ಗೆಳತಿ ವಿಶೇಷ ಚಿಕಿತ್ಸಾ ಘಟಕ ಆರಂಭ
Team Udayavani, Mar 20, 2018, 8:25 AM IST
ಕುಂದಾಪುರ: ದೌರ್ಜನ್ಯಕ್ಕೊಳಗಾದ ಮಹಿಳೆ, ಮಕ್ಕಳಿಗೆ ಒಂದೇ ಸೂರಿನಡಿ ನೆರವು ನೀಡಿ, ಆಪ್ತ ಸಮಾಲೋಚನೆ, ಇನ್ನಿತರ ಸಹಕಾರ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆ “ಗೆಳತಿ’ ವಿಶೇಷ ಚಿಕಿತ್ಸಾ ಘಟಕವನ್ನು ಕುಂದಾಪುರ ತಾ| ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಕುಂದಾಪುರ ಪುರಸಭಾಧ್ಯಕ್ಷೆ ವಸಂತಿ ಮೋಹನ್ ಸಾರಂಗ ಉದ್ಘಾಟಿಸಿದರು.
ಜಿ.ಪಂ. ಸದಸ್ಯರಾದ ಶ್ರೀಲತಾ ಸುರೇಶ್, ಲಕ್ಷ್ಮೀ ಮಂಜು ಬಿಲ್ಲವ, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ತಾ.ಪಂ. ಸದಸ್ಯ ವೈಲೆಟ್ ಬೆರೆಟ್ಟೊ, ತಾ| ವೈದ್ಯಾಧಿಕಾರಿ ಡಾ| ನಾಗಭೂಷಣ್ ಉಡುಪ, ತಾ| ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರಾಬರ್ಟ್ ರೆಬೆಲ್ಲೋ, ಶಿಶು ಕಲ್ಯಾಣಾಭಿವೃದ್ಧಿ ಇಲಾಖೆಯ ತಾ| ಯೋಜನಾಧಿಕಾರಿ (ಪ್ರಭಾರ) ನಿರಂಜನ್, ಮಹಿಳಾ ಸಾಂತ್ವನ ಕೇಂದ್ರದ ರಾಧಾದಾಸ್ಮತ್ತಿತರರಿದ್ದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಗ್ರೇಸಿ ಗೋನ್ಸಾಲ್ವಿಸ್ ಪ್ರಸ್ತಾವಿಸಿದರು. ರಾಜೇಶ್ವರಿ ನಿರ್ವಹಿಸಿದರು. ಭಾಗ್ಯವತಿ ವಂದಿಸಿದರು.
24×7 ಸೇವೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಸೋಮವಾರದಿಂದ ರಾಜ್ಯದಾದ್ಯಂತ “ಗೆಳತಿ’ ಎನ್ನುವ ವಿಶೇಷ ಮಹಿಳಾ ಚಿಕಿತ್ಸಾ ಘಟಕ ಆರಂಭಗೊಳ್ಳುತ್ತಿದೆ. ಇನ್ನು ರಾಜ್ಯದ ಎಲ್ಲ 145 ತಾಲೂಕು ಆಸ್ಪತ್ರೆಗಳಲ್ಲಿಯೂ ದಿನದ 24 ಗಂಟೆಯೂ ಈ ಸೇವೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್