ಗಂಗೊಳ್ಳಿ ಗ್ರಾ.ಪಂ. ಕಚೇರಿಗೆ ಸಂಸದ ರಾಘವೇಂದ್ರ ಭೇಟಿ
'ಅನುದಾನ ಸಮರ್ಪಕವಾಗಿ ವಿನಿಯೋಗಿಸಿ'
Team Udayavani, Jun 26, 2019, 5:46 AM IST
ಗಂಗೊಳ್ಳಿ: ಎಲ್ಲ ಪಂಚಾಯತ್ಗಳಿಗೂ ಸರಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿ. ಸಂಸದರು, ಶಾಸಕರ ನಿಧಿಯಿಂದ ಬರುವ ಅನುದಾನವನ್ನು ಕೂಡ ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಿ ವಿನಿಯೋಗಪಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಗಂಗೊಳ್ಳಿ ಗ್ರಾ.ಪಂ. ಕಚೇರಿಗೆ ಭೇಟಿ ನೀಡಿ, ಪಂಚಾಯತ್ ವತಿಯಿಂದ ಅಭಿನಂದನೆ ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಈ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕರೊಂದಿಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತೇನೆ. ಪಂಚಾಯತ್ ಅಧಿಕಾರಿಗಳು ಕೂಡ ಈ ಬಗ್ಗೆ ಏನೆಲ್ಲ ಅಭಿವೃದ್ಧಿ ಆಗಬೇಕು ಎನ್ನುವ ಕುರಿತು ಮನವಿ ಸಲ್ಲಿಸಿದರೆ ಈ ಬಗ್ಗೆ ಆದ್ಯತೆ ಮೇರೆಗೆ ಗಮನಹರಿಸಲಾಗುವುದು ಎಂದರು.
ಇದೇ ವೇಳೆ ಸಂಸದರು, ಶಾಸಕರು ಗ್ರಾ.ಪಂ.ನ ಕಚೇರಿಗೆ ಬಂದು ಕುಳಿತಿದ್ದರೂ, ಪಿಡಿಒ ಹಾಗೂ ಕಾರ್ಯದರ್ಶಿ ಅಲ್ಲಿದ್ದುದನ್ನು ನೋಡಿ ಬಿ.ವೈ. ರಾಘವೇಂದ್ರ ಅವರು ಗರಂ ಆದ ಪ್ರಸಂಗ ಕೂಡ ನಡೆಯಿತು. ಇದಲ್ಲದೆ ದೊಡ್ಡಹಿತ್ಲು ತೋಡಿನಲ್ಲಿ ತುಂಬಿರುವ ತ್ಯಾಜ್ಯ ತೆರವಿಗೆ ಸ್ಪಂದಿಸದಿರುವ ಬಗ್ಗೆ ಪಂಚಾಯತ್ ಅಧಿಕಾರಿಗಳನ್ನು ಸಂಸದರು ತರಾಟೆಗೆ ತೆಗೆದುಕೊಂಡರು.
3ನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಬಿ.ವೈ. ರಾಘವೇಂದ್ರ ಅವರನ್ನು ಪಂಚಾಯತ್ ವತಿಯಿಂದ ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಪಿಡಿಒ ಚಂದ್ರಶೇಖರ್, ಕಾರ್ಯದರ್ಶಿ ಮಾಧವ, ಉಪಾಧ್ಯಕ್ಷರು, ಸದಸ್ಯರು, ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ