Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಶಿಕ್ಷೆ
Team Udayavani, Dec 6, 2023, 9:58 PM IST
ಉಡುಪಿ: ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ವರ್ಷಗಳ ಹಿಂದೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಅಪ್ಸಲ್ಪುರ ನಿವಾಸಿ ಕೋಟತಟ್ಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಭೀಮ ಶಂಕರ ಅಳಗಿಗೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2016 ಜುಲೈ 11ರಂದು ಕೋಟ ಪೊಲೀಸರು ಚಿತ್ರಪಾಡಿ ದೇವಸ್ಥಾನದ ಬಳಿ ರಾ.ಹೆ.ಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಕೈನಲ್ಲಿ ಚೀಲ ಹಿಡಿದುಕೊಂಡು ಬರುತ್ತಿದ್ದ ಆರೋಪಿಯನ್ನು ವಿಚಾರಿಸಿ, ಚೀಲವನ್ನು ಪರಿಶೀಲಿಸಿದಾಗ 1.700 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ಕೋಟ, ಕುಂದಾಪುರದಲ್ಲಿ ಗಾಂಜಾ ಮಾರಾಟ ಮಾಡುವ ಬಗ್ಗೆ ಆರೋಪಿ ತಿಳಿಸಿದ್ದ.
ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಶ್ರೀಕಾಂತ್ ಕೆ. ಎನ್ಡಿಪಿಎಸ್ ಕಾಯ್ದೆಯಡಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅವರು 1 ವರ್ಷ ಕಠಿನ ಸಜೆ, 30 ಸಾವಿರ ದಂಡ ವಿಧಿಸಿ ಡಿ. 6ರಂದು ತೀರ್ಪು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ