ಅಂಗನವಾಡಿ ಕಾರ್ಯಕರ್ತರಿಗೆ ಸಿಗಲಿದೆ ಸ್ಮಾರ್ಟ್‌ ಫೋನ್‌


Team Udayavani, Oct 2, 2019, 5:27 AM IST

smart-phone

ಉಡುಪಿ: ಅಂಗನವಾಡಿ ಕೇಂದ್ರಗಳ ದೈನಂದಿನ ಕಾರ್ಯ ಚಟುವಟಿಕೆಗಳನ್ನು ಗಣಕೀಕೃತ ಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರ ಸ್ಮಾರ್ಟ್‌ಫೋನ್‌ ವಿತರಿಸಲು ನಿರ್ಧರಿಸಿದ್ದು, ಉಡುಪಿ ಜಿಲ್ಲೆಯ 1,119 ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಯೋಜನೆ ಲಭ್ಯವಾಗಲಿದೆ.
ಸ್ನೇಹ ಆ್ಯಪ್‌ ಕಾರ್ಯ ವೈಖರಿ?
ಕೇಂದ್ರ ಸರಕಾರವು ಪೋಷಣ್‌ ಅಭಿಯಾನ ಯೋಜನೆಯಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಆನ್‌ಲೆ„ನ್‌ ವ್ಯಾಪ್ತಿಗೆ ತರಲು ಯೋಜನೆ ಸಿದ್ಧಪಡಿಸಿದೆ. ಅದಕ್ಕಾಗಿ “ಸ್ನೇಹಾ’ ಆ್ಯಪ್‌ ರೂಪಿಸಿದೆ. ಅ ಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸೇ°ಹಾ ಆ್ಯಪ್‌ ಬಳಕೆಗೆ ಪ್ರತ್ಯೇಕ ಬಳಕೆದಾರರ ಹೆಸರು ಮತ್ತು ಪಾಸ್‌ವರ್ಡ್‌ ನೀಡಲಾಗುತ್ತದೆ. ಮೇಲ್ವಿಚಾರಕರಿಗೆ ಟ್ಯಾಬ್‌ ವಿತರಿಸಲಾಗುತ್ತದೆ. ಅವರು ಟ್ಯಾಬ್‌ ಮೂಲಕವೇ ಮಕ್ಕಳ ಆಧಾರ್‌ ಸಂಖ್ಯೆ ಜೋಡಣೆ ಹಾಗೂ ಅಂಗನವಾಡಿಗಳನ್ನು ಜಿಪಿಎಸ್‌ ಜಾಲಕ್ಕೆ ಸಂಪರ್ಕಿಸುವ ಕಾರ್ಯ ನಿರ್ವಹಿಸಲಿದ್ದಾರೆ.
ಕಡತ ನಿರ್ವಹಣೆ
ಅಂಗನವಾಡಿ ಕಾರ್ಯಕರ್ತೆಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌), ಮಾತƒಪೂರ್ಣ, ಮಾತೃ ವಂದನ, ಮಾತೃಶ್ರೀ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಕೇಂದ್ರದ ಪ್ರತಿನಿತ್ಯದ ಆಗುಹೋಗುಗಳ ಕುರಿತ ಸುಮಾರು 40 ಬಗೆಯ ಕಡತಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಜರಾತಿಯೂ ಕೂಡ ಇದರಲ್ಲಿ ದಾಖಲಿಸಲು ಸಹಕಾರಿಯಾಗಿದೆ.
ಸ್ಮಾಟ್‌ ಫೋನ್‌ ಯಾಕೆ?
ಕಾರ್ಯಕರ್ತರ ಮತ್ತು ಅ ಧಿಕಾರಿಗಳ ಕಾರ್ಯ ಒತ್ತಡ ತಗ್ಗಿಸಲು ಹಾಗೂ ಅಂಗನವಾಡಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ಇಲಾಖೆಯು ಅಂಗನವಾಡಿಗಳನ್ನು ಆನ್‌ಲೆ„ನ್‌ ವ್ಯಾಪ್ತಿಗೆ ತರಲು ಮುಂದಾಗಿದೆ. ಕಾರ್ಯಕರ್ತೆಯರು ಸ್ಮಾರ್ಟ್‌ ಫೋನ್‌ ಮೂಲಕ ದಾಖಲಿಸುವ ಪ್ರತಿ ವಿವರವು ಇಲಾಖೆಯ ಕೇಂದ್ರ ಕಚೇರಿಯ ಸರ್ವರ್‌ನಲ್ಲಿ ಅಡಕವಾಗುತ್ತದೆ. ಈ ದತ್ತಾಂಶವನ್ನು ರಾಜ್ಯ, ಜಿಲ್ಲಾ ಮಟ್ಟದ ಅ ಧಿಕಾರಿಗಳು ಕುಳಿತಲ್ಲೇ ಪರಾಮರ್ಶಿಸಬಹುದು.
ಜಿಲ್ಲೆಗಳಿಗೆ ಸುತ್ತೋಲೆ ಬಂದಿಲ್ಲ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್‌ ಅಭಿಯಾನದ ಒಂದು ಹಾಗೂ ಎರಡನೇ ಹಂತದಲ್ಲಿ ಸ್ಮಾರ್ಟ್‌ ಫೋನ್‌ ತಲುಪಿದೆ. ಅಭಿಯಾನದ ಮೂರನೇ ಹಂತದಲ್ಲಿ ಉಡುಪಿ ಸೇರಿದಂತೆ 11 ಜಿಲ್ಲೆಗಳಲ್ಲಿ ವಿತರಣೆಯಾಗಲಿದೆ. ಇದುವರೆಗೆ ಇಲಾಖೆಗೆ ಸುತ್ತೋಲೆ ಬಂದಿಲ್ಲ.
ಇಂಟರ್‌ ನೆಟ್‌ ವೆಚ್ಚ ಸರಕಾರ ಭರಿಸಲಿದೆ
ಉಡುಪಿ ಜಿಲ್ಲೆಯಲ್ಲಿ 1,119 ಅಂಗನವಾಡಿಗಳಿದ್ದು, ಎಲ್ಲ ಕಾರ್ಯಕರ್ತರಿಗೂ ಸ್ಮಾರ್ಟ್‌ ಫೋನ್‌ ವಿತರಿಸಲಾಗುತ್ತದೆ. ಉಡುಪಿ ತಾಲೂಕಿನಲ್ಲಿ 274, ಕುಂದಾಪುರ ತಾಲೂಕಿನಲ್ಲಿ 412, ಬ್ರಹ್ಮಾವರ ತಾಲೂಕಿನಲ್ಲಿ 275, ಕಾರ್ಕಳದಲ್ಲಿ 230 ಕಾರ್ಯಕರ್ತೆಯರಿದ್ದಾರೆ. ಈ ಯೋಜನೆಯಡಿ ಮೊಬೈಲ್‌ ಜತೆಗೆ ಸಿಮ್‌ ಕಾರ್ಡ್‌ ಸಹ ನೀಡಲಿದ್ದು, ಇಂಟರ್‌ನೆಟ್‌ ಸೇವಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ.

ಕೆಲಸದ ಒತ್ತದ ಕಡಿಮೆ
ಸರಕಾರ ಶೀಘ್ರದಲ್ಲಿ ಸ್ಮಾರ್ಟ್‌ ಫೋನ್‌ ವಿತರಿಸಿದರೆ ಅಂಗನವಾಡಿ ಕಾರ್ಯಕರ್ತರ ಕೆಲಸದ ಒತ್ತದ ಕಡಿಮೆಯಾಗಲಿದೆ. ನಿತ್ಯ ಹತ್ತಾರು ಕಡತಗಳನ್ನು ನೋಡಿಕೊಳ್ಳುವುದರಲ್ಲಿ ಸಮಯ ಕಳೆದುಹೋಗುತ್ತಿದೆ.
-ಜಯಲಕ್ಷ್ಮೀ , ಅಂಗನವಾಡಿ ಕಾರ್ಯಕರ್ತರ ಸಂಘದ ರಾಜ್ಯಾಧ್ಯಕ್ಷೆ

ಸುತ್ತೋಲೆ ಬಂದ
ತತ್‌ಕ್ಷಣ ವಿತ ರ ಣೆ
ಕೇಂದ್ರ ಸರಕಾರವು ಪೋಷಣ್‌ ಅಭಿಯಾನದ 3ನೇ ಹಂತದಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಸ್ಮಾರ್ಟ್‌ ಫೋನ್‌ ವಿತರಣೆಯಾಗಲಿದೆ. ಸುತ್ತೋಲೆ ಬಂದ ತತ್‌ಕ್ಷಣ ಸ್ಮಾರ್ಟ್‌ ಫೋನ್‌ ವಿತರಣೆ ಕಾರ್ಯ ಪ್ರಾರಂಭವಾಗಲಿದೆ.
-ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ

ಜ ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

8

ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.