ಗಂಗೊಳ್ಳಿ: ತ್ಯಾಜ್ಯ ವಿಲೇವಾರಿಯೇ ದೊಡ್ಡ ಸವಾಲು


Team Udayavani, Jan 23, 2019, 12:50 AM IST

gangolli.jpg

ಗಂಗೊಳ್ಳಿ: ಬಂದರು ನಗರಿ, ಅತ್ಯಂತ ಜನನಿಬಿಡ ಹಾಗೂ ಅತೀ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಆರಂಭವಾದರೂ ಕಸ ವಿಲೇವಾರಿಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದರಿಂದ ಹೆಚ್ಚಿನ ಜನ ಗಂಗೊಳ್ಳಿಯ ಮುಖ್ಯ ರಸ್ತೆ ಸಹಿತ ಹಲವೆಡೆಯ ರಸ್ತೆ ಬದಿಗಳಲ್ಲಿ ಕಸ ಎಸೆಯುತ್ತಿದ್ದಾರೆ. 

ಕೆರೆಗೂ ಹಾಕ್ತಾರೆ ಕಸ!
ಬೆಳೆಯುತ್ತಿರುವ ಗ್ರಾಮೀಣ ಪ್ರದೇಶವಾದ ಗಂಗೊಳ್ಳಿಯಲ್ಲಿ ಪ್ರತಿ ದಿನ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಲು ಸಮರ್ಪಕವಾದ ವ್ಯವಸ್ಥೆ ಇಲ್ಲದಂತಾಗಿದೆ. ಇದರಿಂದ ಇಲ್ಲಿರುವ ಮುಖ್ಯ ರಸ್ತೆಗಳ ಬದಿ, ಖಾರ್ವಿಕೇರಿಯಲ್ಲಿರುವ ರಸ್ತೆ ಬದಿಗಳು, ಮಾತ್ರವಲ್ಲ ಪ್ರಮುಖವಾದ ಮಡಿವಾಳ ಕೆರೆ ಡಂಪಿಂಗ್‌ ಯಾರ್ಡ್‌ಗಳಾಗುತ್ತಿವೆ. 

ಕೆಲ ತಿಂಗಳ ಹಿಂದೆ ಗಂಗೊಳ್ಳಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹ ಕಾರ್ಯ ಆರಂಭಗೊಂಡಿತ್ತು. ಅದನ್ನು ಹಸಿ ಹಾಗೂ ಒಣ ಕಸಗಳಾಗಿ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಗ್ರಾ.ಪಂ. ಮಾಡಿತ್ತು. ಪ್ರಾಯೋಗಿಕವಾಗಿ 850 ಮನೆ- ವಾಣಿಜ್ಯ ಮಳಿಗೆಗಳಿಂದ ಕಸ ಸಂಗ್ರಹಿಸಲಾಗುತ್ತಿತ್ತು. ಆದರೆ ಕಳೆದ ಕೆಲ ದಿನಗಳಿಂದ ಅದು ಕೂಡ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದು  ಗ್ರಾಮಸ್ಥರ ಆರೋಪ.

ಅಲ್ಲಲ್ಲಿ ಪ್ಲಾಸ್ಟಿಕ್‌ ಎಸೆಯುವುದರಿಂದ ರೋಗ, ರುಜಿನಗಳಿಗೆ ದಾರಿ ಮಾಡಿಕೊಟ್ಟಂ ತಾಗುವುದಲ್ಲದೆ, ಜಾನುವಾರುಗಳಿಗೂ ಅಪಾಯ ತಪ್ಪಿದ್ದಲ್ಲ. ಈ ಕಾರಣದಿಂದ ರಸ್ತೆ ಬದಿ ಕಸ ಎಸೆಯಬೇಡಿ ಎನ್ನುವುದಾಗಿ ಆರೋಗ್ಯ ಇಲಾಖೆಯವರು  ಮನವಿ ಮಾಡಿಕೊಂಡಿದ್ದಾರೆ.

5 ಕ್ವಿಂಟಾಲ್‌ ಕಸ ಉತ್ಪತ್ತಿ
ಗಂಗೊಳ್ಳಿ ಗ್ರಾ.ಪಂ. ವ್ಯಾಪ್ತಿ ಸುಮಾರು 1 ಸಾವಿರ ಎಕರೆಯಷ್ಟಿದ್ದು, ಅಂದಾಜು 13 ಸಾವಿರಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. 3,041ರಷ್ಟು ಮನೆ- ವಾಣಿಜ್ಯ ಮಳಿಗೆಗಳಿವೆ. ಇಡೀ ಗ್ರಾಮದಲ್ಲಿ ಒಟ್ಟಾರೆ ಅಂದಾಜು ಪ್ರತಿನಿತ್ಯ 500 ಕೆ.ಜಿ. (5 ಕ್ವಿಂಟಾಲ್‌) ನಷ್ಟು ಕಸ ಉತ್ಪತ್ತಿಯಾಗುತ್ತಿದೆ. ಆದರೆ ಈಗ 850 ಮನೆ – ವಾಣಿಜ್ಯ ಮಳಿಗೆಗಳಿಂದ ಪ್ರತಿನಿತ್ಯ ಬರೀ 50 – 60 ಕೆ.ಜಿ.ಯಷ್ಟು ಮಾತ್ರ ಕಸ ಸಂಗ್ರಹವಾಗುತ್ತಿದೆ. 

ಇನ್ನಷ್ಟು ಮನೆಗಳಿಗೆ ವಿಸ್ತರಣೆ
ಗಂಗೊಳ್ಳಿಯಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ ಸಾಧ್ಯವಾಷ್ಟೂ ಪಂಚಾಯತ್‌ ವತಿಯಿಂದ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಮನೆ – ವಾಣಿಜ್ಯ ಮಳಿಗೆಗಳೂ ಹೆಚ್ಚಿರುವುದರಿಂದ ಸಮರ್ಪಕವಾಗಿ ಆಗುತ್ತಿಲ್ಲ. ಶೀಘ್ರ ಕಸ ಸಂಗ್ರಹಕ್ಕಾಗಿ ಟಾಟಾ ಏಸ್‌ ವಾಹನ ಖರೀದಿಸಲಾಗುವುದು. ಬಳಿಕ ಕಸ ಸಂಗ್ರಹವನ್ನು ಇನ್ನಷ್ಟು ಮನೆಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ಜನರ ಸಹಕಾರ, ಸಹಭಾಗಿತ್ವವೂ ಅಗತ್ಯವಾಗಿ ಬೇಕಾಗಿದೆ. ಆದರೆ ರಸ್ತೆ ಬದಿ, ಎಲ್ಲೆಂದರಲ್ಲಿ ಕಸ ಎಸೆಯುವುದು ಸರಿಯಲ್ಲ. 
– ಮಾಧವ, ಗಂಗೊಳ್ಳಿ  ಪಿಡಿಒ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.