ಗಂಗೊಳ್ಳಿ ಮೀನು ಮಾರುಕಟ್ಟೆ ರಸ್ತೆ ದುರಸ್ತಿಗೆ ಆಗ್ರಹ

ಡಾಮರೆಲ್ಲ ಎದ್ದು ಹೋಗಿ ಹೊಂಡಮಯ

Team Udayavani, Mar 16, 2020, 5:10 AM IST

ಗಂಗೊಳ್ಳಿ ಮೀನು ಮಾರುಕಟ್ಟೆ ರಸ್ತೆ ದುರಸ್ತಿಗೆ ಆಗ್ರಹ

ಗಂಗೊಳ್ಳಿ: ಇಲ್ಲಿನ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಸಂಪರ್ಕಿಸುವ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು, ಇದರಿಂದ ಮೀನು ಸಾಗಾಟದ ವಾಹನ, ಖರೀದಿಗೆ ಬರುವ ಗ್ರಾಹಕರಿಗೂ ಸಮಸ್ಯೆಯಾಗುತ್ತಿದೆ. ಈ ರಸ್ತೆಯನ್ನು ದುರಸ್ತಿ ಮಾಡಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ.

ಈ ಮೀನು ಮಾರುಕಟ್ಟೆಯು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಲ್ಲಿದ್ದು, ಮುಖ್ಯ ರಸ್ತೆಯಿಂದ ಒಳಗಿನ ರಸ್ತೆಯಲ್ಲಿದೆ. ಒಂದು ಕಡೆಯಿಂದ ಕಾಂಕ್ರೀಟಿಕರಣವಾಗಿದ್ದರೂ, ಈ ರಸ್ತೆಯ ಸುಮಾರು 250 ರಿಂದ 300 ಮೀ.ವರೆಗಿನ ರಸ್ತೆಯು ಕಳೆದ 4-5 ವರ್ಷಗಳಿಂದ ಡಾಮರೆಲ್ಲ ಕಿತ್ತು ಹೋಗಿ, ಹೊಂಡಮಯ ರಸ್ತೆಯಾಗಿದೆ.

ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ, 3 ವರ್ಷಗಳ ಹಿಂದೆ ಗಂಗೊಳ್ಳಿಯಲ್ಲಿ ಈ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಗೊಂಡಿತ್ತು. ಈ ಮೀನು ಮಾರುಕಟ್ಟೆಯಲ್ಲಿ ಒಟ್ಟು 40 ಕ್ಕೂ ಹೆಚ್ಚು ಮಂದಿ ಮಹಿಳೆಯರಿಗೆ ಮೀನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸದ್ಯ 25-30 ಮಂದಿ ಮಹಿಳೆಯರು ಪ್ರತಿ ದಿನ ಮೀನು ಮಾರಾಟ ಮಾಡುತ್ತಾರೆ.

ಈ ರಸ್ತೆಯಲ್ಲಿ ನಿತ್ಯ ನೂರಾರು ಮಂದಿ ಮೀನು ಖರೀದಿಗೆಂದು ಬರುತ್ತಾರೆ. ಬೇರೆ ಬೇರೆ ಕಡೆಗಳಿಂದ ಮೀನು ಸಾಗಾಟದ ವಾಹನಗಳು ಇಲ್ಲಿಗೆ ಬರುತ್ತದೆ. ಆದರೆ ಹದಗೆಟ್ಟ ಈ ರಸ್ತೆಯಿಂದಾಗಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಇದಲ್ಲದೆ ಈ ರಸ್ತೆಯು ಕಿರಿದಾಗಿದ್ದು, ದೊಡ್ಡ ವಾಹನಗಳು ಕೂಡ ಈ ಮಾರ್ಗದಲ್ಲಿ ಸಂಚರಿಸುವುದರಿಂದ ಅಗಲೀಕರಣ ಮಾಡಬೇಕು. ಈ ಮಳೆಗಾಲಕ್ಕೂ ಮುಂಚೆಯಾದರೂ ಈ ರಸ್ತೆಗೆ ಕಾಂಕ್ರೀಟಿಕರಣ ಹಾಗೂ ಅಗಲೀಕರಣ ಕಾಮಗಾರಿ ಆಗಲಿ ಎನ್ನುವುದಾಗಿ ಮೀನು ವ್ಯಾಪಾರಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ಇದಲ್ಲದೆ ಮೀನು ಮಾರುಕಟ್ಟೆ ಪ್ರದೇಶದಲ್ಲಿ ಇಲ್ಲಿಗೆ ಬರುವ ವಾಹನಗಳನ್ನು ನಿಲ್ಲಿಸಲು ಕೂಡ ಜಾಗದ ಸಮಸ್ಯೆಯಿದ್ದು, ವಾಹನ ಪಾರ್ಕಿಂಗ್‌ ಮಾಡಲು ಕೂಡ ಪ್ರತ್ಯೇಕ ಜಾಗದ ವ್ಯವಸ್ಥೆಯನ್ನು ಸಂಬಂಧಪಟ್ಟವರು ಕಲ್ಪಿಸಿಕೊಡಬೇಕಿದೆ.

ಶಾಸಕರಿಗೆ ಮನವಿ
ಈ ರಸ್ತೆಯ ಸುಮಾರು 250 ಮೀ. ಉದ್ದದವರೆಗೂ ಕಾಂಕ್ರೀಟಿಕರಣಕ್ಕೆ ಅಂದಾಜು 25 ಲಕ್ಷ ರೂ. ಅನುದಾನ ಬೇಕಾಗಿದೆ. ಪಂಚಾಯತ್‌ನಲ್ಲಿ ಅಷ್ಟೊಂದು ಅನುದಾನ ಇಲ್ಲದಿರುವುದರಿಂದ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರಿಗೆ ಮನವಿ ಸಲ್ಲಿಸಲಾಗಿದೆ. ಈಗಾಗಲೇ ಪಂಚಾಯತ್‌ ವ್ಯಾಪ್ತಿಯ ಅನೇಕ ಈ ರಸ್ತೆಗಳಿಗೆ ಅನುದಾನ ನೀಡಿದ್ದು, ಈ ರಸ್ತೆಗೂ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅನುದಾನ ಕೊಡಬಹುದು.
-ಶ್ರೀನಿವಾಸ ಖಾರ್ವಿ, ಅಧ್ಯಕ್ಷರು, ಗಂಗೊಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.