ಹೆಬ್ರಿ: ಪ್ರಿಯಕರ ಪೋನ್ ಕಾಲ್ ಸ್ವೀಕರಿಸಿಲ್ಲವೆಂದು ಮನನೊಂದು ಪ್ರಿಯತಮೆ ಆತ್ಮಹತ್ಯೆ
Team Udayavani, Apr 19, 2022, 12:20 PM IST
ಹೆಬ್ರಿ: ತನ್ನ ಪ್ರಿಯಕರ ಪೋನ್ ಕರೆ ಸ್ವೀಕರಿಸಿಲ್ಲವೆಂಬ ಕಾರಣಕ್ಕೆ ವಿಷ ಪದಾರ್ಥ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಗೆ ದಾಖಲಾದ ಪ್ರಿಯತಮೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹೆಬ್ರಿ ಸಮೀಪ ಸಂತೆಕಟ್ಟೆಯಲ್ಲಿ ನಡೆದಿದೆ.
ಮೂಲತ ಮೂಡುಗೆರೆ ತಾಲೂಕಿನ ಕುಸುಮಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕುಸುಮಾರವರು ಹೆಬ್ರಿ ಸಂತೆಕಟ್ಟೆಯಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಚಿಕ್ಕ ಮಗಳೂರು ಜಿಲ್ಲೆಯ ಯುವಕನನ್ನು ಪ್ರೀತಿಸುತ್ತಿದ್ದರು.
ಆತನು ಆಕೆಯ ಪೋನ್ ಕರೆಯನ್ನು ಸ್ವೀಕರಿಸದ ಕಾರಣ ಹಾಗೂ ಇನ್ನು ಮುಂದಕ್ಕೆ ಆತನು ತನಗೆ ಸಿಕ್ಕುವುದಿಲ್ಲವೆಂದು ಬೇಸರಗೊಂಡು ಎ.11 ರಂದು ಬೆಳಿಗ್ಗೆ ವಿಷ ಪದಾರ್ಥವನ್ನು ಹಾಲಿನಲ್ಲಿ ಬೆರೆಸಿ ಕುಡಿದಿದ್ದರು. ಬಳಿಕ ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ