ಮುಜರಾಯಿ ದೇಗುಲಗಳಲ್ಲಿ ಗೋ ಸಂರಕ್ಷಣೆ ಕೇಂದ್ರ


Team Udayavani, Feb 25, 2020, 6:15 AM IST

kota-poojari

ಕೋಟ: ರಾಜ್ಯದ “ಎ’ ದರ್ಜೆಯ 25 ಶ್ರೀಮಂತ ದೇಗುಲಗಳಲ್ಲಿ ಮುಜರಾಯಿ ಇಲಾಖೆ ವತಿಯಿಂದ ಗೋ ಸಂರಕ್ಷಣೆ ಕೇಂದ್ರ ತೆರೆಯಲು ಇಲಾಖೆ ನಿಶ್ಚಯಿಸಿದ್ದು, ಪ್ರಸ್ತಾವನೆ ಸಲ್ಲಿಕೆಯಾಗಿದೆ. ದೇಶೀ ಗೋ ಸಂರಕ್ಷಣೆ ಇದರ ಪ್ರಮುಖ ಉದ್ದೇಶ. ಜತೆಗೆ ಅಕ್ರಮ ಸಾಗಾಟ ಸಂದರ್ಭ ವಶಪಡಿಸಿಕೊಂಡ ಜಾನುವಾರುಗಳು, ಅತಿವೃಷ್ಟಿ, ಅನಾವಷ್ಟಿಯಿಂದ ಮೇವಿನ ಕೊರತೆಯಾಗಿ ಸಾವನ್ನಪ್ಪುವ ಸ್ಥಿತಿಯಲ್ಲಿರುವವು, ವಯಸ್ಕ, ಕಾಯಿಲೆಪೀಡಿತ ಗೋವುಗಳ ರಕ್ಷಣೆಯೂ ಸೇರಿದೆ.

ಹೊಸನಗರ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಗೋಸ್ವರ್ಗದ ಪರಿ
ಕಲ್ಪನೆ ಮತ್ತು ಗೋಸೇವೆಯಲ್ಲಿ ತೊಡಗಿಸಿಕೊಂಡ ನಾಡಿನ ಇತರ ಸಾಧು-
ಸಂತರು, ಧಾರ್ಮಿಕಮುಖಂಡರ ಮಾರ್ಗದರ್ಶನದಲ್ಲಿ ಯೋಜನೆಗೆ ಅಂತಿಮರೂಪ ನೀಡಲಾಗುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಆರಂಭದಲ್ಲಿ 25 ದೇಗುಲ
ಪ್ರಾರಂಭಿಕ ಹಂತದಲ್ಲಿ ಕೇಂದ್ರ ಸ್ಥಾಪನೆಗೆ ಉಡುಪಿ ಜಿಲ್ಲೆಯ ಮಂದಾರ್ತಿ ದೇವಸ್ಥಾನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕೊಲ್ಲೂರು ದೇಗುಲದಲ್ಲಿ ಈಗಿರುವ ಗೋ ಕೇಂದ್ರವನ್ನು ವ್ಯವಸ್ಥಿತಗೊಳಿಸಲಾಗುತ್ತದೆ. ಕಟೀಲು, ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಎಲ್ಲಮ್ಮ ಸೇರಿದಂತೆ 25 ಕಡೆಗಳಲ್ಲಿ ಸ್ಥಾಪನೆಯಾಗಲಿದ್ದು, ಗ್ರಾಮೀಣ ಭಾಗದ ದೇಗುಲಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ದೇಗುಲದ ಅಥವಾ ಸಮೀಪದ ಗೋಮಾಳ, ಇತರ ಸರಕಾರಿ ಕನಿಷ್ಠ 10ಎಕ್ರೆ ಸ್ಥಳ ಮೀಸಲಿಡಲಾಗುತ್ತದೆ.

ರಾಜ್ಯದ ಕೆಲವು ಗೋಸರಂಕ್ಷಣ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ಜಾನುವಾರುಗಳು ಸಂಕಷ್ಟದಲ್ಲಿವೆ ಎನ್ನುವ ದೂರು ಆಗಾಗ ಕೇಳಿಬರುತ್ತಿದೆ. ಮುಜರಾಯಿ ಇಲಾಖೆಯಿಂದಲೇ ಸ್ಥಾಪನೆಯಾಗುವ ಕೇಂದ್ರಗಳಲ್ಲಿ ಅಂತಹ ಅವ್ಯವಸ್ಥೆ ಆಗಬಾರದು ಎಂಬುದಕ್ಕಾಗಿ ಆಹಾರ, ನೆಲೆ ಮತ್ತು ಆರೈಕೆಯಲ್ಲಿ ಯಾವುದೇ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ತಜ್ಞರ ಸಲಹೆ ಪಡೆದು ಸೌಲಭ್ಯಗಳ ಕುರಿತು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.

ಹಲವು ದಶಕಗಳ ಬೇಡಿಕೆ
ಸರಕಾರದ ವತಿಯಿಂದ ಪ್ರತೀ ತಾಲೂಕುಗಳಲ್ಲಿ ಗೋಶಾಲೆ ತೆರೆದು ಜಾನುವಾರು ಸಂರಕ್ಷಣೆ ನಡೆಸಬೇಕು ಎನ್ನುವುದು ಹಿಂದೂ ಸಂಘಟನೆ ಸೇರಿದಂತೆ ರೈತರು, ಗೋಪ್ರೇಮಿಗಳ ಹಲವು ದಶಕಗಳ ಬೇಡಿಕೆ. ಹಿಂದಿನ ಅವಧಿಯ ಬಿಜೆಪಿ ಸರಕಾರದಲ್ಲೂ ಈ ಪ್ರಸ್ತಾವನೆ ಇತ್ತು. ಈಗ ಮುಜರಾಯಿ ಇಲಾಖೆಯ ಮೂಲಕ ಈಡೇರುತ್ತಿದೆ.

ಗೋಸಂರಕ್ಷಣೆಗಾಗಿ ಮುಜರಾಯಿ ಇಲಾಖೆಯ ಎ ದರ್ಜೆಯ 25 ದೇಗುಲಗಳಲ್ಲಿ ಪ್ರಾಯೋಗಿಕವಾಗಿ ಗೋಶಾಲೆಗಳನ್ನು ತೆರೆದು ಬಳಿಕ ಹಂತಹಂತವಾಗಿ ವಿಸ್ತರಿಸಲಾಗುವುದು. ಇದಕ್ಕೆ ಹಣಕಾಸಿನ ಸಮಸ್ಯೆ ಎದುರಾಗದು. ಶೀಘ್ರವಾಗಿ ಯೋಜನೆ ಕಾರ್ಯಗತಗೊಳ್ಳಲಿದೆ.
– ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಮುಜರಾಯಿ ಸಚಿವರು

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.