ಗಂಗೊಳ್ಳಿ : ಕಿಡಿಗೇಡಿಗಳಿಂದ ಮತ್ತೆ ಬೈಕ್‌ಗೆ ಬೆಂಕಿ


Team Udayavani, Jan 10, 2018, 11:05 AM IST

10-16.jpg

ಕುಂದಾಪುರ: ಗಂಗೊಳ್ಳಿಯಲ್ಲಿ ರವಿವಾರ ತಡರಾತ್ರಿ ನಡೆದ ಬೈಕ್‌ಗೆ ಬೆಂಕಿಯಿಕ್ಕಿದ ಕೃತ್ಯದ ಬಳಿಕ ಮತ್ತೂಂದು ಬೈಕ್‌ಗೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ಸಂಭವಿಸಿದೆ.

ಗಂಗೊಳ್ಳಿಯ ಮೀನು ಮಾರುಕಟ್ಟೆ ರಸ್ತೆ ಸಮೀಪವಿರುವ ಗೋಪಾಲ ಶೇರುಗಾರ್‌ ಅವರ ಮನೆಯ ಮೇಲಂತಸ್ತಿನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ವಿರುವ ಬದ್ರುದ್ದೀನ್‌ ಅವರು ರಾತ್ರಿ ಕೆಲಸ ಮುಗಿಸಿ ಬಂದು, ಮನೆ ಪಕ್ಕ ನಿಲ್ಲಿಸಿದ್ದ ಪ್ಲಾಟಿನಾ ಬೈಕ್‌ಗೆ ಕಿಡಿಗೇಡಿಗಳು ಮಂಗಳವಾರ ಬೆಳಗ್ಗಿನ ಜಾವ 4.30ರ ಸುಮಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. 

ಮನೆ ಮಾಲಕ ಗೋಪಾಲ ಶೇರು ಗಾರ್‌ ಮೂತ್ರ ವಿಸರ್ಜನೆಗೆಂದು ಎದ್ದಾಗ ಮನೆ ಹೊರಗಿನಿಂದ ಸುಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಹೊರ ಬಂದು ನೋಡಿ ದಾಗ ಬೈಕ್‌ ಹೊತ್ತಿ ಉರಿಯುತ್ತಿತ್ತು. ಕೂಡಲೇ ಅವರು ನೀರೆರಚಿ ಬೆಂಕಿ ನಂದಿಸಿದ್ದಾರೆ. ಬಳಿಕ ಮನೆ ಯವರು ಪೊಲೀಸರಿಗೆ ತಿಳಿಸಿ ದ್ದಾರೆ. ಬದ್ರುದ್ದೀನ್‌ ಅವರು ಗಂಗೊಳ್ಳಿ ಮ್ಯಾಂಗನೀಸ್‌ ರಸ್ತೆಯಲ್ಲಿ ಮೊಬೈಲ್‌ ಶಾಪ್‌ ಹೊಂದಿದ್ದಾರೆ. ಬೈಕ್‌ ಭಾಗಶಃ ಹಾನಿಗೀಡಾಗಿದ್ದು, ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಪೊಲೀಸರು ಬೈಕನ್ನು ಠಾಣೆಗೆ ಕೊಂಡೊಯ್ದಿದ್ದಾರೆ.

ಅಂಗಡಿ -ಮುಂಗಟ್ಟು  ಬಂದ್‌
ಕಳೆದ ಒಂದು ವಾರದಿಂದ ಮುಸ್ಲಿಂ ಸಮುದಾಯದವರ ಬೈಕ್‌ಗಳಿಗೆ ಬೆಂಕಿ ಹಾಗೂ ಮನೆ, ಕಟ್ಟಡಗಳಿಗೆ ಕಲ್ಲು ತೂರಾಟ ನಡೆಸುತ್ತಿರುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ವರ್ತಕರು ಅಂಗಡಿ ಗಳನ್ನು ಮುಚ್ಚಿ ಕೆಲಕಾಲ ಬಂದ್‌ ನಡೆಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳು ಸ್ಥಳಕ್ಕಾಗಮಿಸಿ, ಮನವಿ ಸ್ವೀಕರಿಸ ಬೇಕು ಎಂದು ಮುಸ್ಲಿಂ ಸಂಘಟನೆಗಳು ಆಗ್ರಹಿಸಿದ್ದು, ಎಸ್‌ಪಿ ಬರುವುದಾಗಿ ಡಿವೈಎಸ್‌ಪಿ ಸಮಾಧಾನಪಡಿಸಿದ ಬಳಿಕ ವರ್ತಕರು ಪ್ರತಿಭಟನೆ ಹಿಂಪಡೆದರು.

ಗುಂಪು ಚದುರಿಸಿದ ಪೊಲೀಸರು
ರಾತ್ರಿ ವೇಳೆ ನಡೆಯುತ್ತಿರುವ ಕಿಡಿಗೇಡಿಗಳ ದುಷ್ಕೃತ್ಯವನ್ನು ಖಂಡಿಸಿ ಪಿಎಫ್‌ಐ ಗಂಗೊಳ್ಳಿ ಘಟಕಾಧ್ಯಕ್ಷ ತಬ್ರೇಜ್‌ ನೇತೃತ್ವದ ಯುವಕರ ತಂಡ ಸ್ಥಳದಲ್ಲಿ ಜಮಾಯಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಪ್ರವೀಣ್‌ ನಾಯ್ಕ ನೇತೃತ್ವದ ಪೊಲೀಸರ ತಂಡ ಗುಂಪನ್ನು ಚದುರಿಸಿದೆ. 

ಪತ್ತೆಗೆ ಕ್ರಮ: ಡಿವೈಎಸ್‌ಪಿ
ಆರೋಪಿ ಗಳನ್ನು ಪತ್ತೆಹಚ್ಚಿ ಬಂಧಿ ಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿ ಕಾಪಾಡಲು ಎಲ್ಲರೂ ಸಹ ಕರಿಸ ಬೇಕು ಎಂದು ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಪ್ರವೀಣ್‌ ನಾಯ್ಕ ಮನವಿ ಮಾಡಿ ಕೊಂಡಿದ್ದಾರೆ.ಪದೇ ಪದೇ ಶಾಂತಿಭಂಗಕ್ಕೆ ಯತ್ನ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಕೋಮು ಸೂಕ್ಷ್ಮ ಘಟನೆಗಳಿಂದ ದುಷೆøàರಿತರಾಗಿ ಗಂಗೊಳ್ಳಿಯಲ್ಲಿಯೂ ಕೆಲವು ಕಿಡಿಗೇಡಿಗಳು ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸು ತ್ತಿರು ವುದು ಕಿಡಿಗೇಡಿಗಳ ಸರಣಿ ದುಷ್ಕೃತ್ಯ ಗಳಿಂದ  ಸ್ಪಷ್ಟವಾಗಿದೆ. ರವಿವಾರ ತಡ ರಾತ್ರಿ ಗಂಗೊಳ್ಳಿಯ ಅಬ್ದುಲ್‌ ಮಜೀದ್‌ ಅವರ ಬೈಕ್‌ಗೆ ಬೆಂಕಿ ಹಾಕಿ ಸಂಪೂರ್ಣ ಸುಟ್ಟು ಹಾಕಲಾಗಿತ್ತು. ಅದಕ್ಕೂ ಮುನ್ನ ಕಟ್ಟಡ ವೊಂದಕ್ಕೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಪುಡಿಗೈಯ್ಯಲಾಗಿತ್ತು. 

ಬಿಗಿ ಬಂದೋಬಸ್ತ್; ಎಸ್ಪಿ  ಭೇಟಿ
ಮುಂಜಾಗ್ರತಾ ಕ್ರಮವಾಗಿ ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಗಂಗೊಳ್ಳಿಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಡಿವೈಎಸ್‌ಪಿ ಪ್ರವೀಣ್‌ ನಾಯ್ಕ, ಕುಂದಾಪುರ ಸಂಚಾರಿ ಠಾಣೆಯ ಎಸ್‌ಐ ಸುಬ್ಬಣ್ಣ, ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಪರಮೇಶ್ವರ ಗುಣಗಿ, ಡಿಸಿಐಬಿ ಇನ್ಸ್‌ಪೆಕ್ಟರ್‌ ಸಂಪತ್‌ ಕುಮಾರ್‌ ಮೊದಲಾದವರು ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್‌ ನಿಂಬರ್ಗಿ ಅವರು ಮಂಗಳವಾರ ಗಂಗೊಳ್ಳಿಗೆ ಭೇಟಿ ನೀಡಿ, ಘಟನೆ ಬಗ್ಗೆ  ಮಾಹಿತಿ ಪಡೆದಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.