“80 ಶೇ. ಸಹಾಯಧನದಲ್ಲಿ ಗೋಬರ್‌ ಗ್ಯಾಸ್‌ ಘಟಕ’


Team Udayavani, Sep 6, 2018, 6:50 AM IST

0509kar3.jpg

ಕಾರ್ಕಳ: ಸಾವಯವ ಪರಿವಾರ ಒಕ್ಕೂಟ, ರಾಜ್ಯದ ಪ್ರತಿಷ್ಠಿತ ಸಾಫ್ಟ್ವೇರ್‌ ಕಂಪೆನಿಯೊಂದರ ಸಹಯೋಗದಲ್ಲಿ ಜಿಲ್ಲೆಯ ಸಾವಯವ ಪರಿವಾರ ಟ್ರಸ್ಟ್‌ಗಳ ಮೂಲಕ ಸಾವಯವ ಕೃಷಿಕರಿಗೆ 80 ಶೇ. ಸಹಾಯಧನದಲ್ಲಿ ಗೋಬರ್‌ ಗ್ಯಾಸ್‌ ಘಟಕ ನೀಡಲಾಗುವುದು. 

ಭಾ.ಕಿ.ಸಂ. ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಸಂಜೀವಿನಿ  ಸಾವಯವ ಕೃಷಿ ಪರಿವಾರ ಮುಖಾಂತರ ನೀಡಲಾಗು ತ್ತದೆ. ಆಸಕ್ತ ಸಾವಯವ ರೈತರು ಇದರ ಸದಸ್ಯರಾಗುವ ಮೂಲಕ ಗೋಬರ್‌ ಗ್ಯಾಸ್‌ ಘಟಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಬಾಕಿಸಂ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ನಿಟ್ಟೆ ಹೇಳಿದರು.

ಭಾರತೀಯ ಕಿಸಾನ್‌ ಸಂಘ ಕಾರ್ಕಳ ತಾ|   ಸಮಿತಿಯ ಮಾಸಿಕ ಸಭೆಯಲ್ಲಿ ಅವರು ರೈತರಿಗೆ ಮಾಹಿತಿ ನೀಡಿದರು.  
ಯೋಜನೆಯ ಲಾಭ ಪಡೆಯಲು ರೈತರ ಮನೆಯಲ್ಲಿ ಕನಿಷ್ಠ ಅರ್ಧ ಎಕ್ರೆ ಕೃಷಿಭೂಮಿ, ಕನಿಷ್ಠ 2 ದನ, ಸಾವಯವ ಕೃಷಿಯನ್ನು ಸಂಪೂರ್ಣವಾಗಿ ಅಥವಾ ಸ್ವಲ್ಪ ಭಾಗದಲ್ಲಾದರೂ ಅಳವಡಿಸಿಕೊಂಡಿರಬೇಕು. ಹೊಸದಾಗಿ ಮುಂದೆ ರಚಿಸುವ ಘಟಕಗಳಿಗೆ ಮಾತ್ರ ಈ ಸಹಾಯಧನ ಸಿಗಲಿದೆ. ಹೆಸರನ್ನು ನೋಂದಾಯಿಸಿದ ಅನಂತರ ರೈತರ ಕೃಷಿ ಕ್ಷೇತ್ರ ತಪಾಸಣೆ ನಡೆಸಿ ಅನುಮೋದನೆ ಸಿಕ್ಕಿದ ಬಳಿಕವಷ್ಟೇ ಘಟಕ ರಚನೆಗೆ ಅವಕಾಶವಿದೆ ಎಂದರು.

ಭಾ.ಕಿ.ಸಂ. ಜಿಲ್ಲಾಧ್ಯಕ್ಷ ಬಿ. ವಿ.ಪೂಜಾರಿ ಪೆರ್ಡೂರು ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಎಲ್ಲ   ತರದ ಕೃಷಿ ಭತ್ತ, ತೆಂಗು, ಅಡಿಕೆ, ಕಾಳುಮೆಣಸು ಇತ್ಯಾದಿಗಳಿಗೆ ಅಧಿಕ ರೋಗಭಾದೆಯಿದ್ದು, ರೈತರು ಬೆಳೆ ನಾಶದಿಂದ ತುಂಬಾ ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ,  ರಾಜ್ಯ ಸರಕಾರಗಳು ಸರಿಯಾಗಿ ಸಮೀಕ್ಷೆ ನಡೆಸಿ, ರೈತರ ಬೆಳೆನಷ್ಟಕ್ಕೆ ಸೂಕ್ತ ಮಾರುಕಟ್ಟೆ ಬೆಲೆ  ನೀಡಿದಲ್ಲಿ ಮುಂದಿನ ದಿನಗಳಲ್ಲಿ ರೈತ ಕೃಷಿ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು ಎಂದರು. ಸಭೆಯಲ್ಲಿ ಕಾರ್ಯದರ್ಶಿ ಅನಂತ ಭಟ್‌ ಇರ್ವತ್ತೂರು, ಪದ್ಮನಾಭ ಶೆಟ್ಟಿ ನಿಂಜೂರು, ಕೆ.ಪಿ. ಭಂಡಾರಿ ಕೆದಿಂಜೆ, ಚಂದ್ರಹಾಸ ಶೆಟ್ಟಿ ಇನ್ನಾ, ಕೆ. ಭೋಜ ಶೆಟ್ಟಿ ಕುಚ್ಚಾರು ಹಾಗೂ ಗ್ರಾಮ ಸಮಿತಿ ಪ್ರಮುಖರು  ಉಪಸ್ಥಿತರಿದ್ದರು. ಸುಂದರ ಶೆಟ್ಟಿ ಮುನಿಯಾಲು ಅಧ್ಯಕ್ಷತೆ ವಹಿಸಿದ್ದರು. ಗೋವಿಂದರಾಜ ಭಟ್‌ ವಂದಿಸಿದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.