ಬೆಳ್ಳಾಲ ಸರಕಾರಿ ಆಸ್ಪತ್ರೆ : ವಾರದೊಳಗೆ ನೂತನ ಸುಸಜ್ಜಿತ ಕಟ್ಟಡ ಲೋಕಾರ್ಪಣೆ


Team Udayavani, Jul 4, 2019, 5:39 AM IST

belala

ಕೆರಾಡಿ: ಬೆಳ್ಳಾಲದಲ್ಲಿರುವ ಸರಕಾರಿ ಆಯುರ್ವೇದ ಆಸ್ಪತ್ರೆಗೆ ಹೊಸದಾಗಿ ಸುಸಜ್ಜಿತ ಕಟ್ಟಡ ಸಿದ್ಧವಾಗಿದ್ದು, ಒಂದು ವಾರದೊಳಗೆ ಈ ನೂತನ ಕಟ್ಟಡದ ಲೋಕಾರ್ಪಣೆ ನಡೆಯುವ ಸಾಧ್ಯತೆಯಿದೆ. ಸಾಲು – ಸಾಲು ಚುನಾವಣಾ ನೀತಿ ಸಂಹಿತೆಯಿಂದಾಗಿ ಕಟ್ಟಡದ ಉದ್ಘಾಟನೆ ವಿಳಂಬವಾಗಿತ್ತು.

ಕೆರಾಡಿ ಗ್ರಾ.ಪಂ. ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಸರಕಾರಿ ಆಯುರ್ವೇದ ಆಸ್ಪತ್ರೆ ಕಾರ್ಯಾಚರಿಸುತ್ತಿದೆ. ಆದರೆ ಹಲವು ವರ್ಷಗಳಿಂದ ಹಳೆಯ ಕಟ್ಟಡದಲ್ಲಿಯೇ ಇದ್ದುದ್ದರಿಂದ ಜಿಲ್ಲಾ ಪಂಚಾಯತ್‌ನಿಂದ 15 ಲಕ್ಷ ರೂ. ಅನುದಾನ ನೂತನ ಕಟ್ಟಡಕ್ಕೆ ಮಂಜೂರಾಗಿದ್ದು, ಅದೀಗ ಕಾಮಗಾರಿ ಪೂರ್ಣಗೊಂಡಿದೆ.

ನೀತಿ ಸಂಹಿತೆ ಅಡ್ಡಿ

ಜಿ.ಪಂ.ನಿಂದ ಮಂಜೂರಾದ 15 ಲಕ್ಷ ರೂ. ವೆಚ್ಚದಲ್ಲಿ ಕಳೆದ ವರ್ಷ ಕಾಮಗಾರಿ ಆರಂಭಗೊಂಡಿದ್ದು, ಡಿಸೆಂಬರ್‌ – ಜನವರಿಯಲ್ಲಿ ಕಾಮಗಾರಿ ಮುಗಿದಿದೆ. ಆದರೆ ಆ ಬಳಿಕ ಉದ್ಘಾಟನೆಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಡ್ಡಿಯಾಗಿದೆ. ಈಗ ಎಲ್ಲ ಅಡೆ – ತಡೆಗಳು ನಿವಾರಣೆಯಾಗಿದ್ದು, ಒಂದು ವಾರದೊಳಗೆ ಸರಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಸುಸಜ್ಜಿತವಾದ ಕಟ್ಟಡ ಊರಿನ ಜನರ ಸೇವೆಗೆ ತೆರೆದುಕೊಳ್ಳಲಿದೆ.

ಏನೆಲ್ಲ ಇರಲಿದೆ?

ಈಗಾಗಲೇ ಹಳೆಯ ಕಟ್ಟಡದಲ್ಲಿ ಓಪಿಡಿ ಸೇವೆಯಿದ್ದು, ಅದು ಇಲ್ಲಿಯು ಮುಂದುವರಿಯಲಿದೆ. ಹೆಚ್ಚುವರಿಯಾಗಿ 2 ಕೋಣೆಗಳಿರಲಿದೆ. ಬರುವಂತಹ ರೋಗಿಗಳಿಗೆ ಕುಳಿತು ವಿಶ್ರಾಂತಿ ಪಡೆಯಲು ವ್ಯವಸ್ಥೆಯಿದೆ. ಔಷಧಿ ಇಡಲು ರ್ಯಾಕರ್ ವ್ಯವಸ್ಥೆಯಿದೆ. ಈಗ ಅಗತ್ಯವಾಗಿ ಬೇಕಾದ ಎಲ್ಲ ರೀತಿಯ ಔಷಧಿಗಳನ್ನು ದಾಸ್ತಾನು ಇರಿಸಲಾಗಿದೆ. ಔಷಧಿ ಕೊರತೆಯೇನಿಲ್ಲ. ಬೆಳ್ಳಾಲ, ಕೆರಾಡಿ ಭಾಗದಿಂದ ದಿನಕ್ಕೆ 35 – 40 ಮಂದಿ ಈ ಆಸ್ಪತ್ರೆಗೆ ಚಿಕಿತ್ಸೆ, ತಪಾಸಣೆಗಾಗಿ ಬರುತ್ತಾರೆ. ಮಳೆಗಾಲದಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಿದೆ ಎನ್ನುತ್ತಾರೆ ಇಲ್ಲಿನ ವೈದ್ಯರು.

6 ಸರಕಾರಿ ಆಯುರ್ವೇದ ಆಸ್ಪತ್ರೆ

ಕುಂದಾಪುರ ಹಾಗೂ ಬೈಂದೂರು ಎರಡೂ ತಾಲೂಕಿನಲ್ಲಿ ಒಟ್ಟು 6 ಸರಕಾರಿ ಆಯುರ್ವೇದ ಆಸ್ಪತ್ರೆಗಳು ಮಾತ್ರ ಇವೆ. ಅಮಾಸೆಬೈಲು, ಗುಲ್ವಾಡಿ, ಕಾಳಾವರ, ನಾವುಂದ ಕಾಲ್ತೂಡು, ಬೆಳ್ಳಾಲದಲ್ಲಿ ಸರಕಾರಿ ಆಯುರ್ವೇದ ಆಸ್ಪತ್ರೆ ಕಾರ್ಯಾಚರಿಸುತ್ತಿದೆ. ಈಗೀಗ ಆಯುರ್ವೇದ ಔಷಧಿಗೆ ಎಲ್ಲೆಡೆ ಭಾರೀ ಬೇಡಿಕೆ ಹೆಚ್ಚುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಕೂಡ ಸರಕಾರಿ ಆಯುರ್ವೇದ ಆಸ್ಪತ್ರೆಗಳನ್ನು ತೆರೆಯುವ ಅಗತ್ಯವಿದೆ.
ಸಿಬಂದಿ ಕೊರತೆ

ಈಗ ಇಲ್ಲಿ ಒಬ್ಬ ವೈದ್ಯರು ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಸಿಬಂದಿ ಕೆಲಸ ಮಾಡುತ್ತಿದ್ದಾರೆ. ಹೊಸದಾದ ಸುಸಜ್ಜಿತ ಆಸ್ಪತ್ರೆಗೆ ಸಿಬಂದಿ ಕೊರತೆಯಿದ್ದು, ಅದನ್ನು ಸಂಬಂಧಪಟ್ಟವರು ನೇಮಕ ಮಾಡಿಕೊಡಲಿ. ಉತ್ತಮವಾದ ನೂತನ ಕಟ್ಟಡದಲ್ಲಿ ಜನರಿಗೆ ಬೇಕಾದ ಅಗತ್ಯ ಎಲ್ಲ ಸೌಕರ್ಯಗಳು ಸಿಗುವಂತಾಗಲಿ ಎನ್ನುವುದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.