ಅಜೆಕಾರು: ಕುಸಿಯುತ್ತಿದ್ದ ಶಾಲೆಯ ಕಟ್ಟಡ ತೆರವುಗೊಳಿಸಲು ಮುಂದಾದ ಶಿಕ್ಷಣ ಇಲಾಖೆ
Team Udayavani, May 22, 2019, 6:10 AM IST
ಅಜೆಕಾರು: ಅಜೆಕಾರು ಪೇಟೆಯಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡ ತೆರವುಗೊಳಿಸಲು ಶಿಕ್ಷಣ ಇಲಾಖೆ ಕೊನೆಗೂ ಮುಂದಾಗಿದೆ.
30ವರ್ಷಗಳ ಹಿಂದೆ ಈ ಕಟ್ಟಡದಿಂದ ಶಾಲೆ ಸ್ಥಳಾಂತರಗೊಂಡಿತ್ತು. ಅನಂತರದ ದಿನಗಳಲ್ಲಿ ದುರ್ಬಲಗೊಂಡಿರುವ ಈ ಕಟ್ಟಡವು ಹಂತಹಂತವಾಗಿ ಕುಸಿದು ತೀರಾ ಅಪಾಯಕಾರಿ ಸ್ಥಿತಿಯಲ್ಲಿತ್ತು. ಈ ಬಗ್ಗೆ ಉದಯವಾಣಿ ನಿರಂತರ ಸಚಿತ್ರ ವರದಿ ಪ್ರಕಟಿಸಿತ್ತು. ಇದೀಗ ಶಿಕ್ಷಣ ಇಲಾಖೆ ಕಟ್ಟಡ ತೆರವುಗೊಳಿಸಲು ಮುಂದಾಗಿರುವುದು ಸ್ಥಳೀಯರಲ್ಲಿ ಸಂತಸ ತಂದಿದೆ.
ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಅಜೆಕಾರು ಅಂಗನವಾಡಿ ಕೇಂದ್ರವಿದ್ದು ಬಹಳಷ್ಟು ಅಪಾಯಕಾರಿಯಾಗಿತ್ತು. ಈ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸ ದಿರಲು ನಿರ್ಣಯಿಸಿದ್ದರು.
ಕಟ್ಟಡದ ಮೇಲ್ಛಾವಣಿ ಸಂಪೂರ್ಣ ಹಾನಿಗೊಂಡು ಮಳೆಯ ನೀರು ಕಟ್ಟಡದ ಮಣ್ಣಿನ ಗೋಡೆಯ ಮೇಲೆ ಬಿದ್ದು ನಿರಂತರ ಕಟ್ಟಡದ ಮಣ್ಣು ಕುಸಿ ಯುತ್ತಿತ್ತು. ಆದರೆ ಈಗ ಶಿಕ್ಷಣ ಇಲಾಖೆ ದುರ್ಬಲ ಕಟ್ಟಡ ತೆರವುಗೊಳಿಸಲು ಮುಂದಾಗಿರುವುದರಿಂದ ಮಳೆಗಾಲದಲ್ಲಿ ಅಂಗನವಾಡಿಗೆ ಸಮಸ್ಯೆ ಎದುರಾಗದು ಎನ್ನುವುದು ಸ್ಥಳೀಯರ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ