ಗುರಿ ಆಧಾರಿತ ಶಿಕ್ಷಣದಿಂದ ಹೊರಬನ್ನಿ


Team Udayavani, Dec 23, 2018, 9:22 AM IST

mahe.jpg

ಉಡುಪಿ: ಗುರಿ ಆಧಾರಿತ ಶಿಕ್ಷಣ ಕ್ರಮದಿಂದ ಹೊರಬರಬೇಕು ಎಂದು ಸುರತ್ಕಲ್‌ ಎನ್‌ಐಟಿಕೆ ನಿರ್ದೇಶಕ ಡಾ| ಕೆ. ಉಮಾಮಹೇಶ್ವರ ರಾವ್‌ ಕರೆ ನೀಡಿದರು.

ಶನಿವಾರ ಮಣಿಪಾಲದ ಹೊಟೇಲ್‌ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಮಾಹೆ ವಿಶ್ವವಿದ್ಯಾನಿಲಯದ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಕ್ಷಣ ಕ್ರಮವು ಈಗ ಕೇವಲ ಅಂಕ ಆಧಾರಿತವಾಗಿದೆ. ಶಿಕ್ಷಣದಿಂದ ಸಮಗ್ರ ವ್ಯಕ್ತಿತ್ವ ರೂಪುಗೊಳ್ಳಬೇಕು. ಶಿಕ್ಷಣ ವ್ಯಾಪಾರೀಕರಣಗೊಂಡಿರುವುದು ಕಳವಳಕಾರಿ ಎಂದರು.

ಗುರು-ಶಿಷ್ಯ ಪರಂಪರೆ ಕಣ್ಮರೆ
ಮಕ್ಕಳ ನಾಮಕರಣವಾಗುತ್ತಲೇ ತಾಯಿ ಯಾವ ಶಾಲೆ ಬೇಕು, ಯಾವ ಶಿಕ್ಷಣ ಬೇಕು ಎಂದು ನಿರ್ಧರಿಸುತ್ತಾಳೆ. ಎಂಜಿನಿಯರಿಂಗ್‌, ವೈದ್ಯಕೀಯ ಬಿಟ್ಟು ಬೇರೆ ಕ್ಷೇತ್ರಗಳ ಕನಸು ಕಾಣುತ್ತಿಲ್ಲ. ಈಗಿನ ಗುರಿ ಆಧಾರಿತ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಿಗೆ ಗುರುಗಳನ್ನು ಹೇಗೆ ಗೌರವಿಸಬೇಕೆಂಬುದು ಗೊತ್ತಿರುವುದಿಲ್ಲ. ಗುರು ಶಿಷ್ಯ ಪರಂಪರೆ ಈಗ ಕಣ್ಮರೆಯಾಗಿದೆ ಎಂದು ಡಾ| ರಾವ್‌ ಹೇಳಿದರು. 

ಉತ್ಪನ್ನ ಮಾರಾಟ ಕೌಶಲ
ನಾವು ಉತ್ಪನ್ನಗಳನ್ನು ಮಾರುವ ಮ್ಯಾನೇಜ್ಮೆಂಟ್ ಕೌಶಲದಲ್ಲಿದ್ದೇವೆ. “ಜರ್ಮನಿಯ ಎಂಜಿನಿಯರಿಂಗ್‌, ಭಾರತದ ವಿನ್ಯಾಸ, … ಇವರಿಂದ ಮಾರಾಟ’ ಎಂಬ ಜಾಹೀರಾತು ಫ‌ಲಕವನ್ನು ನೋಡಿದೆ. ಇದರಲ್ಲಿ ಜರ್ಮನಿಯ ಎಂಜಿನಿಯರಿಂಗ್‌ ಎನ್ನುವುದು ದೊಡ್ಡ ಅಕ್ಷರಗಳಲ್ಲಿ ರಾರಾಜಿಸುತ್ತಿತ್ತು. ನಾವೀಗ “ಮೇಡ್‌ ಇನ್‌ ಇಂಡಿಯ’, “ಮೇಕ್‌ ಇನ್‌ ಇಂಡಿಯ’ವನ್ನು ಸಾಕಾರಗೊಳಿಸಬೇಕಾಗಿದೆ ಎಂದು ಡಾ| ರಾವ್‌ ಹೇಳಿದರು.

ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಸ್ವಾಗತಿಸಿ, ಕುಲಸಚಿವ ಡಾ| ನಾರಾಯಣ ಸಭಾಹಿತ್‌ ವಂದಿಸಿದರು. ಕುಲಪತಿ ಡಾ| ಎಚ್‌. ವಿನೋದ ಭಟ್‌ ರಜತೋತ್ಸವದಲ್ಲಿ ನಡೆದ ಚಟುವಟಿಕೆಗಳನ್ನು ವಿವರಿಸಿದರು. ಮಾಹೆಯ ರಜತ ಮಹೋತ್ಸವದ ಅಂಗವಾಗಿ ಹೊರತಂದ ಪುಸ್ತಕದ ಕುರಿತು ಯುರೋಪಿಯನ್‌ ಸ್ಟಡೀಸ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ರಾಹುಲ್‌ ಪುಟ್ಟಿ ಮಾತನಾಡಿದರು. ಕುಲಸಚಿವ (ಮೌಲ್ಯಮಾಪನ) ಡಾ| ವಿನೋದ ಥಾಮಸ್‌ ಅತಿಥಿಗಳನ್ನು ಪರಿಚಯಿಸಿದರು. ಸಹಕುಲಪತಿಗಳಾದ ಡಾ| ಪಿ.ಎಲ್‌.ಎನ್‌.ಜಿ. ರಾವ್‌, ಡಾ| ವಿ. ಸುರೇಂದ್ರ ಶೆಟ್ಟಿ, ಡಾ| ಪೂರ್ಣಿಮಾ ಬಾಳಿಗಾ ಉಪಸ್ಥಿತರಿದ್ದರು. ಕುಲಸಚಿವರಾಗಿ ಸೇವೆ ಸಲ್ಲಿಸಿದ ಡಾ| ಪಿ.ಎಲ್‌.ಎನ್‌.ಜಿ. ರಾವ್‌, ಡಾ| ಎಂ.ಪಿ.ಎಂ. ಕುಟ್ಟಿ, ಡಾ| ಸುಧಾಕರ ನಾಯಕ್‌, ಡಾ| ಗುರುಮಧ್ವ ರಾವ್‌, ಡಾ| ವಿನೋದ ಭಟ್‌, ಡಾ| ಜಿ.ಕೆ. ಪ್ರಭು, ಡಾ| ನಾರಾಯಣ ಸಭಾಹಿತ್‌, ಮೌಲ್ಯಮಾಪನ ಕುಲಸಚಿವರಾಗಿ ಸೇವೆ ಸಲ್ಲಿಸಿದ ಡಾ| ಎಸ್‌. ನಾರಾಯಣ ರಾವ್‌, ಡಾ| ಉದಯಶಂಕರ್‌ ಎಚ್‌.ಎನ್‌., ಡಾ|ಪಿ.ಎಲ್‌.ಎನ್‌. ರಾವ್‌, ಡಾ| ವಿನೋದ್‌ ಥಾಮಸ್‌ ಅವರನ್ನು ಅಭಿನಂದಿಸಲಾಯಿತು. ಫಾರ್ಮಸಿ ಕಾಲೇಜಿನ ಡಾ| ಅನೂಪ್‌ ನಾಹಾ ಕಾರ್ಯಕ್ರಮ ನಿರ್ವಹಿಸಿದರು. 

15 ಲಕ್ಷದಲ್ಲಿ ಶೇ. 15 ಉದ್ಯೋಗಾರ್ಹರು,  ಒಬ್ಬನಿಗೆ 1.5 ಕೋ.ರೂ. ವೇತನ ವೈಭವ
7.5 ಲಕ್ಷ ವಿದ್ಯಾರ್ಥಿಗಳು ಐಐಟಿ ಜೆಇಇ ಪ್ರವೇಶ ಪರೀಕ್ಷೆಗೆ ಹಾಜರಾದರೆ ಶೇ. 1ಕ್ಕಿಂತ ಕಡಿಮೆ ಮಂದಿ ಆಯ್ಕೆಯಾಗುತ್ತಾರೆ. 15 ಲಕ್ಷ ಎಂಜಿನಿಯರಿಂಗ್‌ ಪದವೀಧರರು ಪ್ರತಿ ವರ್ಷ ಹೊರಬರುತ್ತಾರೆ. ಇವರಲ್ಲಿ ಶೇ. 15 ಉದ್ಯೋಗಾರ್ಹರಾಗಿರುತ್ತಾರೆ. ಉಳಿದವರ ಪಾಡೇನು? ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಶೇ. 33 ಜನರು ಬಡತನದಲ್ಲಿದ್ದಾರೆ, ಶೇ. 50 ಮಹಿಳೆಯರಿಗೆ ಬಯಲು ಶೌಚ ಅನಿವಾರ್ಯವಾಗಿದೆ ಎಂಬ ವರದಿ ಇದೆ. ಮುಂಬಯಿ ಐಐಟಿಯ ಒಬ್ಬ ವಿದ್ಯಾರ್ಥಿ ವರ್ಷಕ್ಕೆ 1.5 ಕೋ.ರೂ. ಆದಾಯದ ಉದ್ಯೋಗ ಗಳಿಸಿದ್ದಾನೆಂದು ಮಾಧ್ಯಮಗಳು ವೈಭವೀಕರಿಸಿದವು. ದೇಶದ ಬಹು ಜನರ ಸಮಸ್ಯೆ ಅಗಾಧವಿರುವಾಗ ಈತನ ಆದಾಯದಿಂದೇನು ಪ್ರಯೋಜನ?
 ಡಾ| ಕೆ. ಉಮಾಮಹೇಶ್ವರ ರಾವ್‌, ನಿರ್ದೇಶಕರು, ಎನ್‌ಐಟಿಕೆ, ಸುರತ್ಕಲ್‌

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.