ್ಕರೆ ಕಾಯಿಲೆಗೆ ತುತ್ತಾಗಿ ತಮ್ಮ ಬಲಗಾಲನ್ನು ಶಸ್ತ್ರಚಿಕಿತ್ಸೆಗೊಳಪಡಿಸಬೇಕಾಯಿತು. ಹೀಗಾಗಿ ತಮ್ಮ ಮೊಣಕಾಲಿನಿಂದ ಕೆಳಗೆ ಕಾಲನ್ನೇ ಕಳೆದುಕೊಳ್ಳುವಂತಹ ಪರಿಸ್ಥಿತಿ ಗಣೇಶರಿಗೆ ಬಂದೊದಗಿತು. ಆ ಬಳಿಕ ಕೃತಕ ಕಾಲು ಜೋಡಣೆ ಮಾಡಲಾಗಿ, ಇದೀಗ ಅದೇ ಕೃತಕ ಕಾಲಿನಲ್ಲಿ ಆಟೋ ಓಡಿಸುತ್ತಿದ್ದಾರೆ.

2 ಲಕ್ಷ ವೆಚ್ಚ
ಕೃತಕ ಕಾಲು ಜೋಡಣೆಗೆ ಸೇರಿದಂತೆ ಚಿಕಿತ್ಸೆಗಾಗಿ ಗಣೇಶ್‌ ಅವರಿಗೆ ಸುಮಾರು 2.ಲಕ್ಷ ರೂ. ವೆಚ್ಚ ತಗುಲಿದೆ. ಅವಿವಾಹಿತರಾಗಿರುವ ಇವರಿಗೆ ಅಷ್ಟೊಂದು ಹಣ ಭರಿಸುವುದು ಕಷ್ಟಕರವಾಗಿತ್ತು. ಈ ವೇಳೆ ಗೆಳೆಯರು, ಸಂಬಂ ಕರು ಧೆ„ರ್ಯ ತುಂಬಿದ್ದರು ಎಂದು ಸ್ಮರಿಸುವ ಗಣೇಶ್‌ ಅವರು ಮುಖ್ಯಮಂತ್ರಿ ಪರಿಹಾರ ನಿ ಯಿಂದ ರೂ. 17 ಸಾವಿರ, ಆಳ್ವಿನ್‌ ಲೂಯಿಸ್‌, ಮಾಜಿ ಶಾಸಕ ಗೋಪಾಲ ಭಂಡಾರಿ, ಉದಯಶೆಟ್ಟಿ ಮುನಿಯಾಲು, ಪವನ್‌ ಜ್ಯುವೆಲ್ಲರ್ನ ಸತೀಶ್‌ ಆಚಾರ್ಯ, ಸೊವರಿನ್‌ನ ಶಾಂತರಾಮ ಶೆಟ್ಟಿ, ಉಮೇಶ್‌ ರಾವ್‌ ಬಜಗೋಳಿ ಸೇರಿದಂತೆ ಅನೇಕರು ಆರ್ಥಿಕವಾಗಿ ಸಹಕರಿಸಿದ್ದಾರೆ ಎಂದು ನೆನಪು ಮಾಡಿಕೊಂಡರು.
8ನೇ ತರಗತಿ ತನಕ ಓದಿರುವ ನಾನು ಯಂಗ್‌ ಸ್ಟಾರ್‌ ಗೇಮ್ಸ್‌ ಕ್ಲಬ್‌ನ ಸದಸ್ಯ.

ಯುವಕನಾಗಿದ್ದ ವೇಳೆ ಯಂಗ್‌ ಸ್ಟಾರ್‌ ಪರವಾಗಿ ಅನೇಕ ಪಂದ್ಯಾಟಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಗಣೇಶ್‌.

ಕಷ್ಟ ಬಂದಾಗ ಕೊರಗದೇ, ಎದೆಗುಂದದೇ ದೆ„ರ್ಯವಾಗಿ ಎದುರಿಸಬೇಕು. ನೋವು, ನಲಿವು ಜೀವನದಲ್ಲಿ ಸಹಜವಾಗಿದ್ದು, ನೋವನ್ನು ಮರೆತು ಸಂತೋಷದಿಂದ ಬದುಕು ಸಾಗಿಸುವುದು ಹೇಗೆಂಬುವುದನ್ನು ನಿರೂಪಿಸಬೇಕು ಎನ್ನುತ್ತಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.