ಕಾಪು ತಾಲೂಕಿನ ರಸ್ತೆಗಳಲ್ಲಿ ತ್ಯಾಜ್ಯದ್ದೇ ದೊಡ್ಡ ಸಮಸ್ಯೆ


Team Udayavani, Jun 18, 2018, 2:25 AM IST

kasa-kaupu-17-6.jpg

ಕಾಪು: ಕಾಪು ತಾಲೂಕಿನಾದ್ಯಂತ ಇರುವ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸುತ್ತಮುತ್ತ ತ್ಯಾಜ್ಯದ್ದೇ ದೊಡ್ಡ ಸಮಸ್ಯೆಯಾಗಿದೆ. ರಸ್ತೆಗಳ ಇಕ್ಕೆಲಗಳಲ್ಲಿ ಖಾಲಿ ಜಾಗಗಳು, ಸಾರ್ವಜನಿಕ ಸ್ಥಳಗಳು ಮತ್ತು ಚರಂಡಿ ಪಕ್ಕದಲ್ಲಿ ತ್ಯಾಜ್ಯ ರಾಶಿ ದಂಡಿಯಾಗಿದೆ. ತ್ಯಾಜ್ಯವು ಮಳೆ ನೀರಿನಿಂದಾಗಿ ಕೊಳೆತು ನಾರುತ್ತಿದ್ದು, ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ.

ಎಲ್ಲೆಲ್ಲಿ ತ್ಯಾಜ್ಯ ರಾಶಿ?
ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು, ಉಚ್ಚಿಲ ಮಹಾಲಕ್ಷ್ಮೀ ಸಭಾಭವನದ ಎದುರು, ಉಚ್ಚಿಲ ಮಾರುಕಟ್ಟೆ ಪರಿಸರ, ಮೂಳೂರು ಮಸೀದಿ ಮುಂಭಾಗ, ಪಾಂಗಾಳ, ಕಟಪಾಡಿ, ಉದ್ಯಾವರದಲ್ಲಿ ಕಸ – ತ್ಯಾಜ್ಯ ರಾಶಿಯಾಗುತ್ತಿದೆ. ಅದರೊಂದಿಗೆ ಕಾಪು – ಶಿರ್ವ ರಸ್ತೆಯಲ್ಲಿ ಮಲ್ಲಾರು, ಮಜೂರು, ಚಂದ್ರನಗರದಲ್ಲಿ ಹಾಗೂ ಕಟಪಾಡಿ – ಶಿರ್ವ ರಸ್ತೆಯಲ್ಲಿ ಸರಕಾರಿಗುಡ್ಡೆ, ಚೊಕ್ಕಾಡಿ, ಶಂಕರಪುರ, ಬಂಟಕಲ್ಲು ಸಹಿತ ಹಲವೆಡೆ ತ್ಯಾಜ್ಯದ ರಾಶಿ ಎದ್ದು ಕಾಣುತ್ತಿದೆ.

ಎಚ್ಚರಿಕೆ ಬೋರ್ಡ್‌ ಇರುವಲ್ಲೇ ತ್ಯಾಜ್ಯ 
ಉಚ್ಚಿಲ, ಕಟಪಾಡಿ, ಉದ್ಯಾವರ, ಮಜೂರು ಮೊದಲಾದ ಪ್ರದೇಶಗಳಲ್ಲಿ ಇಲ್ಲಿ ತ್ಯಾಜ್ಯ ಎಸೆಯಬಾರದು ಎಂದು ನಾಮಫಲಕ ಅಳವಡಿಸಲಾಗಿದೆ. ಆದರೆ ಈ ಬೋರ್ಡ್‌ ಅಡಿಯಲ್ಲೇ ತ್ಯಾಜ್ಯದ ರಾಶಿ ಇದೆ. ಕೆಲವೆಡೆಗಳಲ್ಲಿ ಜನರು ಹಗಲಿನಲ್ಲೇ ವಾಹನದಲ್ಲಿ ನಿಂತು ರಸ್ತೆಗೆ ಕಸ ಎಸೆದು ಹೋದರೆ, ಮತ್ತೆ ಕೆಲವು ಕಡೆಗಳಲ್ಲಿ ರಾತ್ರಿ ವೇಳೆ ಕದ್ದುಮುಚ್ಚಿ ಬಂದು ರಸ್ತೆ ಬದಿಯಲ್ಲಿ ಕಸ ತಂದು ಎಸೆದು ಹೋಗುತ್ತಿದ್ದಾರೆ. ಒಂದೆರಡು ದಿನ ಕಸ ಬಿದ್ದ ಪ್ರದೇಶ ಶುಚಿಯಾಗದೇ ಇದ್ದಲ್ಲಿ ಅಲ್ಲಿ ಬಳಿಕ ಕಸದ ಗುಡ್ಡೆಯೇ ನಿರ್ಮಾಣವಾಗುತ್ತದೆ.

ನಾಗರಿಕರು ಕೈಜೋಡಿಸಿ
ಕಸ – ತ್ಯಾಜ್ಯ ವಿಲೇವಾರಿ ಸ್ಥಳೀಯಾಡಳಿತ ಸಂಸ್ಥೆಗಳ ಹೊಣೆಯಾದರೂ ಈ ಬಗ್ಗೆ ಜನರು ಕೂಡಾ ಜಾಗೃತರಾಗುವುದು ಅತ್ಯಗತ್ಯವಾಗಿದೆ. ನಾಗರಿಕರು ಕೈ ಜೋಡಿಸದೇ ಇದ್ದರೆ ಈ ಸಮಸ್ಯೆ ಪರಿಹಾರ ಅಸಾಧ್ಯ. 
– ರಾಯಪ್ಪ, ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.