ಕೋಟೆ :ವಯೋವೃದ್ಧರಿಗೆ ಊಟ ನೀಡುತ್ತಿರುವ ಗ್ರಾ.ಪಂ. ಅಧ್ಯಕ್ಷೆ
Team Udayavani, Mar 31, 2020, 5:16 AM IST
ಕಟಪಾಡಿ: ಕೋವಿಡ್ 19 ವೈರಸ್ ವ್ಯಾಪಿಸದಂತೆ ಕರೆಯಲಾದ ಲಾಕ್ಡೌನ್ ಕರೆಯಿಂದ ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೃತಿಕಾ ರಾವ್ ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಅಶಕ್ತರು, ವಯೋವೃದ್ಧರನ್ನು ಗುರುತಿಸಿ ಸ್ವತಃ ಅಡುಗೆ ಸಿದ್ಧಪಡಿಸಿ, ಊಟವನ್ನು ನೀಡುತ್ತಿದ್ದಾರೆ.
ಈಕೆ ಸಿದ್ಧ ಪಡಿಸಿದ ಅಡುಗೆಯಲ್ಲಿ ಪ್ರತಿಯೊಬ್ಬರಿಗೂ ಮಧ್ಯಾಹ್ನದ ಮತ್ತು ರಾತ್ರಿಯ ಸೇರಿ ಎರಡು ಹೊತ್ತಿನ ಊಟವನ್ನು ಕಳೆದ ಎರಡು ದಿನಗಳಿಂದ ನೀಡುತ್ತಾ ಬರುತ್ತಿದ್ದಾರೆ. ಸುಮಾರು 60ಕ್ಕೂ ಅಧಿಕ ಊಟವನ್ನು ಸಿದ್ಧಪಡಿಸಿ ಇದುವರೆಗೆ ವಿತರಿಸಿರುತ್ತಾರೆ. ಪರಿಸ್ಥಿತಿ ತಿಳಿಗೊಳ್ಳುವವರೆಗೆ ಮುಂದುವರಿಸುವ ಇರಾದೆಯನ್ನು ವ್ಯಕ್ತಪಡಿಸಿರುತ್ತಾರೆ.
ಈ ಭಾಗದ ಅಶಕ್ತ ವಯೋವೃದ್ಧರು ಇಂತಹ ತುರ್ತು, ಸಂದಿಗ್ಧ ಪರಿಸ್ಥಿಯನ್ನು ಅರಿತ ಹೆಣ್ಣು ಮಗಳು ಈ ರೀತಿಯಾಗಿ ವಯೋವೃದ್ಧರಾದ ನಮಗೆ ಕೈಯಡುಗೆ ಊಟ ನೀಡುತ್ತಿದ್ದು ಬಹಳಷ್ಟು ಶ್ರೇಷ್ಠ ಕೆಲಸ ಎಂದು ಹರಸಿದ್ದು, ಈಕೆಯ ಈ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.ಕೋಟೆ ಗ್ರಾ.ಪಂ. ಸದಸ್ಯರಾದ ರತ್ನಾಕರ ಕೋಟ್ಯಾನ್, ಲಲಿತಾ ಸೇರಿಗಾರಿ, ಆಶಾ ಕಾರ್ಯಕರ್ತೆ ಚಂದ್ರಕಲಾ, ಪ್ರಸನ್ನ ಭಟ್, ನಿತಿನ್, ಸಂತೋಷ್ ಮೆಂಡನ್ ಜೊತೆಗಿದ್ದು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?