ಸಾಮಾಜಿಕ ಧುರೀಣ ಮೊಮಿನ್ ಮೊಹಮ್ಮದ್ ಗೌಸ್ ಸಾಹೇಬ್ ಗಂಗೊಳ್ಳಿ ನಿಧನ
Team Udayavani, Jan 28, 2020, 11:21 AM IST
ಕುಂದಾಪುರ: ಸಾಮಾಜಿಕ ಧುರೀಣ, ಗಂಗೊಳ್ಳಿಯ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿದ್ದ ಮೊಮಿನ್ ಮೊಹಮ್ಮದ್ ಗೌಸ್ ಸಾಹೇಬ್ (78) ಮಂಗಳವಾರ ನಿಧನರಾಗಿದ್ದಾರೆ.
ಮೊಮಿನ್ ಮೊಹಮ್ಮದ್ ಗೌಸ್ ಸಾಹೇಬ್ ಅವರು ಗಂಗೊಳ್ಳಿಯ ಪೋಸ್ಟ್ ಆಫೀಸ್ ಬಳಿಯ ನಿವಾಸಿಯಾಗಿದ್ದು, ಇಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಇವರು ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಗಂಗೊಳ್ಳಿಯ ಮೋಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ, ಮಸೀದಿಯ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಕೊಡುಗೈ ದಾನಿಗಳಾಗಿದ್ದ ಇವರು ಗಂಗೊಳ್ಳಿಯ ಮುಸ್ಲಿಂ ಹೆಣ್ಣುಮಕ್ಕಳ ಮದರಸ ಜಾಮಿಯಾ ಫಾತಿಮಥುಝೋಹರ ಇಸ್ಲಾಹುಲ್ ಬನಾತ್ ಇದರ ಸಂಚಾಲಕ ಹಾಗೂ ಕಾರ್ಯದರ್ಶಿ ಹುದ್ದೆಯನ್ನೂ ಸಹ 15 ವರ್ಷಕ್ಕಿಂತ ಹೆಚ್ಚು ಕಾಲ ನಿರ್ವಹಿಸಿದ್ದರು. ಹಾಗೂ ಪ್ರಸ್ತುತ ಸಂಸ್ಥೆಯಲ್ಲಿ ಕಾರ್ಯದರ್ಶಿ ಹುದ್ದೆಯನ್ನು ನಿಭಾಯಿಸುತ್ತಿದ್ದರು.
ಮೃತರ ನಮಾಜ್ ಎ ಜನಾಝ ಇಂದು ರಾತ್ರಿ ಇಶಾ ನಮಾಜ್ ಬಳಿಕ ಮೋಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯಲಿದ್ದು, ತದನಂತರ ಗಂಗೊಳ್ಳಿಯ ಕೇಂದ್ರ ಜುಮ್ಮಾ ಮಸೀದಿಯ ಕಬರಸ್ಥಾನದಲ್ಲಿ ಅಂತಿಮ ಕಾರ್ಯ ನಡೆಯಲಿದೆ ಎಂದು ಕಟುಂಬ ಮೂಲಗಳು ತಿಳಿಸಿವೆ.
ಮೃತರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಇಂದು ಗಂಗೊಳ್ಳಿಯ ಜಾಮಿಯಾ ಫಾತಿಮಥುಝೋಹರ ಸಂಸ್ಥೆಗೆ ರಜೆ ಸಾರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ