“ಪರೀಕ್ಷೆಗೆ ವ್ಯವಸ್ಥಿತ ಪೂರ್ವ ಸಿದ್ಧತೆಯಿಂದ ಉತ್ತಮ ಫಲಿತಾಂಶ’
ಶಂಕರಪುರ : ಪರೀಕ್ಷಾ ಪೂರ್ವ ಸಿದ್ಧತೆ, ವೃತ್ತಿಪರ ಶಿಕ್ಷಣಕ್ಕೆ ಇರುವ ಅವಕಾಶ; ಮಾಹಿತಿ ಕಾರ್ಯಾಗಾರ
Team Udayavani, Feb 27, 2020, 5:34 AM IST
ಕಟಪಾಡಿ: ವಿದ್ಯಾರ್ಥಿಯ ಜೀವನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಎನ್ನುವುದು ಪ್ರಮುಖ ಘಟ್ಟವಾಗಿದ್ದು, ಸಾಕಷ್ಟು ಪೂರ್ವಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಂಡಾಗ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಹೇಳಿದರು.
ಅವರು ಶಂಕರಪುರ ರೋಟರಿ ಕ್ಲಬ್ ವತಿಯಿಂದ ರೋಟರಿ ಸಭಾಭವನದಲ್ಲಿ ಸರ್ವ ಶಿಕ್ಷಣ ವ್ಯಾಪಿ ಯೋಜನೆ ಮತ್ತು ವೃತ್ತಿ ಮಾರ್ಗದರ್ಶನ ಪುಸ್ತಕಗಳ ಹಸ್ತಾಂತರ ಯೋಜನೆಯಡಿಯಲ್ಲಿ ಇನ್ನಂಜೆ ಎಸ್ವಿಎಚ್ ಪ.ಪೂ.ಕಾಲೇಜು ಹಾಗೂ ಶಂಕರಪುರ ಸೈಂಟ್ ಜೋನ್ಸ್ ಪ್ರೌಢ ಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ಸಿದ್ಧತೆ ಮತ್ತು ಭವಿಷ್ಯದಲ್ಲಿ ಕೈಗೊಳ್ಳಬಹುದಾದ ವೃತ್ತಿಪರ ಶಿಕ್ಷಣಕ್ಕೆ ಇರುವ ಅವಕಾಶಗಳ ಬಗ್ಗೆ ಏರ್ಪಡಿಸಿದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಅನುಕರಣೆಗೆ ಒತ್ತು ನೀಡದೆ ತಮ್ಮಲ್ಲಿರುವ ವಿಶೇಷ ಸಾಮರ್ಥ್ಯ ಬಳಸಿಕೊಂಡು, ಸ್ವಂತಿಕೆಯ ಜೊತೆಗೆ ಸಮಾಜಕ್ಕೆ ಹೊಸತನ ನೀಡುವ ನಿಟ್ಟಿನಲ್ಲಿ ಸಾಧನಾಶೀಲರಾಗಿ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಸುವ ಕಾರ್ಯ ಮಾಡುವಂತೆ ಕರೆ ನೀಡಿದರು. ರೋಟರಿ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಮಾರ್ಗದರ್ಶಿ ಕಾರ್ಯಕ್ರಮಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಲಿದೆ, ಇದರ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷ ಸಂದೀಪ್ ಬಂಗೇರ ವಹಿಸಿದ್ದರು.ವೇದಿಕೆಯಲ್ಲಿ ಇನ್ನಂಜೆ ಎಸ್ವಿಎಚ್ ಪ್ರೌಢ ಶಾಲಾ ಮುಖ್ಯಶಿಕ್ಷಕ ನಟರಾಜ್ ಉಪಾಧ್ಯಾಯ, ವಿದ್ಯಾರ್ಥಿ ನಾಯಕರುಗಳಾದ ರೋಹಿತ್, ಅರುಣ್, ಸೈಂಟ್ ಜೋನ್ಸ್ ಪ್ರೌಢ ಶಾಲೆಯ ಪ್ರತೀಕ್ಷಾ, ನಿವೃತ್ತ ಉಪನ್ಯಾಸಕ ಯು.ನಂದನ್ಕುಮಾರ್, ಶಿಕ್ಷಕರಾದ ಯಶವಂತ್ ಇನ್ನಂಜೆ, ಜೆಸಿಂತಾ, ಶಶಿಕಲಾ ಶಂಕರಪುರ, ರೋಟರಿ ಸದಸ್ಯರಾದ ವಿಕ್ಟರ್ವಾಜ್, ಅನಿಲ್ ಡೇಸಾ, ಉಪಸ್ಥಿತರಿದ್ದರು. ರಾ ಸಂದೀಪ್ ಬಂಗೇರ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಜೋನ್ ರೊಡ್ರಿಗಸ್ ವಂದಿಸಿದರು.
ಉತ್ತಮ ಭವಿಷ್ಯ
ಸಮಯ ಪ್ರಜ್ಞೆಯೊಂದಿಗೆ ನಿರ್ದಿಷ್ಟಗುರಿ, ನಿರಂತರ ಅಧ್ಯಯನ, ಸತತ ಪರಿಶ್ರಮವಿದ್ದಾಗ ಯಶಸ್ಸು ಸಾಧ್ಯ. ಭವಿಷ್ಯದ ಶಿಕ್ಷಣಕ್ಕೆ ಇದು ಆರಂಭಿಕ ಹೆಜ್ಜೆಯಾಗಿದ್ದು ವಿದ್ಯಾರ್ಥಿಯ ಆಸಕ್ತಿಯ ವಿಷಯದ ಅಧ್ಯಯನಕ್ಕೆ ಅವಕಾಶ ನೀಡಿದ್ದಲ್ಲಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಬಿ.ಪುಂಡಲೀಕ ಮರಾಠೆ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್