ಗೋಕಳ್ಳರ ಪರೇಡ್‌: ಗೂಂಡಾ ಕಾಯ್ದೆ ಜರಗಿಸುವ ಎಚ್ಚರಿಕೆ


Team Udayavani, Jul 16, 2019, 5:31 AM IST

16421507UDPS4

ಉಡುಪಿ: ಜಿಲ್ಲೆಯಲ್ಲಿ ದಾಖಲಾದ ಗೋಕಳ್ಳತನ ಹಾಗೂ ಅಕ್ರಮ ಗೋಸಾಗಾಟ ಪ್ರಕರಣಗಳಲ್ಲಿ ಭಾಗಿಯಾ ದವರ ಪರೇಡನ್ನು ಉಪವಿಭಾಗವಾರು ನಡೆಸಲಾಯಿತು.

ಕುಂದಾಪುರ ಉಪ ವಿಭಾಗ
ಕುಂದಾಪುರ ಉಪವಿಭಾಗದ ಪರೇಡನ್ನು ಕುಂದಾಪುರದ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ…, ಕುಂದಾಪುರ ಪೊಲೀಸ್‌ ಉಪವಿಭಾಗಾಧಿಕಾರಿ ಬಿ.ಪಿ. ದಿನೇಶ್‌ ಕುಮಾರ್‌ ಮತ್ತು ಕುಂದಾಪುರ ಉಪ ವಿಭಾಗದ ಪೊಲೀಸ್‌ ಅಧಿಕಾರಿಯವರು ಭಾಗವಹಿಸಿದ್ದರು.

ಉಪವಿಭಾಗದ ಠಾಣೆಗಳಾದ ಕುಂದಾ ಪುರದಿಂದ 15, ಕುಂದಾಪುರ ಗ್ರಾಮಾಂ ತರದಿಂದ 14, ಬೈಂದೂರಿನಿಂದ 6, ಶಂಕರನಾರಾಯಣದಿಂದ 5, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ತಲಾ 4 ಜನ ಹಾಗೂ ಅಮಾಸೆಬೈಲು ಠಾಣಾ ವ್ಯಾಪ್ತಿಯಿಂದ ಇಬ್ಬರು ಒಟ್ಟು 50 ಜನ ಆರೋಪಿಗಳು ಭಾಗವಹಿಸಿದ್ದರು.

ಉಡುಪಿ ಉಪ ವಿಭಾಗ
ಉಡುಪಿ ಉಪವಿಭಾಗದಲ್ಲಿ ನಡೆದ ಪರೇಡನ್ನು ಉಡುಪಿ ಉಪವಿಭಾಗದ ಡಿವೈಎಸ್‌ಪಿ ಟಿ.ಆರ್‌. ಜೈಶಂಕರ ಅವರ ನೇತೃತ್ವದಲ್ಲಿ ಪೊಲೀಸ್‌ ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ನಡೆಸಲಾಯಿತು. ಉಪವಿಭಾಗದ ಪೊಲೀಸ್‌ ಅಧಿ ಕಾರಿಯವರು ಭಾಗವಹಿಸಿದ್ದರು. ಕೋಟಾ ಠಾಣೆಯಿಂದ 11, ಹಿರಿಯಡ್ಕ ಠಾಣೆಯಿಂದ 10, ಮಲ್ಪೆ ಠಾಣೆಯಿಂದ 7 ಹಾಗೂ ಬ್ರಹ್ಮಾವರ ಠಾಣಾ ಸರಹದ್ದಿನಿಂದ 4 ಸಹಿತ ಒಟ್ಟು 32 ಜನರು ಭಾಗವಹಿಸಿದ್ದರು.

ಕಾರ್ಕಳ ಉಪ ವಿಭಾಗ
ಕಾರ್ಕಳ ಉಪವಿಭಾಗದ ಪರೇಡನ್ನು ಕಾರ್ಕಳ ಪೊಲೀಸ್‌ ಉಪವಿಭಾಗ ಕಚೇರಿಯ ಮುಂಭಾಗದಲ್ಲಿ ನಡೆಸ ಲಾಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ, ಕಾರ್ಕಳ ಪೊಲೀಸ್‌ ಉಪವಿಭಾಗಾಧಿಕಾರಿ ಪಿ. ಕೃಷ್ಣಕಾಂತ್‌ ಮತ್ತು ಕಾರ್ಕಳ ಉಪ ವಿಭಾಗದ ಪೊಲೀಸ್‌ ಅಧಿಕಾರಿಗಳು ಭಾಗವಹಿಸಿದ್ದರು. ಉಪವಿಭಾಗದ ಠಾಣೆಗಳಾದ ಕಾರ್ಕಳ ನಗರದಿಂದ 7, ಕಾರ್ಕಳ ಗ್ರಾಮಾಂತರದಿಂದ 14, ಹೆಬ್ರಿಯಿಂದ 15, ಅಜೆಕಾರಿನಿಂದ 8, ಕಾಪುವಿನಿಂದ 9, ಪಡುಬಿದ್ರಿಯಿಂದ 10, ಶಿರ್ವಾ ಠಾಣಾ ವ್ಯಾಪ್ತಿಯಿಂದ 12 ಸಹಿತ ಒಟ್ಟು 75 ಜನರು ಭಾಗವಹಿಸಿದ್ದರು.

ಎಚ್ಚರಿಕೆ
ಪರೇಡ್‌ನ‌ಲ್ಲಿ ಭಾಗಿಯಾದವರಿಗೆ ಇನ್ನು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದಾಗಿ ಸೂಚಿಸಿ, ಮುಂದುವರಿಸಿದಲ್ಲಿ ಗಡೀಪಾರು / ಗೂಂಡಾ ಕಾಯ್ದೆಯನ್ವಯ ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಲಾಯಿತು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಸನ್ನಡತೆಗಾಗಿ ತಾಲೂಕು ದಂಡಾಧಿಕಾರಿಯವರಿಗೆ ಈಗಾಗಲೇ ವರದಿ ಸಲ್ಲಿಸಿದ್ದು, ಅಧಿಕ ಮೊತ್ತದ ಬಾಂಡ್‌ ಮುಚ್ಚಳಿಕೆಯನ್ನು ಬರೆಯಿಸಿಕೊಳ್ಳಲಾಗಿದೆ. ಕಳೆದ ತಿಂಗಳಿನಲ್ಲಿ ಪರೇಡನ್ನು ಠಾಣಾವಾರು ನಡೆಸಲಾಗಿತ್ತು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.