ಮದುವೆ ನಿಶ್ಚಯವಾಗಿದ್ದ ಯುವತಿ ಮತ್ತೋರ್ವನೊಂದಿಗೆ ನಾಪತ್ತೆ: ಆಘಾತದಿಂದ ತಂಗಿ ಸಾವು
Team Udayavani, Sep 4, 2020, 12:28 PM IST
ಕಾರ್ಕಳ: ಮದುವೆ ನಿಶ್ಚಿತಾರ್ಥವಾಗಿದ್ದ ಅಕ್ಕ ಮನೆಯಿಂದ ನಾಪತ್ತೆಯಾದ ಹಿನ್ನಲೆಯಲ್ಲಿ ಮನನೊಂದ ಯುವತಿಯ ತಂಗಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮ್ರತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳದಲ್ಲಿ ಶುಕ್ರವಾರ ನಡೆದಿದೆ.
ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಳ ಗ್ರಾಮದ ಯುವತಿ ಗುರುವಾರ ನಾಪತ್ತೆಯಾಗಿದ್ದಳು. ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು.
ನಾಪತ್ತೆಯಾದ ಯುವತಿ ಹೊರಟು ಹೋಗುವಾಗ ತನ್ನ ತಂಗಿಯ ಮೊಬೈಲ್ ಗೆ ಕರೆ ಮಾಡಿ ಮನೆಯಲ್ಲಿ ನಿಶ್ಚಯ ಮಾಡಿರುವ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಳು. ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ತಿಳಿಸಿದ್ದಳು.
ಅಕ್ಕನ ಮಾತಿನಿಂದ ಆಘಾತಗೊಂಡ ತಂಗಿ ಅನಂತರ ನೊಂದಿದ್ದಳು. ಆಕೆ ತೀವ್ರ ಅಸ್ವಸ್ಥಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಗೆ ಲಾಕ್ ಡೌನ್ ಸಂದರ್ಭದಲ್ಲಿ ನಿಶ್ಚಿತಾರ್ಥ ನೆರವೇರಿದ್ದು, ಆಕೆ ಸಹೋದ್ಯೋಗಿ ಅಸ್ಸಾಂ ಮೂಲದ ಯುವಕನನ್ನು ಪ್ರೀತಿಸಿದ್ದಳು ಎಂದು ಮನೆಯವರು ಸಂಶಯ ವ್ಯಕ್ತಪಡಿಸಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ