ಅಭಿವೃದ್ಧಿಯಾಗದ ಗಂಗೊಳ್ಳಿ ಬಂದರು
Team Udayavani, May 20, 2018, 6:05 AM IST
ಕುಂದಾಪುರ: ಉಡುಪಿ ಜಿಲ್ಲೆಯ ಎರಡನೇ ಬೃಹತ್ ಮೀನುಗಾರಿಕಾ ಬಂದರು ಆಗಿರುವ ಗಂಗೊಳ್ಳಿ ಅಭಿವೃದ್ಧಿಯಾಗದೇ ಮೀನುಗಾರರು ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಮೊದಲ ಹಂತದ ಕಾಮಗಾರಿ ಮುಗಿದು 7 ವರ್ಷಗಳಾಗಿದ್ದು, ಆ ಬಳಿಕ ಬಂದರಿನಲ್ಲಿ ಯಾವುದೇ ದೊಡ್ಡ ಮಟ್ಟದ ಕಾಮಗಾರಿಯೇ ನಡೆದಿಲ್ಲ. ಜತೆಗೆ ಇಲ್ಲೀಗ ಸ್ಲ್ಯಾಬ್ಗಳು ಕೂಡ ಕುಸಿದಿವೆ.
ಈ ಋತುವಿನ ಮೀನುಗಾರಿಕಾ ಅವಧಿ ಮುಗಿಯುತ್ತಾ ಬಂದಿದ್ದು, ಇನ್ನು ಕೆಲವೇ ದಿನಗಳ ಮೀನುಗಾರಿಕೆಯಷ್ಟೇ ಬಾಕಿಯಿದೆ. ದೊಡ್ಡ ಬೋಟುಗಳು ಈಗಾಗಲೇ ಮತ್ಸé ಕ್ಷಾಮದಿಂದಾಗಿ ಮೀನುಗಾರಿಕೆ ಸ್ಥಗಿತಗೊಳಿಸಿವೆ. ಈ ನಡುವೆ ಬಂದರಿನಲ್ಲಿ ಹಲವು ಸಮಸ್ಯೆಗಳಿದ್ದು,ಬೋಟುಗಳು ಬಂದು ನಿಲ್ಲುವ ಸ್ಥಳದಲ್ಲಿ ಮೀನುಗಳನ್ನು ತೆಗೆಯಲು ನಿಲ್ಲುವ ಜಾಗ ಅನೇಕ ಕಡೆ ಕುಸಿದು ಬೀಳುವ ಅಪಾಯದಲ್ಲಿದೆ.
ಹೈಮಾಸ್ಟ್ ದೀಪ ಇಲ್ಲ
ಬೃಹತ್ ಗಂಗೊಳ್ಳಿ ಬಂದರಿಗೆ ಒಂದೇ ಒಂದು ಹೈಮಾಸ್ಟ್ ದೀಪವಿಲ್ಲ. ಬಂದರು ಇಲಾಖೆಯಿಂದ ಹೈಮಾಸ್ಟ್ ದೀಪ ಮಂಜೂರಾಗಿದೆ ಎಂದು ಅಧಿಕಾರಿಗಳು ಹೇಳಿದರೂ ಕೂಡ ಇನ್ನೂ ಅಳವಡಿಸುವ ಕಾರ್ಯ ಮಾತ್ರ ಆಗಿಲ್ಲ.
3 ಕಡೆ ಸ್ಲ್ಯಾಬ್ ಕುಸಿತ
ಜೆಟ್ಟಿಯಲ್ಲಿ 3 ಕಡೆ ಸ್ಲ್ಯಾಬ್ ಭಾಗಶಃ ಕುಸಿದು ಬಿದ್ದಿದ್ದು, ಅದರಲ್ಲೂ ಒಂದು ಕಡೆಯಂತೂ ಸ್ಲ್ಯಾಬ್ ಸಂಪೂರ್ಣ ಕುಸಿದಿದೆ. ಈವರೆಗೆ ಇಲ್ಲಿ 3 ಮೀನುಗಾರರು ಈ ಸ್ಲಾéಬ್ ಕುಸಿತದಿಂದ ಅಡಿಗೆ ಬಿದ್ದಿದ್ದು, ಪಕ್ಕದಲ್ಲೇ ಇದ್ದ ಮೀನುಗಾರರು ಮೇಲೆತ್ತಿದ ಕಾರಣ ಸಂಭಾವ್ಯ ಅನಾಹುತ ತಪ್ಪಿದಂತಾಗಿದೆ. ಮಲ್ಪೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಆದರೆ ಗಂಗೊಳ್ಳಿ ಬಂದರಿನಲ್ಲಿ ಮಾತ್ರ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎನ್ನುವುದು ಇಲ್ಲಿನ ಮೀನುಗಾರರ ಆರೋಪ. ಮಹಿಳಾ ಮೀನುಗಾರರಿಗೆ ವಿಶ್ರಾಂತಿ ಕೊಠಡಿಯಿಲ್ಲ. ಬಂದರಿನ ಸುತ್ತ ಆವರಣ ಗೋಡೆ ನಿರ್ಮಿಸಬೇಕು ಎನ್ನುವ ಬೇಡಿಕೆಯಿದ್ದರೂ ಅದಿನ್ನೂ ಈಡೇರುವ ಲಕ್ಷಣ ಮಾತ್ರ ತೋರುತ್ತಿಲ್ಲ.
2ನೇ ಹಂತದ ಕಾಮಗಾರಿ ಆರಂಭಿಸಲಿ
ಬಂದರಿನ ಮೊದಲ ಹಂತದ ಕಾಮಗಾರಿ ಮುಗಿದು 7 ವರ್ಷ ಕಳೆದರೂ ಇನ್ನೂ ಮೀನುಗಾರಿಕಾ ಇಲಾಖೆಯಿಂದ ಎರಡನೇ ಹಂತದ ಕಾಮಗಾರಿಗೆ ಪ್ರಸ್ತಾವನೆಯೇ ಹೋಗಿಲ್ಲ. ಬಂದರು ವಿಸ್ತರಣೆಗೆ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಂಡರೆ ಸಾಕಷ್ಟು ಪ್ರಯೋಜನವಾಗಲಿದೆ.
– ಮೋಹನ ಖಾರ್ವಿ, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ
ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಕೆ
ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಪಟ್ಟಿ ಸಿದ್ಧಪಡಿಸಿ ಇಲಾಖೆಯ ಮೇಲಧಿಕಾರಿಗಳಿಗೆ ಕಳುಹಿಸಲಾಗಿದೆ. ಅದರಲ್ಲಿ ಮಹಿಳೆಯರಿಗೆ ವಿಶ್ರಾಂತಿ ಗೃಹ, ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳ, ಬಂದರಿನ ಸುತ್ತ ಆವರಣ ಗೋಡೆ ನಿರ್ಮಾಣ ಸಹಿತ ಅನೇಕ ಯೋಜನೆ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಲ್ಲದೆ ಪಾರ್ಕಿಂಗ್ ಪ್ರದೇಶದಲ್ಲಿದ್ದ ಶೆಡ್ಗಳನ್ನು ಬಂದರಿನ ಅಭಿವೃದ್ಧಿ ಹಿನ್ನೆಲೆಯಲ್ಲಿ ತೆರವು ಮಾಡಲಾಗಿದೆ.
– ಅಂಜನಾದೇವಿ,ಮೀನುಗಾರಿಕಾ ಸಹಾಯಕ ನಿರ್ದೇಶಕಿ, ಗಂಗೊಳ್ಳಿ ಬಂದರು
– ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?