ಗಾಂಜಾ ಪ್ರಕರಣ:ಗಂಗೊಳ್ಳಿ, ತ್ರಾಸಿಯಲ್ಲಿ ಅಮಲಿನಲ್ಲಿದ್ದ ಇಬ್ಬರು ವಶಕ್ಕೆ
Team Udayavani, Jul 29, 2023, 3:27 PM IST
ಗಂಗೊಳ್ಳಿ:ಮಾದಕ ವ್ಯಸನಿಗಳ ವಿರುದ್ಧ ಕಾರ್ಯಾಚರಣೆಗಿಳಿದ ಪೊಲೀಸರು ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಜುಲೈ 28 ರಂದು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಮಧ್ಯಾಹ್ನ ಗಂಗೊಳ್ಳಿ ಠಾಣಾ ಪಿಎಸ್ಐ ಹರೀಶ್ ಆರ್ ಮತ್ತು ಸಿಬಂದಿ ರೌಂಡ್ಸ್ ನಲ್ಲಿದ್ದ ವೇಳೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಗಂಗೊಳ್ಳಿಯ ಸಯ್ಯದ್ ಫಾರುಕ್ (30) ಎಂಬಾತನನ್ನು, ಪ್ರತ್ಯೇಕ ಪ್ರಕರಣದಲ್ಲಿ ಗಂಗೊಳ್ಳಿ ಬಂದರು ಬಳಿ ಶುಕ್ರವಾರ ಸಂಜೆ ಗಂಗೊಳ್ಳಿಯ ಮೊಹಮ್ಮದ್ ಫರಾನ್(28) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಇಬ್ಬರನ್ನೂ ಕುಂದಾಪುರ ಆಸ್ಪತ್ರೆ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ NDPS Act ರಂತೆ ಪ್ರಕರಣ ದಾಖಲಿಸಲಾಗಿದೆ.