ಗಂಗೊಳ್ಳಿ : ಇನ್ನೂ ಆರಂಭವಾಗದ ನಾಡದೋಣಿ ಮೀನುಗಾರಿಕೆ


Team Udayavani, Jul 9, 2018, 6:00 AM IST

0808kdpp3.jpg

ಗಂಗೊಳ್ಳಿ: ಮಳೆಗಾಲ ಆರಂಭವಾಗಿ ಒಂದು ತಿಂಗಳು ಕಳೆದರೂ, ಜೂನ್‌ನಲ್ಲಿ ಶುರುವಾಗಬೇಕಾದ ಸಾಂಪ್ರದಾಯಿಕ ಮೀನುಗಾರಿಕೆ ಕುಂದಾಪುರದ ಕೋಡಿ, ಗಂಗೊಳ್ಳಿ ಭಾಗದಲ್ಲಿ ಇನ್ನೂ ಕೂಡ ಪ್ರಾರಂಭವಾಗದೇ, ನಾಡದೋಣಿಗಳು ದಡದಲ್ಲೇ ಲಂಗರು ಹಾಕಿವೆ. 

ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾದ ಅನಂತರ ಅಂದರೆ ಜೂನ್‌ ಮೊದಲ ವಾರದಿಂದ ನಾಡದೋಣಿಗಳು ಸಮುದ್ರಕ್ಕೆ ಇಳಿಯುತ್ತವೆ. ಆದರೆ ಪೂರಕವಾದ ವಾತಾವರಣವಿಲ್ಲದ ಕಾರಣದಿಂದ ನಾಡದೋಣಿ ಮೀನುಗಾರರು ಕಡಲಿಗಿಳಿಯುತ್ತಿಲ್ಲ. 

ಜೂನ್‌ನಲ್ಲಿ ಸುರಿದ ಭಾರೀ ಗಾಳಿ, ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಈಗಲೂ ಎಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಮೀನುಗಾರರಿಗೆ ಕಡಲಿಗಿಳಿಯಲು ಸಾಧ್ಯವಾಗುತ್ತಿಲ್ಲ. ಮಲ್ಪೆಯಲ್ಲಿ ಈಗಾಗಲೇ ನಾಡದೋಣಿಗಳು ಸಮುದ್ರಕ್ಕೆ ಇಳಿದಿದ್ದರೂ, ಸಾಕಷ್ಟು ಪ್ರಮಾಣದಲ್ಲಿ ಮೀನುಗಳು ಸರಿಯಾಗಿ ಸಿಕ್ಕಿಲ್ಲ ಎನ್ನುತ್ತಾರೆ ಮೀನುಗಾರರು.
 
ತೂಫಾನ್‌ ಎದ್ದಿಲ್ಲ
ಕಡಲಾಳದಲ್ಲಿ ತೂಫಾನ್‌ ಎದ್ದ ಬಳಿಕ ಕಡಲು ಪ್ರಕ್ಷುಬ್ಧಗೊಳ್ಳುತ್ತವೆ. ಇದರಿಂದ ನದಿ, ಹೊಳೆಗಳ ನೀರು, ಅದರೊಂದಿಗೆ ತ್ಯಾಜ್ಯವೆಲ್ಲ ಸಮುದ್ರಕ್ಕೆ ಸೇರುವುದರಿಂದ ಆಹಾರಕ್ಕಾಗಿ ವಿವಿಧ ಜಾತಿಯ ಮೀನುಗಳು ಕಡಲ ತೀರದತ್ತ ಧಾವಿಸುತ್ತವೆ. ಆದರೆ ಜೂನ್‌ನಲ್ಲಿ ಹಾಗೂ ಈಗ ಉತ್ತಮ ಮಳೆಯಾಗಿದ್ದರೂ, ಕೂಡ ತೂಫಾನ್‌ ಏಳುವಷ್ಟು ಮಟ್ಟಿಗೆ ಮಳೆಯಾಗಿಲ್ಲ. ತೂಫಾನ್‌ ಏಳದೇ ಮೀನುಗಾರರು ಕಡಲಿಗಿಳಿದರೂ, ಅದರಿಂದ ಹೇರಳವಾಗಿ ಮೀನುಗಳು ಸಿಗುವುದಿಲ್ಲ. 

ಗಂಗೊಳ್ಳಿಯಲ್ಲಿ ಉಪ್ಪುಂದ, ನಾವುಂದ, ಮರವಂತೆ, ಶಿರೂರು, ಗಂಗೊಳ್ಳಿ, ಕೋಡಿ ಭಾಗದ ಸುಮಾರು 600 ನಾಡದೋಣಿಗಳಿವೆ. ಕಳೆದ ಮೀನುಗಾರಿಕಾ ಋತು ಯಾಂತ್ರಿಕ ಮೀನುಗಾರಿಕೆಗೆ ಶುಭ ತಂದಿರಲಿಲ್ಲ. ಈಗ ನಾಡದೋಣಿ ಮೀನುಗಾರರಿಗೂ ಲಾಭದಾಯಕವಾಗುವ ಲಕ್ಷಣ ತೋರುತ್ತಿಲ್ಲ. 

ಚಟ್ಲಿ ಸೀಸನ್‌ ಶುರುವಾಗಿಲ್ಲ
ನಾಡದೋಣಿಗಳಿಗೆ ವಿವಿಧ ತಳಿಯ ಮೀನುಗಳಿಗಿಂತ ಚಟ್ಲಿ (ಸಿಗಡಿ) ಸಿಕ್ಕರೆ ಹೆಚ್ಚು ಲಾಭ. ಕಡಲಿಗಿಳಿದ ಎಲ್ಲ ದೋಣಿಗಳಿಗೆ ಮೀನು ಸಿಕ್ಕರೆ ಆಗ ಮೀನಿನ ದರ ಕುಸಿತಗೊಂಡು, ಹೆಚ್ಚೇನೂ ಲಾಭವಾಗುವುದಿಲ್ಲ. ಆದರೆ ಮೀನಿನ ಜತೆ ಚಟ್ಲಿ(ಈಗ ಕೆಜಿಗೆ 450 ರೂ. ಇದೆ) ಸಿಕ್ಕರೆ ಅದರಿಂದ ಲಾಭ ಹೆಚ್ಚು. ಅದಕ್ಕಿರುವ ಬೆಲೆ ಹಾಗೂ ಬೇಡಿಕೆ ಯಾವತ್ತೂ ಕಡಿಮೆಯಾಗುವುದಿಲ್ಲ. 

ಲಾಭಕ್ಕಿಂತ ನಷ್ಟವೇ ಜಾಸ್ತಿ
ನಾಡದೋಣಿಯಲ್ಲಿ 1 ಜೋಡು (3 ದೋಣಿಗಳಿರುತ್ತವೆ) ನಲ್ಲಿ ತಲಾ 10 ಮಂದಿಯಂತೆ 30 ಜನ ಇರುತ್ತಾರೆ. ಸುಮಾರು 15 ಸಾವಿರ ರೂ. ಖರ್ಚಾಗುತ್ತದೆ. ಆದರೆ ಈಗ ನಾವು ಕಡಲಿಗಳಿದರೆ 10 ಸಾವಿರ ರೂ. ಕೂಡ ಸಿಗುವುದಿಲ್ಲ. ಇದರಿಂದ ಮೀನುಗಾರಿಕೆ ನಡೆಸಿದರೂ, ನಮಗೇನೂ ಲಾಭ ಸಿಗುವುದಿಲ್ಲ. 
– ಗೋಪಾಲ ಖಾರ್ವಿ, ಕೋಡಿ

ಜು. 15ರ ಅನಂತರ ಪ್ರಾರಂಭ
ಈಗ ತೂಫಾನ್‌ ಎದ್ದಿದ್ದು, ಅದು ಶಾಂತವಾದ ನಂತರ ನಾಡದೋಣಿಗಳು ಕಡಲಿಗೆ ಇಳಿಯಬಹುದು. ಸುಮಾರು ಜು. 15 ರ ವೇಳೆಗೆ ನಾಡದೋಣಿ ಮೀನುಗಾರಿಕೆ ಪ್ರಾರಂಭವಾಗಬಹುದು. ಮಲ್ಪೆಯಲ್ಲಿ ಹೋಗಿದ್ದರೂ, ಅಷ್ಟೇನೂ ಮೀನು ಸಿಕ್ಕಿಲ್ಲ. 
– ಮಂಜು ಬಿಲ್ಲವ,ಗಂಗೊಳ್ಳಿ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.