ಚಿನ್ನದ ಕರಿಮಣಿ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
Team Udayavani, Jun 29, 2022, 6:40 AM IST
ಬೈಂದೂರು: ಬೈಂದೂರು ತಾಲೂಕಿನ ಯಡ್ತರೆ ಬೈಪಾಸ್ ಬಳಿ ರಿಕ್ಷಾ ಚಲಾಯಿಸಿಕೊಂಡಿರುವ ಅನಿಲ್ ಫೆರ್ನಾಂಡಿಸ್ಅವರು ತಮ್ಮ ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋಗಿದ್ದ ಚಿನ್ನದ ಕರಿಮಣಿ ಸರವನ್ನು ಮಹಿಳೆಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮುಂಜಾನೆ ಬೆಂಗಳೂರಿನಿಂದ ಬಂದಿದ್ದ ಯಶೋದಾ ಆಟೋದಲ್ಲಿ ಮನೆಗೆ ಹೋಗುವಾಗ ಕರಿಮಣಿ ಸರ ಬಿದ್ದಿತ್ತು. ಚಾಲಕ ಅನಿಲ್ ಮಹಿಳೆಯನ್ನು ಮನೆಗೆ ಬಿಟ್ಟು ಬಳಿಕ ಯಡ್ತರೆಯ ಆಟೋ ನಿಲ್ದಾಣಕ್ಕೆ ಬಂದು ರಿಕ್ಷಾವನ್ನು ನಿಲ್ಲಿಸಿ ಸ್ವಚ್ಛಗೊಳಿಸುವಾಗ ಸರ ಸಿಕ್ಕಿತು.
ತತ್ಕ್ಷಣ ಬೈಂದೂರು ಠಾಣೆಗೆ ಹಸ್ತಾಂತರಿಸಿದ್ದಾರೆ. ಬಳಿಕ ಚಾಲಕನ ಸಮಕ್ಷಮ 1.50 ಲಕ್ಷ ರೂ. ಮೌಲ್ಯದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಯಶೋದಾ ಅವರಿಗೆ ಹಸ್ತಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ