ಗಂಗೊಳ್ಳಿ ಮುಖ್ಯ ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣ
Team Udayavani, Apr 2, 2019, 6:30 AM IST
ಗಂಗೊಳ್ಳಿ: ಮೇಲ್ ಗಂಗೊಳ್ಳಿ ವಾಟರ್ ಟ್ಯಾಂಕ್ನಿಂದ ಗಂಗೊಳ್ಳಿ ಪಂಚಾಯತ್ ಕಚೇರಿವರೆಗಿನ ಸುಮಾರು 700 ಮೀ.ಉದ್ದದ ಮುಖ್ಯ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಶೀಘ್ರ ಎರಡೂ ಕಡೆಗಳಿಂದಲೂ ರಸ್ತೆಯು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.
ನೆರೆ ಪರಿಹಾರದಲ್ಲಿ ಮಂಜೂರಾದ ಸುಮಾರು 1.08 ಕೋಟಿ ರೂ. ವೆಚ್ಚದಲ್ಲಿ ಮುಖ್ಯ ರಸ್ತೆಯ ಸುಮಾರು 700 ಮೀ. ಕಾಂಕ್ರೀಟಿಕರಣ ಕಾಮಗಾರಿ ನಡೆದಿದೆ. ಇದು ಗಂಗೊಳ್ಳಿ ಬಂದರಿಗೆ ತೆರಳುವ ಮುಖ್ಯ ರಸ್ತೆಯಾಗಿದ್ದು, ಮೀನು ಸಾಗಾಟದ ಲಾರಿಗಳು, ಸಾರಿಗೆ ಬಸ್ಗಳು, ಶಾಲಾ ವಾಹನಗಳು, ಕಾರು, ಆಟೋರಿûಾ ಸೇರಿದಂತೆ ಸಾವಿರಾರು ವಾಹನಗಳು ಪ್ರತಿನಿತ್ಯ ಇದೇ ಮಾರ್ಗವಾಗಿ ಸಂಚರಿಸುತ್ತವೆ. ಈಗ ಕಾಮಗಾರಿ ಪೂರ್ಣಗೊಂಡಿರುವುದರಿಂದ ಜನರಿಗೆ ಅನುಕೂಲವಾದಂತಾಗಿದೆ.
ಬಸ್ ಸಂಚಾರ ಆರಂಭ
ಸೋಮವಾರದಿಂದ ಬಸ್ ಸಂಚಾರವು ಹಿಂದಿನಂತೆ ಎಸ್.ವಿ. ಹಿ.ಪ್ರಾ. ಶಾಲೆ ಯವರೆಗೆ ಆರಂಭಿಸಲಾಗಿದೆ. ರಸ್ತೆ ಕಾಮಗಾರಿಯಿಂದಾಗಿ ಕುಂದಾಪುರ, ತ್ರಾಸಿ ಕಡೆಯಿಂದ ಬರುವ ಬಸ್ಗಳು ಮೇಲ್ಗಂಗೊಳ್ಳಿಯ ಶ್ರೀ ರಾಮ ಮಂದಿರದವರೆಗೆ ಮಾತ್ರ ಸಂಚರಿ ಸುತ್ತಿತ್ತು. ಅಲ್ಲಿಂದ ಸುಮಾರು 2 ಕಿ.ಮೀ. ದೂರದವರೆಗೆ ಅನಿವಾರ್ಯವಾಗಿ ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗ ಬೇಕಾಗಿತ್ತು. ಈಗ ಬಸ್ ಸಂಚಾರವನ್ನು ಆರಂಭಿಸಿರುವುದರಿಂದ ವಿದ್ಯಾರ್ಥಿಗಳಿಗೆ, ಕುಂದಾಪುರಕ್ಕೆ ಹೋಗುವ ಜನರಿಗೆ ಅನುಕೂಲವಾಗಿದೆ.
ಶೀಘ್ರ ಸಂಚಾರಕ್ಕೆ ಅನುವು
ಈಗಾಗಲೇ ಎರಡೂ ಬದಿಯ ಕಾಂಕ್ರೀಟೀಕರಣ ಕಾಮಗಾರಿ ಮುಗಿದಿದೆ. ಒಂದು ಕಡೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮತ್ತೂಂದು ಬದಿಯ ಕಾಂಕ್ರೀಟೀಕರಣ ಕಾಮಗಾರಿ ಮುಗಿಸಿ ಹೆಚ್ಚು ದಿನಗಳಾಗದ್ದ ರಿಂದ ಕ್ಯೂರಿಂಗ್ಗೆ ಸಮಯ ಬೇಕಾಗಿ ರುವುದರಿಂದ ಎ. 10ರೊಳಗೆ ಎರಡೂ ಕಡೆಗಳಿಂದಲೂ ಸಂಚಾರಕ್ಕೆ ಆನುವು ಮಾಡಿಕೊಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ