ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ನೀಡಿ; ತಪ್ಪು ಕಲ್ಪನೆ ದೂರ ಮಾಡಿ

ಇಂದು 'ಅಲ್ಬಿನಿಸಂ' ದಿನ

Team Udayavani, Jun 13, 2019, 6:10 AM IST

alibi

ವಿಶ್ವಾದ್ಯಂತ ಹಲವರು ಜನ ಅಲ್ಬಿನಿಸಂ (ಬಿಳಿ ತೊನ್ನು) ರೋಗದಿಂದ ಬಳಲುತ್ತಿದ್ದಾರೆ. ಅಲ್ಬಿನಿಸಂ ಅನ್ನು ಸಾಮಾಜಿಕವಾಗಿ ಮತ್ತು ವೈದ್ಯಕೀಯವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದ್ದು, ಮೂಢನಂಬಿಕೆಗಳಿಂದ ಪ್ರಭಾವಿತಗೊಂಡಿದೆ.

ಇದೊಂದು ದೇವರ ಶಾಪ ಎಂಬ ತಪ್ಪು ಕಲ್ಪನೆ ಜನರಲ್ಲಿ ಬಿಂಬಿತಗೊಂಡಿದ್ದು,ಇದರಿಂದ ಅವರು ಸಾಮಾಜಿಕ ಕಳಂಕವಾಗಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಬನಿಸಂ ಹೊಂದಿರುವವರು ಯಾವುದೋ ನಿರ್ದಿಷ್ಟ ಸಮುದಾಯದವರು ಎಂಬ ತಪ್ಪು ಕಲ್ಪನೆ ನಮ್ಮದಾಗಿದ್ದು ಇದು ಒಂದು ಆನುವಂಶಿಕ ಸ್ಥಿತಿಯಾಗಿದೆ. ಕೆಲವರು ದೇಹದಲ್ಲಿ ಸಾಮಾನ್ಯವಾಗಿ ಬೇಕಾದ ವರ್ಣದ್ರವ್ಯ (ಬಣ್ಣ) ಇಲ್ಲದೆ ಜನಿಸುತ್ತಾರೆ. ಇದರಿಂದ ಅವರ ಶರೀರದಲ್ಲಿ ಕಣ್ಣಿನ ಚರ್ಮ, ಕೂದಲಿನ ಬಣ್ಣದಲ್ಲಿ ವ್ಯತ್ಯಾಸ ಕಂಡು ಬರುವುದಲ್ಲದೆ ತುಂಬಾ ತೆಳುವಾದ ಚರ್ಮವನ್ನು ಹೊಂದಿರುತ್ತಾರೆ.

ಕಣ್ಣುಗಳ ಮೇಲೆ ಪರಿಣಾಮ

ಕೆಲವರಿಗೆ ಅಲ್ಬಿನಿಸಂ ಕಣ್ಣುಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ .ಇದನ್ನು ಆಕ್ಯುಲರ್‌ ಅಲ್ಬಿನಿಸಂ ಎನ್ನಲಾಗುತ್ತದೆ.

ಇಂಥವರು ಸಾಮಾನ್ಯವಾಗಿ ನೀಲಿ ಕಣ್ಣುಗಳನ್ನು ಹೊಂದಿದ್ದು ಕೆಲವು ಸಂದರ್ಭ ಕಣ್ಣಿನ ಭಾಗ ಬಹಳ ಕಡಿಮೆ ಬಣ್ಣವನ್ನು ಹೊಂದಿರುತ್ತದೆ. ಇದರಿಂದ ಕಣ್ಣಿನ ನರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಕೂಡ ಇರುತ್ತದೆ.

ಇದು ಸಾಮಾನ್ಯವಾಗಿ ಹುಟ್ಟಿನಿಂದ ಬರುವ ಕಾಯಿಲೆಯಾಗಿದ್ದು, ಯಾವುದೇ ರೀತಿಯಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಬದಲಾಗಿ ಅವರು ಸೂರ್ಯನ ಕಿರಣಗಳಿಂದ ರಕ್ಷಣೆ ಪಡೆಯುವುದು ದೊಡ್ಡ ಸವಾಲಾಗಿದೆ.

ಅಲ್ಬನಿಸ್‌ಂ ಹೊಂದಿರುವವರು ಹದಿಹರೆಯದಲ್ಲಿ ಕೆಲವೊಮ್ಮೆ ಹತಾಶೆ, ದುಃಖದಿಂದ ಬಳಲುತ್ತಾರೆ. ಅಂತಹ ಸಂದರ್ಭಗಳಲ್ಲಿ ಕುಟುಂಬದವರು, ಸ್ನೇಹಿತರು ಇವರಿಗೆ ಸ್ವಾಂತನ ಹೇಳಬೇಕಾಗುತ್ತದೆ. ಇವರಿಗೆ ನೈತಿಕ ಸ್ಥೈರ್ಯ ತುಂಬುವುದೇ ಸಮಾಜದ ಬಹುದೊಡ್ಡ ಉಪಕಾರವಾಗುತ್ತದೆ.ಇದೆಲ್ಲ ಕಾರಣಗಳಿಂದ ಈ ರೋಗದ ಬಗ್ಗೆ ಜಾಗೃತಿ ವಹಿಸುವ ನಿಟ್ಟಿನಲ್ಲಿ 2014 ಡಿಸೆಂಬರ್‌ 18ರಂದು ಜನರಲ್ ಅಸೆಂಬ್ಲಿ ಜೂ. 13ರಂದು ಅಂತಾರಾಷ್ಟ್ರೀಯ ಅಲ್ಬಿನಿಸಮ್‌ ಜಾಗೃತಿ ದಿನವಾಗಿ ಘೋಷಿಸಿತು.

ಸವಾಲುಗಳಿಗೆ ಮುಕ್ತಿ ಸಿಗಲಿ

ಇಂದು ಅಲ್ಬನಿಸಂ ತಾರತಮ್ಯತೆಯಿಂದ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸವಾಲುಗಳಿಗೆ ಮುಕ್ತಿ ನೀಡಬೇಕು. ಇಂದಿಗೂ ಕೆಲವು ರಾಷ್ಟ್ರಗಳಲ್ಲಿ ಉಳ್ಳವರ ದಾಳಿಗೆ ಇವರು ಬಲಿಯಾಗುತ್ತಿದ್ದಾರೆ .ಇದೆಲ್ಲವೂ ಕೊನೆಗೊಳ್ಳಲಿ ಎಂಬುದು ಈ ದಿನದ ಆಚರಣೆಯ ಉದ್ದೇಶ.

ಯಾಕಾಗಿ ಆಚರಿಸುತ್ತೇವೆ?

ಈ ದಿನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಆಚರಿಸುತ್ತೇವೆ. ಇದು ಜನರಲ್ಲಿ ಮಾನವೀಯ ಮೌಲ್ಯವನ್ನು ಹುಟ್ಟುಹಾಕಿ ಜನರಲ್ಲಿ ಜಾಗೃತಿ ಮೂಡಿಸುತ್ತದೆ.

ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.

ಜಗತ್ತಿನಲ್ಲಿ ಪ್ರತಿಯೊಬ್ಬರೂ ಸಮಾನರು. ಮೈ ಬಣ್ಣಗಳಿಂದ ತಾರತಮ್ಯ ಮಾಡುವುದು ತರವಲ್ಲ. ಅಲ್ಬಿನಿಸಂ ಇರುವ ವ್ಯಕ್ತಿಗಳನ್ನು ಕೂಡ ಸಮಾಜದಲ್ಲಿ ಅಪಹಾಸ್ಯವಾಗಿ ಕಾಣದೆ ಪ್ರೀತಿಯಿಂದ ಕಾಣಿರಿ. ಇದರಿಂದ ಅವರು ಅನುಭವಿಸುತ್ತಿರುವ ಕಷ್ಟಗಳಿಗೆ ಸ್ವಲ್ಪವಾದರೂ ಮುಕ್ತಿ ದೊರಕಿದಂತಾಗುತ್ತದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಸ್ಥಾನಮಾನ ಲಭ್ಯವಾಗಬೇಕು ಎಂಬುದೇ ನಮ್ಮ ಆಶಯ.

ಏಕತೆ ಸಾಧಿಸುವ ಉದ್ದೇಶ

ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.
– ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.