ಅವಿಭಜಿತ ದ.ಕ. ಜಿಲ್ಲೆ: ಭಾಗ್ಯಲಕ್ಷ್ಮೀ ಬಾಂಡ್ಗೆ ಉತ್ತಮ ಪ್ರತಿಕ್ರಿಯೆ
74,555 ಬಾಂಡ್ ವಿತರಣೆ ಉಡುಪಿಯಲ್ಲಿ 11 ಸಾವಿರ ವಿದ್ಯಾರ್ಥಿವೇತನ 298 ಡೆತ್ ಕ್ಲೇಮ್
Team Udayavani, Oct 26, 2019, 5:02 AM IST
ಉಡುಪಿ: ಹೆಣ್ಣು ಮಗುವಿನ ಜನನ ಉತ್ತೇಜಿಸಲು ಮತ್ತು ಉತ್ತಮ ಭವಿಷ್ಯ ಕಲ್ಪಿಸಲು ರಾಜ್ಯ ಸರಕಾರ 2006ರಲ್ಲಿ ಜಾರಿಗೆ ತಂದ “ಭಾಗ್ಯ ಲಕ್ಷ್ಮೀ’ ಯೋಜನೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 81,804 ಹೆಣ್ಣುಮಕ್ಕಳು ನೋಂದಾ ಯಿಸಿಕೊಂಡಿದ್ದು, 74,555 ಫಲಾನುಭವಿಗಳಿಗೆ ಬಾಂಡ್ ವಿತರಣೆಯಾಗಿದೆ. 2006ರ ಎಪ್ರಿಲ್ನಿಂದ 2019ರ ಸೆಪ್ಟಂಬರ್ ವರೆಗೆ ಉಡುಪಿ ಜಿಲ್ಲೆಯಲ್ಲಿ 41,428 ಅರ್ಜಿಗಳು, ದ.ಕ. ಜಿಲ್ಲೆಯಲ್ಲಿ 40,376 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಉಡುಪಿಯಲ್ಲಿ 37,488 ಮತ್ತು ದ.ಕ.ದಲ್ಲಿ 37,067 ಜನರಿಗೆ ಬಾಂಡ್ ವಿತರಿಸಲಾಗಿದೆ. ಸುಮಾರು 7,247 ಬಾಂಡ್ಗಳು ವಿತರಣೆಗೆ ಬಾಕಿಯಿವೆ.
ಕುಂದಾಪುರದಲ್ಲಿ ಹೆಚ್ಚು
ಕುಂದಾಪುರ ತಾಲೂಕಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆ ಯಾಗುತ್ತಿದೆ. ಇಲ್ಲಿಯವರೆಗೆ 18,593 ಅರ್ಜಿ ಸಲ್ಲಿಕೆಯಾಗಿದ್ದು, 16,584 ಜನರಿಗೆ ಬಾಂಡ್ ವಿತರಣೆಯಾಗಿದೆ. ಉಡುಪಿಯಲ್ಲಿ 5,745, ಕಾರ್ಕಳದಲ್ಲಿ 5,497, ಬ್ರಹ್ಮಾವರದಲ್ಲಿ 9,580 ಅರ್ಜಿಗಳು ಸಲ್ಲಿಕೆಯಾಗಿವೆ.
ಡೆತ್ ಕ್ಲೇಮ್
ಯೋಜನೆಯಡಿ ಫಲಾನುಭವಿಯ ತಂದೆ ಮೃತಪಟ್ಟರೆ ಹೆಣ್ಣು ಮಗುವಿಗೆ ಬಾಂಡ್ನ ಶೇ. 75ರಷ್ಟು ಮೊತ್ತ ಸಿಗು ತ್ತದೆ. ಉಡುಪಿ ಜಿಲ್ಲೆಯಲ್ಲಿ ಡೆತ್ ಕ್ಲೇಮ್ಗೆ 447 ಜನರು ಅರ್ಜಿ ಸಲ್ಲಿಸಿ ದ್ದಾರೆ. ಉಡುಪಿ 54, ಕುಂದಾಪುರ 108, ಬ್ರಹ್ಮಾವರ 86, ಕಾರ್ಕಳದಲ್ಲಿ 50 ಫಲಾನುಭವಿಗಳು ಸೇರಿದಂತೆ ಒಟ್ಟು 298 ಅರ್ಜಿಗಳಿಗೆ ಹಣ ಪಾವತಿಯಾಗಿದೆ.
11 ಸಾವಿರ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ
2006ರಿಂದ 2008ರ ಜು. 31 ರೊಳಗೆ 11,093 ಮಂದಿ ಯೋಜನೆ ಯಡಿ ನೋಂದಾ ಯಿಸಿ ಕೊಂಡಿದ್ದಾರೆ. ಅವರಿಗೆ ಸರಕಾರದಿಂದ ವಾರ್ಷಿಕ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಪ್ರಾರಂಭಿಕ ಹಂತದಲ್ಲಿ ನೋಂದಾ ಯಿಸಿಕೊಂಡವರಿಗೆ ಸರಕಾರ 10,000 ರೂ. ಠೇವಣಿಯಿ ರಿಸಿದ್ದು, 18 ವರ್ಷ ಪೂರ್ಣಗೊಂಡ ಅನಂತರ ಹೆಣ್ಣು ಮಕ್ಕಳಿಗೆ 34,365 ರೂ. ದೊರಕಲಿದೆ.
ಏನಿದು ಯೋಜನೆ?
ಬಡತನ ರೇಖೆಗಿಂತ ಕೆಳಗಿರುವ, ಪಡಿತರ ಚೀಟಿ ಹೊಂದಿರುವ ಕುಟುಂಬದ ಎರಡು ಹೆಣ್ಣು ಮಕ್ಕಳು
ಭಾಗ್ಯಲಕ್ಷ್ಮೀ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಲು ಅರ್ಹ ರಾಗಿರುತ್ತಾರೆ. ನೋಂದಣಿಯಾದ ಕುಟುಂಬದಲ್ಲಿನ ಮೊದಲ ಹೆಣ್ಣು ಮಗುವಿನ ಹೆಸರಲ್ಲಿ 19,300 ರೂ., ಎರಡನೇ ಹೆಣ್ಣು ಮಗುವಿನ ಹೆಸರಲ್ಲಿ 18,350 ರೂ. ಮೊತ್ತವನ್ನು ಸರಕಾರ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡುತ್ತದೆ. 18 ವರ್ಷ ಪೂರ್ಣಗೊಂಡ ಅನಂತರ
ಹೆಣ್ಣು ಮಕ್ಕಳು 1 ಲ.ರೂ. ಪಡೆಯ ಬಹುದು. ಆರ್ಥಿಕ ಸಹಾಯವನ್ನು ಎಲ್ಐಸಿ ಸಹಯೋಗದೊಂದಿಗೆ ವಿತರಿಸಲಾಗುತ್ತಿದೆ.
ತ್ತೈಮಾಸಿಕ ಅನುದಾನ
ಫಲಾನುಭವಿಗಳ ನೋಂದಣಿ ಆಧಾರದ ಮೇಲೆ ಪ್ರತಿ ತ್ತೈಮಾಸಿಕಕ್ಕೆ ಅನುದಾನವನ್ನು ಎಲ್ಐಸಿಗೆ ನೀಡಿ ಬಾಂಡ್ ಮುದ್ರಿಸಿ ಫಲಾನುಭವಿಗಳಿಗೆ ನೀಡಲಾಗುತ್ತದೆ. ಹೆಣ್ಣು ಮಗು (ಫಲಾನುಭವಿ) 15ನೇ ವರ್ಷ ತಲು
ಪಿದ ಅನಂತರ ಎಸೆಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚುವರಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ನಿಶ್ಚಿತ ಠೇವಣಿ ಬಾಂಡ್ ಅನ್ನು ಅಂಗೀಕೃತ ಬ್ಯಾಂಕ್ಗಳಲ್ಲಿ ಅಡಮಾನವಿರಿಸಿ ಗರಿಷ್ಠ 50,000 ರೂ. ಸಾಲ ಪಡೆಯಬಹುದು.
ತಾಂತ್ರಿಕ ಸಮಸ್ಯೆಯಿಂದ ಬಾಂಡ್ ವಿತರಣೆ ವಿಳಂಬ
ಭಾಗ್ಯಲಕ್ಷ್ಮೀ ಬಾಂಡ್ಗಳು ಸಕಾಲದಲ್ಲಿ ದೊರಕುತ್ತಿಲ್ಲ ಎನ್ನುವ ಆರೋಪವಿದೆ. ಆದರೆ ಇಲಾಖೆ ಅಧಿಕಾರಿ ನೀಡುವ ಮಾಹಿತಿ ಪ್ರಕಾರ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗುತ್ತಿದೆ.
ಜಿಲ್ಲೆಯಲ್ಲಿ ಭಾಗ್ಯ ಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಸರಿಯಾದ ಸಮಯದಲ್ಲಿ ಬಾಂಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
– ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ
ದ.ಕ. ಜಿಲ್ಲೆಯಲ್ಲಿ ಸಕಾಲದಲ್ಲಿ ಬಾಂಡ್ ವಿತರಣೆಯಾಗುತ್ತಿದೆ.
ಸರಕಾರ ಫಲಾನುಭವಿಗಳ ನೋಂದಣಿ ಆಧಾರದ ಮೇಲೆ ಪ್ರತಿ ತ್ತೈಮಾಸಿಕಕ್ಕೆ ಅನುದಾನವನ್ನು ಎಲ್ಐಸಿ ಸಂಸ್ಥೆಗೆ ನೀಡಿ ಬಾಂಡ್ ಮುದ್ರಿಸಿ ಫಲಾನುಭವಿಗಳಿಗೆ ನೀಡುತ್ತಿದೆ.
– ಸುಂದರ ಪೂಜಾರಿ,
ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ