ಹುತಾತ್ಮರಿಂದ ಪ್ರೇರಣೆ ಪಡೆಯಿರಿ: ಗಣೇಶ್ ಭಟ್
Team Udayavani, Sep 12, 2017, 7:35 AM IST
ಉಡುಪಿ: ಬಟಾ ಬಯಲಿನಲ್ಲಿರುವ ಅರಣ್ಯ ಸಂಪತ್ತನ್ನು ಸಂಕ್ಷಿಸುವ ಸಂದರ್ಭದಲ್ಲಿ ಹುತಾತ್ಮರಾಗುವ ಅರಣ್ಯ ರಕ್ಷಕರರಿಂದ ಪ್ರೇರಣೆ ಪಡೆಯಿರಿ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಎಸ್. ಭಟ್ ಹೇಳಿದರು.
ಅವರು ಸೆ. 11ರಂದು ಅರಣ್ಯ ಹುತಾತ್ಮರ ಸ್ಮರಣಾರ್ಥವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಸದಸ್ಯರಿಂದ ಜರಗಿದ 17ನೇ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಸಂರಕ್ಷಣೆಯೊಂದು ನಿತ್ಯ ಸವಾಲುಗಳನ್ನು ಎದುರಿಸುವ ವಿಭಾಗ. ಇಲ್ಲಿ ಕಾರ್ಯನಿರ್ವಹಿಸುವ ಪ್ರತಿಯೋರ್ವರು ಅನುಪಮ ಸೇವೆಯನ್ನು ನೀಡಬೇಕೆಂದು ಅವರು ಕೋರಿದರು.ಕ.ರಾ.ಉ.ಅ. ಅಧಿಕಾರಿಗಳ ಸಂಘದ ಅಧ್ಯಕ್ಷ ಮುಡೂರ ಕೋಠಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸರಕಾರಿ ಆಸ್ಪತ್ರೆಯ ಆರ್.ಎಂ.ಒ.ಡಾ| ಚಂದ್ರಶೇಖರ ಅಡಿಗ, ಕ.ರಾ.ಉ.ಅ. ಅಧಿಕಾರಿಗಳ ಸಂಘದ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ಕ.ರಾ. ಅರಣ್ಯ ರಕ್ಷಕರು ಮತುತ ವೀಕ್ಷಕರ ಸಂಘದ ಅಧ್ಯಕ್ಷರಾದ ಆನಂದ ಬಳೇಗಾರ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಕುಂದಾಪುರ ಎ.ಎಸ್.ಎಫ್. ಎಂ.ಎಂ. ಅಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ನಾಗೇಶ ಬಿಲ್ಲವ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಕರುಣಾಕರ ಜೆ. ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ