ಗೋಪಾಲಪುರ ವಾರ್ಡ್:ಶುಚಿತ್ವ ಕೆಡಿಸುತ್ತಿರುವ ಕಿಡಿಗೇಡಿಗಳು
Team Udayavani, May 28, 2019, 6:10 AM IST
ಉಡುಪಿ: ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡಿ ಕೆಲ ಕಿಡಿಗೇಡಿಗಳು ಹಲವಾರು ತಿಂಗಳಿಂದ ಗೋಪಾಲಪುರ ನಾಲ್ಕನೇ ಮುಖ್ಯರಸ್ತೆಯ ಪಕ್ಕದಲ್ಲಿಯೇ (ನೀರು ಹರಿಯುವ ತೋಡಿನಲ್ಲಿ) ತ್ಯಾಜ್ಯಗಳನ್ನು ಸುರಿಯುತ್ತಿದ್ದಾರೆ.
ಪ್ಲಾಸ್ಟಿಕ್ ಬಾಟಲಿ, ಒಡೆದ ಟ್ಯೂಬ್ ಲೈಟ್ಗಳ ಚೂರುಗಳು ರಸ್ತೆಯಲ್ಲಿ ಹರಡಿಕೊಂಡಿವೆ.
ಕೊಳೆತ ಮಾಂಸ, ತರಕಾರಿ ಮುಂತಾದ ಆಹಾರ ಪದಾರ್ಥಗಳು, ಪಾದರಕ್ಷೆ, ಮದ್ಯದ ಬಾಟಲಿ, ಬ್ಲೇಡ್, ಔಷಧಿ ಬಾಟಲಿ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಪ್ಲಾಸ್ಟಿಕ್ನಲ್ಲಿ ಸುತ್ತಿ ಇಲ್ಲಿ ಎಸೆಯಲಾಗುತ್ತಿದೆ.
ಬೀದಿ ನಾಯಿಗಳ ಕಾಟ
ಮುಂಜಾನೆ ವಾಯುವಿಹಾರದ ನೆಪದಲ್ಲಿ ಹಾಗೂ ರಾತ್ರಿ ಸ್ಥಳೀಯರ ಕಣ್ಣು ತಪ್ಪಿಸಿ ತ್ಯಾಜ್ಯಗಳನ್ನು ಸುರಿದು ಹೋಗುತ್ತಾರೆ. ಈ ತ್ಯಾಜ್ಯಗಳ ರಾಶಿಯಿಂದ ಆಹಾರ ಹುಡುಕಲು ಬರುವ ಬೀದಿನಾಯಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ರಸ್ತೆಯ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸಂಚರಿಸುವಾಗ ಬೀದಿ ನಾಯಿಗಳು ಬೆನ್ನಟ್ಟುವ ಘಟನೆಗಳೂ ಸಂಭವಿಸಿವೆ.
ನಗರಸಭೆಯು ಗೋಪಾಲಪುರ ಸೇರಿದಂತೆ ಬಹುತೇಕ ವಾರ್ಡುಗಳಲ್ಲಿ ವ್ಯವಸ್ಥಿತವಾಗಿ ಕಸದ ನಿರ್ವಹಣೆ ಮಾಡುತ್ತಿದ್ದರೂ ಕೆಲವರು
ಇಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆ. ಈ ಬಗ್ಗೆ ನಗರಸಭೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕ್ರಿಮಿನಲ್ ಮೊಕದ್ದಮೆ?
ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಈ ಸ್ಥಳದಲ್ಲಿ ತ್ಯಾಜ್ಯ ಎಸೆಯುವ ವ್ಯಕ್ತಿಗಳನ್ನು ಕಾರ್ಯಾಚರಣೆ ಮೂಲಕ ಪತ್ತೆಹಚ್ಚಿ ಅವರ ಭಾವಚಿತ್ರವನ್ನು ಉಡುಪಿಯ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಅಂತವರ ವಿರುದ್ಧ ಸಾರ್ವಜನಿಕ ಸ್ಥಳಗಳ ಶುಚಿತ್ವಕ್ಕೆ ಧಕ್ಕೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಕ್ಲೀನ್ ಉಡುಪಿ ಪ್ರಾಜೆಕ್ಟ್ ತಿಳಿಸಿದೆ.
ದೂರು ನೀಡಲು ನಿರ್ಧಾರ
ನಗರಸಭೆಯವರು ಸರಿಯಾದ ಸಮಯಕ್ಕೆ ತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ರಾತ್ರಿ ಹೊತ್ತು ಇಲ್ಲಿ ಕಸ ತಂದು ಎಸೆಯುತ್ತಿದ್ದಾರೆ. ಈ ಬಗ್ಗೆ ಗಮನಕ್ಕೆ ಬಂದಿದ್ದು, ನಗರಸಭೆಗೆ ದೂರು ನೀಡಲು ನಿರ್ಧರಿಸಿದ್ದೇವೆ.
– ಮಂಜುಳಾ ವಿ.ನಾಯಕ್, ಗೋಪಾಲಪುರ ವಾರ್ಡ್ ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ