ಜಲಾಮೃತ ಯೋಜನೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ


Team Udayavani, Jun 19, 2019, 5:35 AM IST

jalamruta

ಉಡುಪಿ: ರಾಜ್ಯ ಸರಕಾರದ ಮಹತ್ವಾಂಕಾಂಕ್ಷಿ ಯೋಜನೆಯಾದ ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಎಲ್ಲ ಜಿಲ್ಲೆಗಳಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ.

ರಾಜ್ಯದಲ್ಲಿ ನೀರನ್ನು ಉಳಿಸುವ ಉದ್ದೇಶದಿಂದ 2019ನೇ ವರ್ಷವನ್ನು ಸರಕಾರ ಜಲವರ್ಷ ಎಂದು ಘೋಷಿಸಿಕೊಂಡಿತ್ತು. ಹನಿ ನೀರನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುತ್ತೇವೆ ಎಂಬುವುದು ಜಲಾಮೃತ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯಾಗಿದೆ. ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಈ ಕಾರ್ಯಕ್ರಮ ಅನುಷ್ಠಾನವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರಕಾರದಿಂದ 500 ಕೋ.ರೂ.ಗಳನ್ನು ಮೀಸಲಿಟ್ಟಿದೆ.

ಜಾಗೃತಿ ಮೂಡಿಸುವ ಕೆಲಸ

ಪ್ರತೀ ಜಿಲ್ಲೆಯಲ್ಲಿ ಜಿ.ಪಂ.ನ 5 ತಂಡಗಳು ಇದಕ್ಕಾಗಿ ಕಾರ್ಯನಿರ್ವಹಿಸುತ್ತಿವೆ. 1 ತಂಡದಲ್ಲಿ 3 ಮಂದಿ ಸದಸ್ಯರಿರುತ್ತಾರೆ. ಜಿಲ್ಲಾಡಳಿತದ ಮೂಲಕ ಇವರಿಗೆ ವಾಹನ ಸೌಲಭ್ಯ ಒದಗಿಸಲಾಗುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತಲಾ 1 ಗಂಟೆಯಂತೆ ಇವರು ಮಾಹಿತಿ ನೀಡಲಿದ್ದಾರೆ. ಉಳಿದಂತೆ ಬೆಳಗ್ಗೆ 9ರಿಂದ ಸಂಜೆ 6.30ರ ವರೆಗೂ ವಿವಿಧ ಪ್ರದೇಶಗಳಿಗೆ ತೆರಳಿ ಪವರ್‌ ಪಾಯಿಂಟ್, ಜಾಗೃತಿ ಕಾರ್ಯಕ್ರಮಗಳನ್ನೂ ಕೂಡ ಆಯೋಜಿಸುತ್ತಾರೆ.

ಏನಿದು ಜಲಾಮೃತ ಯೋಜನೆ?

ರಾಜ್ಯದಲ್ಲಿ ಬರಸ್ಥಿತಿಯನ್ನು ಎದುರಿಸಲು 2019-20ನೇ ಸಾಲಿನ ಬಜೆಟ್‌ನಲ್ಲಿ 2019ನೇ ವರ್ಷವನ್ನು ಜಲಾಮೃತ ವರ್ಷ ಎಂದು ಘೋಷಿಸಿಕೊಂಡಿತ್ತು. ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಮತ್ತು ಹಸುರೀಕರಣವನ್ನು ಕೇಂದ್ರವಾಗಿಟ್ಟುಕೊಂಡು ಈ ಯೋಜನೆಯನ್ನು ಆರಂಭಿಸಲಾಗಿದೆ.

ಉತ್ತಮ ಸ್ಪಂದನೆ

ಜಿಲ್ಲೆಯಲ್ಲಿ ಜಲಾಮೃತ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಇದನ್ನು ಆಲಿಸಿ ಅನುಷ್ಠಾನದ ಬಗ್ಗೆಯೂ ಮಾಹಿತಿ ಕೇಳಿ ಪಡೆದುಕೊಳ್ಳುತ್ತಿದ್ದಾರೆ. ಜೂನ್‌ 11ರಿಂದ ಆರಂಭಗೊಂಡಿದ್ದು, ಬ್ರಹ್ಮಾವರ, ಕೋಟೇಶ್ವರ, ಬಸ್ರೂರು, ಶಿರಿಯಾರ, ಯಡ್ತಾಡಿ, ಸ್ಯಾಬ್ರಕಟ್ಟೆ, ಹಾಲಾಡಿ, ಸಿದ್ದಾಪುರ, ಶಂಕರನಾರಾಯಣ, ಹಳ್ಲಿಹೊಳೆ, ಬಸ್ರೂರು, ನೆಲ್ಲಿಕಟ್ಟೆ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮ ಪೂರ್ಣಗೊಂಡಿದೆ. ವಾಹನ ಸಂಚರಿಸಿದ ಜಾಗದಲ್ಲೆಲ್ಲ ಜನರು ಆಸಕ್ತಿಯಿಂದ ಬಂದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
-ಜೋಸೆಫ್ ಜಿ.ಎಂ.ರೆಬೆಲ್ಲೋ,ತಂಡದ ಸದಸ್ಯ
ನೀರಿನ ಸಂರಕ್ಷಣೆಗೆ ಆದ್ಯತೆ

ನೀರಿನ ಸಂರಕ್ಷಣೆಗೆ ಆದ್ಯತೆ ನೀಡುವ ಯೋಜನೆ ಇದಾಗಿದೆ. ಜಿಲ್ಲೆಯ ಪ್ರತೀ ಗ್ರಾ.ಪಂ.ಗಳಲ್ಲೂ 500 ಗಿಡಗಳನ್ನು ನೆಡುವ ಪ್ರಕ್ರಿಯೆ ಆರಂಭಗೊಂಡಿದೆ. ನರೇಗಾ ಸಹಿತ ಇನ್ನಿತರ ಯೋಜನೆಗಳ ಮೂಲಕ ಕೆರೆಗಳ ಹೂಳೆತ್ತುವಿಕೆ ಸಹಿತ ಇತರ ಪ್ರಕ್ರಿಯೆಗಳು ನಿರಂತರ ನಡೆಯಲಿವೆ.
-ಸಿಂಧೂ ಬಿ. ರೂಪೇಶ್‌,ಜಿ.ಪಂ. ಸಿಇಒ
ನೀರಿನ ಮಿತ ಬಳಕೆಯ ಅರಿವು

ವೈಜ್ಞಾನಿಕವಾಗಿ ನೀರು ಸಂಗ್ರಹಣೆ ಮಾಡಲು ಜಲಮೂಲಗಳ ನಿರ್ಮಾಣ ಮಾಡುವುದು ನೀರಿನ ಲಭ್ಯತೆ ಮತ್ತು ಮಿತಬಳಕೆ ಬಗ್ಗೆ ಅರಿವು ಮೂಡಿಸಲಿದ್ದಾರೆ. ಫ‌ಲಾನುಭವಿಗಳ ಸ್ವಂತ ಮನೆಯಲ್ಲಿ ಮಳೆ ಕೊಯ್ಲು ಅಳವಡಿಸುವುದು ಮುಂತಾದ ಕಾರ್ಯಕ್ರಮಗಳು ಇದರ ವ್ಯಾಪ್ತಿಗೆ ಬರುತ್ತದೆ.
ಕೆರೆಗಳ ಪುನರುಜ್ಜೀವನ

ನಿಷ್ಕ್ರಿಯವಾಗಿರುವ ಜಲಾಶಯಗಳು, ನದಿಗಳು, ಕೆರೆಗಳು, ಕಾಲುವೆಗಳನ್ನು ಗುರುತಿಸಿ ಅದಕ್ಕೆ ಪುನರುಜ್ಜೀವನ ನೀಡುವಂತಹ ಕೆಲಸದ ಮಾಹಿತಿ ನೀಡುವ ಕೆಲಸವೂ ಈ ತಂಡದಿಂದ ಆಗಲಿದೆ.
ಹಸುರೀಕರಣ

ಅಂತರ್ಜಲ ಮಟ್ಟ ಹಾಗೂ ಮಳೆಯ ಪ್ರಮಾಣವನ್ನು ಹೆಚ್ಚಿಸುವುವ ಸಲುವಾಗಿ ಪ್ರತೀ ಜಿಲ್ಲೆಯಲ್ಲಿ 50 ಲಕ್ಷ ಸಸಿಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಅರಣ್ಯೀಕರಣ ಮಾಡುವ ಉದ್ದೇಶವನ್ನೂ ಹೊಂದಲಾಗಿದೆ. ಕೆಲಕಾಮಗಾರಿಗಳು ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಡ ನಡೆಯಲಿದೆ.

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.