“ಬರಗಾಲ ನಿಭಾಯಿಸಲು ಸರಕಾರ ವಿಫಲ’
Team Udayavani, May 10, 2019, 6:08 AM IST
ಉಡುಪಿ: ರಾಜ್ಯ ದಲ್ಲಿ ಸೃಷ್ಟಿಯಾಗಿರುವ ಭೀಕರ ಬರಗಾಲವನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳು ವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಆದರೂ ಸರಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂತಹ ಕೆಟ್ಟ ಸರಕಾರವನ್ನು ಈ ಹಿಂದೆ ನೋಡಿರ ಲಿಲ್ಲ. ರಾಜ್ಯದ ಜನತೆ ಕಂಗೆಟ್ಟಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದಲ್ಲಿ ಜಿಲ್ಲಾ ಡಳಿತಗಳು ಸ್ಥಗಿತವಾಗಿವೆ ಎಂದರು.
ಆಯೋಗ ಅಡ್ಡಿಯಲ್ಲ
ಬರನಿರ್ವಹಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚುನಾ ವಣ ಆಯೋಗ ಅನುಮತಿ ನೀಡಿದೆ. ವಿವಿಧ ನಿಗಮ, ಮಂಡಳಿ, ಸಮಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸುವುದಕ್ಕೂ ಒಪ್ಪಿಗೆ ನೀಡಿದೆ. ಆದರೆ ಕುಡಿಯುವ ನೀರು, ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಮೊದಲಾದ ಉದ್ದೇಶಗಳಿಗೂ ಗ್ರಾ.ಪಂ.ಗಳಲ್ಲಿ ಸಭೆ ನಡೆಸಲು ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಪೂಜಾರಿ ಆರೋಪಿಸಿದರು.
ಅಧಿಕಾರವಿಲ್ಲದ 8 ತಿಂಗಳುಗಳು
ಅಧ್ಯಕ್ಷ ಸ್ಥಾನ ಜೆಡಿಎಸ್/ಕಾಂಗ್ರೆಸ್ಗೆ ಸಿಗಬೇಕೆಂಬ ಉದ್ದೇಶದಿಂದ ಮೀಸಲಾತಿ ಪಟ್ಟಿಯನ್ನು ಬದಲಾಯಿಸಿ ನ್ಯಾಯಾಲಯಕ್ಕೆ ಅಫಿದವಿತ್ ಸಲ್ಲಿಸಿದ ಪರಿಣಾಮ ಉಡುಪಿ ನಗರಸಭೆ ಸೇರಿದಂತೆ ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳಾದರೂ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ. ಇದರಿಂದಾಗಿ ಆಡಳಿತ ಸಮರ್ಪಕವಾಗಿ ನಡೆಯದೆ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಶ್ರೀನಿವಾಸ ಪೂಜಾರಿ ದೂರಿದರು.
ಪಂಚಕರ್ಮ, ಪಂಚತಂತ್ರದ ಜತೆಗೆ…
“ನೀವು ಆರೋಗ್ಯ ಸುಧಾರಣೆಗೆ ಪಂಚಕರ್ಮ ಚಿಕಿತ್ಸೆ ಮಾಡಿ. ಸರಕಾರ ಉಳಿಸಲು ಪಂಚತಂತ್ರಗಳನ್ನು ಮಾಡಿ. ಆದರೆ ಅದರೊಂದಿಗೆ ಬರ ನಿರ್ವಹಣೆಗೆ ಸಮರೋಪಾದಿ ಕೆಲಸ ಕೂಡ ಮಾಡಿ’ ಎಂದು ಮುಖ್ಯಮಂತ್ರಿಯವರಿಗೆ ಶ್ರೀನಿವಾಸ ಪೂಜಾರಿ ಅವರು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ